Homeಮುಖಪುಟಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಸೌಲಭ್ಯಗಳ ಕೊರತೆಯಿಂದಾಗಿ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿಲ್ಲ. ಅನೇಕ ವಿದ್ಯಾರ್ಥಿಗಳು ವ್ಯಾಸಂಗವನ್ನು ತೊರೆದಿದ್ದಾರೆ ಎಂದು ಎಐಎಸ್‌ಎ ಕಾರ್ಯದರ್ಶಿ ಕುಂದು ಹೇಳಿದ್ದಾರೆ.

- Advertisement -
- Advertisement -

2020ರ ಬ್ಯಾಚಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೆರೆದು, ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಜವಹರಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಒತ್ತಾಯಿಸಿದೆ. ವಿದ್ಯಾರ್ಥಿಗಳ ಡೀನ್ ಕಚೇರಿ ಎದುರು ಜೆಎನ್‌ಯುಎಸ್‌ಯು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ.

ಸೆಪ್ಟೆಂಬರ್‌ 6ರಿಂದ ಮೊದಲ ಹಂತದ ತರಗತಿಗಳನ್ನು ಆರಂಭಿಸುವುದಾಗಿ ಜೆಎನ್‌ಯು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಡಿಸೆಂಬರ್‌ 31ರೊಳಗೆ ಸಂಶೋಧನಾ ಪ್ರಬಂಧವನ್ನು ಸಲ್ಲಿಸಬೇಕಿರುವ ಸಂಶೋಧನಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿತ್ತು ಎಂದು ಸಂಶೋಧನಾ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೋಧನಾ ಕಲಿಕಾ ಚಟುವಟಿಕೆಗಳು ಆನ್ಲೈನ್‌ನಲ್ಲೇ ಮುಂದುವರಿಯಲಿವೆ. ಡಾ.ಬಿ.ಆರ್.ಅಂಬೇಡ್ಕರ್‌ ಕೇಂದ್ರೀಯ ಗ್ರಂಥಾಲಯ ಹೊರತುಪಡಿಸಿ, ಇತರ ಕೇಂದ್ರೀಯ ಗ್ರಂಥಾಲಯಗಳು, ತರಗತಿಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿತ್ತು.

ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಕೋವಿಡ್‌ ನೆಗೆಟಿವ್‌ ವರದಿ (ಆರ್ಟಿಪಿಸಿಆರ್) ತಂದು, ಸ್ವಯಂ ಘೋಷಣಾ ಪತ್ರದೊಂದಿಗೆ ಸಲ್ಲಿಸಬೇಕು ಎಂದು ವಿವಿಯ ಆಡಳಿತ ವಿಭಾಗ ಹೇಳಿದೆ. “ವಿದ್ಯಾರ್ಥಿಗಳ ಒತ್ತಡದಿಂದಾಗಿ ಕೇವಲ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಅರ್ಥಪೂರ್ಣ ರೀತಿಯಲ್ಲಿ ಕ್ಯಾಂಪಸ್‌ಗೆ ಅವಕಾಶ ನೀಡುವುದೆಂದರೆ ಸಂಶೋಧನಾ ಪ್ರಬಂಧ ಸಲ್ಲಿಸಬೇಕಾಗಿರುವ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ ನೀಡುವುದೇ ಆಗಿದೆ” ಎಂದು ಎಐಎಸ್‌ಎ ಕಾರ್ಯದರ್ಶಿ, ಎಂಫಿಎಲ್ ವಿದ್ಯಾರ್ಥಿ ಮಧುರಿಮಾ ಕುಂದು ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್‌ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಕುಂದು, “2020ರ ಬ್ಯಾಚಿನ ವಿದ್ಯಾರ್ಥಿಗಳು ಒಂದು ವರ್ಷ ಇಲ್ಲಿ ಪೂರೈಸಿದ್ದಾರೆ. ಕ್ಯಾಂಪಸ್‌ ಪ್ರವೇಶಕ್ಕಾಗಿ ಅವರು ಒಮ್ಮೆಯಾದರೂ ಕೋರಿಕೆ ಸಲ್ಲಿಸಿಲ್ಲ. ಆನ್ಲೈನ್‌ ತರಗತಿಗಳಲ್ಲಿ ಅವರು ಹಾಜರಾಗುತ್ತಿಲ್ಲ. ಅವರಿಗೆ ಹಾಸ್ಟೆಲ್‌ಗಳನ್ನೂ ನೀಡಲಾಗಿಲ್ಲ. ಎಷ್ಟು ದಿನಗಳ ಕಾಲ ಶೈಕ್ಷಣಿಕ ಚಟುವಟಿಕೆಗಳನ್ನು ಗೂಗಲ್ ಮೀಟ್ ನಲ್ಲೇ ನಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಮುಂದುವರಿದು, “ಹಿಂದುಳಿದ ವರ್ಗದಿಂದ ಬಂದ ಹಾಗೂ ತಾಂತ್ರಿಕ ಸೌಲಭ್ಯಗಳಿಲ್ಲದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗೂ ಹಾಜರಾಗುತ್ತಿಲ್ಲ. ಕಲಿಕೆಯಿಂದ ಹೊರಗುಳಿಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಲ್ಲ ಕೋರ್ಸ್‌ಗಳಲ್ಲೂ ಈ ಬೆಳವಣಿಗೆಯಾಗಿದೆ. ಬಹುಶಃ ಸಂಪನ್ಮೂಲದ ಕೊರತೆಯಿಂದಾಗಿ ಆ ವಿದ್ಯಾರ್ಥಿಗಳು ವ್ಯಾಸಂಗವನ್ನು ಮುಂದವರಿಸಲು ಸಾಧ್ಯವಾಗುತ್ತಿಲ್ಲ ಎನಿಸುತ್ತದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...