Homeಮುಖಪುಟಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ - ದಸಸಂ ಖಂಡನೆ

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ರವರ ನೇತೃತ್ವದಲ್ಲಿ ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ.

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು ಅವರ ಪೋಷಕರ ಮೇಲೆ  ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಸೆಪ್ಟಂಬರ್ 04 ರಂದು ನಡೆದಿದೆ.

ಟಿ.ಎನ್ ಗೌರಿ, ಟಿ.ಎಂ ಯಶಸ್ವಿನಿ ಹಾಗೂ ಭಾವನ ಎಂಬ ಹೆಣ್ಣು ಮಕ್ಕಳು ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೋಗುವಾಗ ನಾಯಕ ಸಮುದಾಯದಕ್ಕೆ ಸೇರಿದ ಗೌನಿಪಲ್ಲಿಯ ಪವನ್ ಮತ್ತು ಕೊಂಡಾಮುರಿಯ ಬಾಬೂ ನಾಯಕ್ ಎಂಬುವರು ಪ್ರತಿದಿನ ಚುಡಾಯಿಸುವುದು, ಮಾನಸಿಕ ಕಿರುಕುಳ ನೀಡಿವುದು ಮಾಡುತ್ತಿದ್ದರು. ಈ ಕುರಿತು ಆ ಯುವಕರಿಗೆ ಹೆಣ್ಣುಮಕ್ಕಳ ಪೋಷಕರು ಬುದ್ದಿವಾದ ಹೇಳಿದ್ದರು. ಈ ಕುರಿತು ಮಾತಿಗೆ ಮಾತು ಬೆಳೆದಿತ್ತು. ಅದಕ್ಕೆ ಕುಪಿತಗೊಂಡ ಯುವಕರು ಮತ್ತು ಅವರ ಪೋಷಕರು ಸೇರಿ ಸೆಪ್ಟಂಬರ್ ನಾಲ್ಕರಂದು ಕೊಂಡಾಮುರಿ ಗೇಟ್ ಬಳಿ ಆ ಹೆಣ್ಣು ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಾರೆ. ತಾಡಿಗೋಳ್ ಕ್ರಾಸ್‌ನಲ್ಲಿ ಗಿರೀಶ್ ಮತ್ತು ರೌಡಿ ಶೀಟರ್ ಜಿಮ್ ಅನಿಲ್ ಕುಮಾರ್ ಎಂಬುವವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಇದೆಲ್ಲವೂ ವಿಡಿಯೋ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಶ್ನಿಸಿದ ಅಭಿಷೇಕ್, ನವೀನ್ ಮತ್ತು ಶ್ರೀನಾಥ್ ಎಂಬುವವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಊರಿನವರೆಲ್ಲಾ ಸೇರಿಕೊಂಡು ಅಶ್ಲೀಲವಾಗಿ ಬೈದು ಮನಬಂದಂತೆ ಥಳಿಸಿದ್ದಾರೆ. ಹೆಣ್ಣು ಮಕ್ಕಳು ಸೇರಿದಂತೆ ಗಾಯಗೊಂಡ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದ್ದು, ಎರಡೂ ಕಡೆಯವರ ಮೇಲೂ FIR ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ಶ್ರೀನಿವಾಸಪುರ ತಾಲ್ಲುಕು ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳನ್ನು ಬಂಧಿಸಿಬೇಕು, ಸಂತ್ರಸ್ತರ ಮೇಲಿನ FIR ರದ್ದುಗೊಳಿಸಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದೆ.

ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಮೂರು ಹೆಣ್ಣು ಮಕ್ಕಳು ಸೇರಿದಂತೆ ಆರು ಜನರು ಪೆಟ್ಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರು ಸಂತ್ರಸ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಲಾದರೂ ಪೊಲೀಸರು ಸಮರ್ಪಕ ಕ್ರಮ ತೆಗೆದುಕೊಳ್ಳದಿದ್ದರೆ ಸೆಪ್ಟಂಬರ್ 14 ರಂದು ಬೃಹತ್ ಜಾಥಾ ನಡೆಸಲಾಗುವುದು ಎಂದು ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ ತಿಳಿಸಿದ್ದಾರೆ.

ಇಂದು ಅವರ ನೇತೃತ್ವದಲ್ಲಿ ದಸಸಂ ಸಂಘಟನೆಯು ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ. ಅಲ್ಲದೇ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ಅನಿಲ್‌ ಕುಮಾರ್ ಎಂಬಾತನನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದೆ.

ದಸಸಂ ತಂಡವು ಜಿಲ್ಲಾಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲಾಗಿದೆ. ಈ ಸಂದರ್ಭದಲ್ಲಿ ದಲಿತ ಸಂಘ‍ರ್ಷ ಸಮಿತಿಯ ವಿ.ಮುನಿಯಪ್ಪ, ಪಿ. ವಾಸು, ಬಿ.ವೆಂಕಟೇಶ್, ನರಸಿಂಹ ವಿ, ಎಂ ಮೂರ್ತಿ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಹೆಣ್ಣುಮಕ್ಕಳ ಮೇಲಿನ ಈ ಹಲ್ಲೆ ಕಂಡನಾರ್ಹ. ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...