Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...