Homeಮುಖಪುಟಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ - ದಸಸಂ ಖಂಡನೆ

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ರವರ ನೇತೃತ್ವದಲ್ಲಿ ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ.

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು ಅವರ ಪೋಷಕರ ಮೇಲೆ  ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಸೆಪ್ಟಂಬರ್ 04 ರಂದು ನಡೆದಿದೆ.

ಟಿ.ಎನ್ ಗೌರಿ, ಟಿ.ಎಂ ಯಶಸ್ವಿನಿ ಹಾಗೂ ಭಾವನ ಎಂಬ ಹೆಣ್ಣು ಮಕ್ಕಳು ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೋಗುವಾಗ ನಾಯಕ ಸಮುದಾಯದಕ್ಕೆ ಸೇರಿದ ಗೌನಿಪಲ್ಲಿಯ ಪವನ್ ಮತ್ತು ಕೊಂಡಾಮುರಿಯ ಬಾಬೂ ನಾಯಕ್ ಎಂಬುವರು ಪ್ರತಿದಿನ ಚುಡಾಯಿಸುವುದು, ಮಾನಸಿಕ ಕಿರುಕುಳ ನೀಡಿವುದು ಮಾಡುತ್ತಿದ್ದರು. ಈ ಕುರಿತು ಆ ಯುವಕರಿಗೆ ಹೆಣ್ಣುಮಕ್ಕಳ ಪೋಷಕರು ಬುದ್ದಿವಾದ ಹೇಳಿದ್ದರು. ಈ ಕುರಿತು ಮಾತಿಗೆ ಮಾತು ಬೆಳೆದಿತ್ತು. ಅದಕ್ಕೆ ಕುಪಿತಗೊಂಡ ಯುವಕರು ಮತ್ತು ಅವರ ಪೋಷಕರು ಸೇರಿ ಸೆಪ್ಟಂಬರ್ ನಾಲ್ಕರಂದು ಕೊಂಡಾಮುರಿ ಗೇಟ್ ಬಳಿ ಆ ಹೆಣ್ಣು ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಾರೆ. ತಾಡಿಗೋಳ್ ಕ್ರಾಸ್‌ನಲ್ಲಿ ಗಿರೀಶ್ ಮತ್ತು ರೌಡಿ ಶೀಟರ್ ಜಿಮ್ ಅನಿಲ್ ಕುಮಾರ್ ಎಂಬುವವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಇದೆಲ್ಲವೂ ವಿಡಿಯೋ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಶ್ನಿಸಿದ ಅಭಿಷೇಕ್, ನವೀನ್ ಮತ್ತು ಶ್ರೀನಾಥ್ ಎಂಬುವವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಊರಿನವರೆಲ್ಲಾ ಸೇರಿಕೊಂಡು ಅಶ್ಲೀಲವಾಗಿ ಬೈದು ಮನಬಂದಂತೆ ಥಳಿಸಿದ್ದಾರೆ. ಹೆಣ್ಣು ಮಕ್ಕಳು ಸೇರಿದಂತೆ ಗಾಯಗೊಂಡ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದ್ದು, ಎರಡೂ ಕಡೆಯವರ ಮೇಲೂ FIR ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ಶ್ರೀನಿವಾಸಪುರ ತಾಲ್ಲುಕು ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳನ್ನು ಬಂಧಿಸಿಬೇಕು, ಸಂತ್ರಸ್ತರ ಮೇಲಿನ FIR ರದ್ದುಗೊಳಿಸಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದೆ.

ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಮೂರು ಹೆಣ್ಣು ಮಕ್ಕಳು ಸೇರಿದಂತೆ ಆರು ಜನರು ಪೆಟ್ಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರು ಸಂತ್ರಸ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಲಾದರೂ ಪೊಲೀಸರು ಸಮರ್ಪಕ ಕ್ರಮ ತೆಗೆದುಕೊಳ್ಳದಿದ್ದರೆ ಸೆಪ್ಟಂಬರ್ 14 ರಂದು ಬೃಹತ್ ಜಾಥಾ ನಡೆಸಲಾಗುವುದು ಎಂದು ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ ತಿಳಿಸಿದ್ದಾರೆ.

ಇಂದು ಅವರ ನೇತೃತ್ವದಲ್ಲಿ ದಸಸಂ ಸಂಘಟನೆಯು ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ. ಅಲ್ಲದೇ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ಅನಿಲ್‌ ಕುಮಾರ್ ಎಂಬಾತನನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದೆ.

ದಸಸಂ ತಂಡವು ಜಿಲ್ಲಾಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲಾಗಿದೆ. ಈ ಸಂದರ್ಭದಲ್ಲಿ ದಲಿತ ಸಂಘ‍ರ್ಷ ಸಮಿತಿಯ ವಿ.ಮುನಿಯಪ್ಪ, ಪಿ. ವಾಸು, ಬಿ.ವೆಂಕಟೇಶ್, ನರಸಿಂಹ ವಿ, ಎಂ ಮೂರ್ತಿ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಹೆಣ್ಣುಮಕ್ಕಳ ಮೇಲಿನ ಈ ಹಲ್ಲೆ ಕಂಡನಾರ್ಹ. ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...