Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು, “ತಾಲಿಬಾನ್ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುತ್ತಿದೆ” ಎಂದು ಹೇಳಿದರೆ, ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ ರತನ್ ಪಯಾಲ್, “ನಿಮಗೆ ಕಡಿಮೆ ಬೆಲೆಯ ಪೆಟ್ರೋಲ್, ಡೀಸೆಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ” ಎಂದಿದ್ದರು.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ (ಗ್ಯಾಸ್, ಡೀಸೆಲ್, ಪೆಟ್ರೋಲ್) ಬೆಲೆ ನಿರಂತರ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 50 ರೂ ಏರಿಕೆ ಕಂಡಿದೆ. ಯಾರಾದರೂ ನಾಗರಿಕರು ಪ್ರಶ್ನಿಸಿದರೆ, ’ನೀನು ಅಫ್ಘಾನಿಸ್ತಾನಕ್ಕೆ ಹೋಗು. ಆ ದೇಶ ಚೆನ್ನಾಗಿದೆ’ ಎನ್ನುವುದು ಶುರುವಾಗಿದೆ. ಇದಕ್ಕಿಂತ ಮೊದಲು ಸರ್ಕಾರವನ್ನು ಪ್ರಶ್ನಿಸಿದರೆ, ’ಪಾಕಿಸ್ತಾನಕ್ಕೆ ಹೋಗು, ನೀನು ದೇಶದ್ರೋಹಿ ಎನ್ನುತ್ತಿದ್ದರು. ಈಗ ತಾಲಿಬಾನ್ ಅಧಿಕಾರ ಹಿಡಿದುಕೊಂಡಿದ್ದಾರೆ. ತಾಲಿಬಾನ್‌ಗೂ ಭಾರತಕ್ಕೂ ಯಾವ ಸಂಬಂಧಗಳಿವೆ, ತಾಲಿಬಾನ್ ಕುರಿತು ನಮ್ಮ ಒಕ್ಕೂಟ ಸರ್ಕಾರದ ನಿಲುವೇನು ಎಂಬುದು ಸಾಮಾನ್ಯ ಜನರಿಗೆ ತಿಳಿಯದು. ಆದರೂ ತಾಲಿಬಾನ್ ಹೆಸರನ್ನು ಮುಂದೊಡ್ಡಿ, ಪ್ರಶ್ನಿಸುವವರ ಬಾಯಿ ಮುಚ್ಚಿಸಲಾಗುತ್ತಿದೆ…”

ಇದು ಕತ್ರಿಗುಪ್ಪೆಯ ನಿವಾಸಿ ಪುರುಷೋತ್ತಮ್ ಅವರೊಬ್ಬರ ಹೇಳಿಕೆಯಲ್ಲ. ಬೆಲೆ ಏರಿಕೆಯನ್ನು ಪ್ರಶ್ನಿಸಿದ ಪ್ರತಿಯೊಬ್ಬರೂ ಟ್ರಾಲ್ ಪಡೆಯಿಂದ ಎದುರಿಸಬೇಕಾದ ಮೂದಲಿಕೆ ಅದು. ಹೋಗಲಿ ಬಿಡಿ, ಟ್ರಾಲ್ ಪಡೆಯ ವಾದವನ್ನು ಮನ್ನಿಸಿಯೇ ಮುನ್ನಡೆಯೋಣವೆಂದರೆ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲದಾಗಿದೆಯೆಲ್ಲ!

ಅಡುಗೆ ಅನಿಲದ ಬೆಲೆಯನ್ನೇ ನೋಡಿ. 2014ರಲ್ಲಿ 14.2 ಕೆ.ಜಿ. ಸಿಲಿಂಡರ್ ಸಬ್ಸಿಡಿ ಅಡುಗೆ ಅನಿಲ ದರ 410 ರೂ. ಇದ್ದದ್ದು, ಈಗ ಸದ್ಯದ ಆಡಳಿತದಲ್ಲಿ 882 ರೂಗಳಾಗಿದೆ. ಅಂದರೆ ಸುಮಾರು ಶೇ. 116ರಷ್ಟು ದರ ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಿನಲ್ಲಿ 50 ರೂ ಹೆಚ್ಚಾದರೆ, ಕಳೆದ 9 ತಿಂಗಳಲ್ಲಿ 190 ರೂ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು, 2014ಕ್ಕೆ ಹೋಲಿಸಿದರೆ ಈಗಿನ ಅನಿಲ ದರ ಕಡಿಮೆ ಇದೆ, ಆಗ 1241 ರೂ ಇತ್ತೆಂದು ಅರ್ಧ ಸುಳ್ಳು ಹೇಳುತ್ತಿದ್ದಾರೆ. ಆಗ 1241 ರೂ ಇದ್ದಿದ್ದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ. ಸಬ್ಸಿಡಿ ಗ್ಯಾಸ್ ಬೆಲೆ ಆಗ 410 ರೂ ಇತ್ತು. ಆದರೆ ಈಗ ಸಬ್ಸಿಡಿ ಸಹಿತ ಬೆಲೆ 880 ರೂ.ಗಳನ್ನು ದಾಟಿರುವುದು ಹೇಗೆ ಎಂಬುದಕ್ಕೆ ಸರ್ಕಾರ ಉತ್ತರ ಕೊಡುವುದಿಲ್ಲ. 2020ರ ನಂತರ ಸಬ್ಸಿಡಿ ಹಣವೂ ಸಮರ್ಪಕವಾಗಿ ಜನರಿಗೆ ಬಂದಿಲ್ಲ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 10 ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಎಲ್‌ಪಿಜಿ ದರ ಬದಲಾಗಿರುವುದು

“26 ಮಿಲಿಯನ್ ಮೆಟ್ರಿಕ್ ಟನ್‌ನಷ್ಟು ದೇಶಕ್ಕೆ ಅಡುಗೆ ಅನಿಲ ಬೇಕು. ಅದರಲ್ಲಿ ಶೇ.50ರಷ್ಟನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ನಿರಂತರವಾಗಿ ಸಿಗಬಲ್ಲ 400 ಶತಕೋಟಿ ಮೆಟ್ರಿಕ್ ಟನ್‌ನಷ್ಟು ಅನಿಲದ ದಾಸ್ತಾನು ದೇಶದಲ್ಲಿ ಪತ್ತೆಯಾಗಿವೆ. ಅದನ್ನು ಹೊರತೆಗೆದು ಬಳಸಿದರೆ ಆಮದು ಮೇಲಿನ ಅವಲಂಬನೆ ಸಂಪೂರ್ಣವಾಗಿ ತಪ್ಪಲಿದೆ. ಅಂತಾರಾಷ್ಟ್ರೀಯ ಅನಿಲ ಸಮುಚ್ಛಯಗಳಲ್ಲಿ ಇರುವ ದರ ಪರಿಗಣಿಸಿ, ಡಾಲರ್ ರೂಪಾಯಿಯ ವಿನಿಮಯ ದರದ ಆಧಾರದಲ್ಲಿ ಅನಿಲ ದರ ನಿಗದಿ ಮಾಡಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಅನಿಲ ದರದಲ್ಲಿ ಮತ್ತು ಡಾಲರ್ – ರೂಪಾಯಿ ವಿನಿಮಯದಲ್ಲಿ ದೊಡ್ಡಮಟ್ಟದ ಏರುಪೇರು ಕಂಡು ಬಂದಿಲ್ಲ. ಇನ್ನೂ ಸರಳವಾಗಿ ಹೇಳಬೇಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿಲ ದರ ಶೇ.25%ರಷ್ಟು ಕುಸಿದಿದೆ. ಅನಿಲ ಉತ್ಪಾದನೆಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡುವ ಸೌದಿಯ ಅರಾಮ್ಕೋ ಕಂಪನಿ ನಿಗದಿ ಮಾಡಿರುವ ಬೆಲೆಯೂ ಕಡಿಮೆ ಇದೆ. ಶೇ.30ರಷ್ಟು ದರ ಜಿಗಿತ ಒಂದೇ ವರ್ಷದಲ್ಲಿ ಆಗುವಂತಹ ಯಾವುದೇ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿಲ್ಲ. ಖಾಸಗಿ ಸಂಸ್ಥೆಗಳು ಅನಿಲ ಉತ್ಪಾದನಾ ಕ್ಷೇತ್ರಕ್ಕೆ ಕಾಲಿಟ್ಟಿರುವುದೇ ಇಷ್ಟು ಮಟ್ಟದ ಬೆಲೆ ಏರಿಕೆಗೆ ಕಾರಣ” ಎನ್ನುತ್ತಾರೆ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್.

ಅಡುಗೆ ಅನಿಲ ದರ ಏರಿಕೆ ಒಂದು ಸಮಸ್ಯೆಯಾದರೆ ಅಡುಗೆ ಎಣ್ಣೆಯ ದರವನ್ನೂ ನಿರಂತರವಾಗಿ ಏರಿಸುತ್ತಿರುವುದರಿಂದ ಜನಸಾಮಾನ್ಯರು ಜೀವನ ಸಾಗಿಸುವುದು ದುಬಾರಿಯಾಗಿದೆ.

ಬೇರೆ ಬೇರೆ ಗುಣಮಟ್ಟದ ಅಡುಗೆ ಎಣ್ಣೆಗಳು ಮಾರುಕಟ್ಟೆಯಲ್ಲಿದ್ದು, ಕೆಲವು ತಿಂಗಳಿಂದ ಅಡುಗೆ ಎಣ್ಣೆಯ ದರ ನಿರಂತರ ಏರಿಕೆಯಾಗುತ್ತಲೇ ಇದೆ. ಕಡಿಮೆ ಗುಣಮಟ್ಟದ ಅಡುಗೆ ಎಣ್ಣೆ ಲೀಟರ್ 85 ರೂ.ಗಳಿಂದ ರೂ.90ರವರೆಗೆ ಸಿಗುತ್ತಿತ್ತು. ಬೆಲೆ ಏರಿಕೆಯಿಂದಾಗಿ ಆಗಸ್ಟ್ ವೇಳೆಗೆ ಅದು 140 ರೂ. ಆಗಿತ್ತು. ಸೆಪ್ಟೆಂಬರ್ ವೇಳೆಗೆ 10 ರೂ. ಏರಿಕೆ ಮಾಡಲಾಗಿದ್ದು, ಈಗ 150 ರೂ. ಆಗಿದೆ. ಉತ್ತಮ ಗುಣಮಟ್ಟದ ಅಡುಗೆ ಎಣ್ಣೆ, 140ರಿಂದ 150 ರೂ.ಗಳಿಗೆ ದೊರಕುತ್ತಿತ್ತು. ಈಗ 220 ರೂಗಳಿಂದ 230 ರೂವರೆಗೂ ಏರಿಕೆ ಕಂಡಿದೆ. ಇದರ ಜೊತೆಗೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಜನರು ಪರಿಹಾರ ಕಾಣದೆ ಕೈಚೆಲ್ಲಿ ಕೂರುವಂತಾಗಿದೆ.

PC : The New Indian Express

“ಜನಗಳು ಬದಲಾದರೆ ಮಾತ್ರ ರಾಜಕಾರಣಿಗಳು ಬುದ್ಧಿ ಕಲಿಯುತ್ತಾರೆ. ಸರ್ಕಾರದ ವಕ್ತಾರರ ಮಾತುಗಳನ್ನು ಹಾಗೂ ಟ್ರಾಲ್ ಮತ್ತು ಐಟಿ ಸೇನೆಯ ಮಾತುಗಳನ್ನು ಅಮಾಯಕರು ಓದಿ, ಈ ಮುಖಂಡರು ಹೇಳಿದ್ದೇ ಸರಿ ಎಂದು ಭಾವಿಸುತ್ತಾರೆ. ತಾಲಿಬಾನ್ ಹೆಸರಲ್ಲಿ ಜನರು ಕಿತ್ತಾಡುತ್ತಿದ್ದರೆ ಅದು ಆಡಳಿತ ನಡೆಸುವವರಿಗೆ
ಲಾಭವಾಗುತ್ತಿದೆ. ಜನರು ಮಾತ್ರ ಎಂದಿನ ಬವಣೆಯಲ್ಲಿಯೇ ಇದ್ದಾರೆ” ಎಂದು ಕತ್ರಿಗುಪ್ಪೆಯ ಪುರುಷೋತ್ತಮ್ ಗಂಭೀರವಾಗಿ ಹೇಳುತ್ತಾರೆ.

ಇನ್ನಾದರೂ ಆಳುವ ಸರ್ಕಾರಗಳು ಜನರನ್ನು ಭಾದಿಸುತ್ತಿರುವ ಬೆಲೆ ಏರಿಕೆಯ ಬಗ್ಗೆ ಗಮನ ಹರಿಸುವರೇ?


ಇದನ್ನೂ ಓದಿ: ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...