Homeಮುಖಪುಟಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕು: ಬಾಂಬೆ ಹೈಕೋರ್ಟ್

ಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕು: ಬಾಂಬೆ ಹೈಕೋರ್ಟ್

- Advertisement -
- Advertisement -

ನಿಯಮಿತ ಕುಡಿಯುವ ನೀರಿನ ಪೂರೈಕೆ ಮೂಲಭೂತ ಹಕ್ಕಾಗಿದೆ. ಆದರೆ, ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕವೂ ಜನರು ಕುಡಿಯುವ ನೀರನ್ನು ಪಡೆಯಲು ನ್ಯಾಯಾಲಯದ ಬಾಗಿಲು ತಟ್ಟಬೇಕಾಗಿರುವುದು ದುರದೃಷ್ಟಕರ ಎಂದು ಬಾಂಬೆ ಹೈಕೋರ್ಟ್ ಬುಧವಾರ ವಿಷಾದ ವ್ಯಕ್ತಪಡಿಸಿದೆ.

ಥಾಣೆ ಜಿಲ್ಲೆಯ ಭೀವಂಡಿ ಪಟ್ಟಣದ ಕಾಂಬೆ ಹಳ್ಳಿಯ ನಿವಾಸಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಎಸ್.ಜೆ ಕಥಾವಲ್ಲಾ ಮತ್ತು ಮಿಲಿಂದ್ ಜಾಧವ್ ಅವರ ವಿಭಾಗೀಯ ಪೀಠವು ಈ ಹೇಳಿಕೆಗಳನ್ನು ನೀಡಿದೆ.

ಥಾಣೆ ಜಿಲ್ಲಾ ಪರಿಷತ್ ಮತ್ತು ಭೀವಂಡಿ ನಿಜಂಪುರ ಮಹಾನಗರ ಪಾಲಿಕೆಯ ಜಂಟಿ ಸಹಭಾಗಿತ್ವದ STEM ವಾಟರ್ ಡಿಸ್ಟ್ರಿಬ್ಯೂಷನ್ ಮತ್ತು ಇನ್ಫ್ರಾ ಕಂಪನಿಗೆ ಪ್ರತಿದಿನ ಕುಡಿಯುವ ನೀರನ್ನು ಪೂರೈಸಲು ನಿರ್ದೇಶನ ನೀಡುವಂತೆ ಕಾಂಬೆ ಹಳ್ಳಿಯ ನಿವಾಸಿಗಳು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಲೈಂಗಿಕ ಉದ್ದೇಶವಿಲ್ಲದೆ ಮಗುವಿನ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯವಲ್ಲ-ಬಾಂಬೆ ಹೈಕೋರ್ಟ್

ಅರ್ಜಿದಾರರಾದ ಕಾಂಬೆ ಹಳ್ಳಿಯ ನಿವಾಸಿಗಳು, ತಮನೆ ಪ್ರಸ್ತುತ ತಿಂಗಳಿಗೆ ಎರಡು ಬಾರಿ ಮಾತ್ರ ನೀರು ಪೂರೈಸಲಾಗುತ್ತಿದೆ. ಅದೂ ಕೇವಲ ಎರಡು ಗಂಟೆಗಳ ಕಾಲ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ವಾದಿಸಿದರು.

STEM ನ ವ್ಯವಸ್ಥಾಪಕ ನಿರ್ದೇಶಕ ಭೋಸಾಹೇಬ್ ದಾಂಗ್ಡೆ, ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಒಂದು ನಿರ್ದಿಷ್ಟ ಸ್ಥಳದಿಂದ ಅರ್ಜಿದಾರರ ಮನೆಗಳಿಗೆ ನೀರು ವಿತರಿಸುವುದು ಹಳ್ಳಿಯ ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಕಳೆದ ಕೆಲವು ವರ್ಷಗಳಿಂದ ಅಲ್ಲಿನ ಜನಸಂಖ್ಯೆಯ ಏರಿಕೆಯಿಂದಾಗಿ ಗ್ರಾಮದಲ್ಲಿ ನೀರಿನ ಬೇಡಿಕೆ ಹೆಚ್ಚಾಗಿದೆ  ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

“ಪ್ರತಿದಿನ ಕನಿಷ್ಠ ಕೆಲವು ಗಂಟೆಗಳ ಕಾಲ ನೀರನ್ನು ಪೂರೈಸಬೇಕು. ಇದು ಅವರ ಮೂಲಭೂತ ಹಕ್ಕು. ಜನರು ಈ ರೀತಿ ನೀರಿಲ್ಲದೆ ಬಳಲುವಂತಿಲ್ಲ. ನೀರು ಪೂರೈಕೆಗಾಗಿ ಅರ್ಜಿದಾರರು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ನ್ಯಾಯಾಲಯದ ಬಾಗಿಲು ತಟ್ಟಬೇಕಾಗಿರುವುದು ನಿಜಕ್ಕೂ ದುರದೃಷ್ಟಕರ” ಎಂದು ಹೈಕೋರ್ಟ್ ಹೇಳಿದೆ.

ಎಸ್‌ಟಿಇಎಂ ಕಂಪನಿಯು ಸ್ಥಳೀಯ ರಾಜಕಾರಣಿಗಳಿಗೆ ಮತ್ತು ಟ್ಯಾಂಕರ್ ಲಾಬಿಗೆ ಕಾನೂನುಬಾಹಿರವಾಗಿ ನೀರು ಪೂರೈಸುತ್ತಿದೆ.ಮುಖ್ಯ ಪೈಪ್‌ಲೈನ್‌ನಲ್ಲಿ ಅಕ್ರಮವಾಗಿ 300 ಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಮಾಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...