Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಇಂಧನ ಬೆಲೆಗಳ ತೀವ್ರ ಹೆಚ್ಚಳದ ಪರಿಣಾಮ ಇವುಗಳನ್ನು ಬಳಸುವವರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವುದರಿಂದ ಸಮಸ್ತ ಜನರನ್ನೂ ತಟ್ಟುತ್ತಿದೆ.

ತರಕಾರಿ ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ಇರುತ್ತದೆ. ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತರಕಾರಿ ಬೆಲೆ ಕಡಿಮೆಯಾಗಿದೆ. ಆದರೆ, ಇಂಧನ ಬೆಲೆ ಏರಿಕೆ, ಇದರಿಂದ ಸಾರಿಗೆ ವ್ಯವಸ್ಥೆ ಪ್ರಯಾಣ ದರಗಳ ಏರಿಕೆ, ಬೇರೆ ಅಗತ್ಯ ವಸ್ತುಗಳ ತುಟ್ಟಿ, ಲಾಕ್‌ಡೌನ್ ಕಾರಣದಿಂದ ಉಂಟಾಗಿರುವ ಸಮಸ್ಯೆಗಳು ಒಟ್ಟಾರೆ ಪರಿಸ್ಥಿತಿಯನ್ನು ಬಿಗಡಾಯಿಸಿವೆ.

ಕಳೆದ 20 ವರ್ಷದಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ರವಿರಾವ್ ಮತ್ತು ಜಗದೀಶ್ ಹೇಳುವುದು ಹೀಗೆ, “ಲಾಕ್‌ಡೌನ್ ಮುಗಿದ ಮೇಲೆ ತರಕಾರಿ ವ್ಯಾಪಾರ ಕೊಂಚ ಮಟ್ಟಿಗೆ ಆರಂಭವಾಗಿತ್ತು. ಆದರೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅದರಲ್ಲೂ ಅಡುಗೆ ಎಣ್ಣೆಯ ಬೆಲೆ ಏರಿಕೆ ನಮ್ಮ ವ್ಯಾಪಾರದ ಮೇಲೆ ತೀವ್ರ ಪ್ರಭಾವ ಬೀರಿದೆ” ಎನ್ನುತ್ತಾರೆ.

“ಅಡುಗೆ ಮಾಡಲು ತರಕಾರಿ ಬೇಕು, ಎಣ್ಣೆ, ಸಿಲಿಂಡರ್ ಬೆಲೆ ಗಗನಕ್ಕೆ ಏರಿರುವುದರಿಂದ ಕೊಳ್ಳುವವರ ಮೊದಲಿನ ಮಟ್ಟದಲ್ಲಿ ಖರೀದಿ ಮಾಡುತ್ತಿಲ್ಲ. ಅವರ ಸಂಖ್ಯೆಯೂ ಕಡಿಮೆಯಾಗಿದೆ. ಮೊದಲು ಆಟೋದವರಿಗೆ ಬಾಡಿಗೆ ಕೊಟ್ಟರೆ ಸಾಕಿತ್ತು. ಆದರೆ, ಈಗ ಬಾಡಿಗೆ ಜೊತೆಗೆ 50, 100 ಎಕ್ಸ್ಟ್ರಾ ನೀಡಲೇಬೇಕು” ಎನ್ನುತ್ತಾರೆ.

ಐದು ವರ್ಷದಿಂದ ತಿಲಗ ಅವರು ಶ್ರೀನಿವಾಸ ನಗರದ ಬಸ್ ನಿಲ್ದಾಣದ ಬಳಿ ತರಕಾರಿ ಮಾರಾಟ ಮಾಡುತ್ತಾರೆ. ತಿಲಗ ಅವರ ಪತಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಾರೆ. ಪಕ್ಕದಲ್ಲೇ ತಿಲಗ ತರಕಾರಿ ವ್ಯಾಪಾರ ಮಾಡುತ್ತಾರೆ. ಆದರೆ, ಲಾಕ್‌ಡೌನ್ ನಮ್ಮ ವ್ಯಾಪಾರಕ್ಕೆ ಕುತ್ತು ತಂದಿದೆ ಎನ್ನುತ್ತಾರೆ.

“ದಿನ ಬೆಳಗ್ಗೆ ಬೇಗನೇ ಎದ್ದು ಮಾರ್ಕೆಟ್‌ಗೆ ಹೋಗಿ ತರಕಾರಿ ತರುತ್ತೇನೆ. ಮೊದಲು 150 ರೂಪಾಯಿ ಕೊಟ್ಟರೆ ಬರುತ್ತಿದ್ದ ಆಟೋದವರು, ಇಂದು 300 ರೂಪಾಯಿ ಕೇಳುತ್ತಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9.30ರವರೆಗೆ ವ್ಯಾಪಾರ ಮಾಡುತ್ತೇನೆ ಆದರೆ, ಎಷ್ಟೋ ಬಾರಿ ತಂದ ತರಕಾರಿ ಮಾರಾಟವಾಗಲು ಕೆಲವೊಮ್ಮೆ ಮೂರು ದಿನ ತೆಗೆದುಕೊಳ್ಳುತ್ತದೆ. ಮೊದಲೆಲ್ಲ ಒಂದೇ ದಿನದಲ್ಲಿ ಖಾಲಿಯಾಗುತ್ತಿತ್ತು. ಈಗ ಕೊಳ್ಳುವವರೆ ಇಲ್ಲವಾಗಿದ್ದಾರೆ” ಎನ್ನುತ್ತಾರೆ.

ತಳ್ಳುವ ಗಡಿಯಲ್ಲಿ ವ್ಯಾಪಾರ ಮಾಡುವ ಮೀತೇಶ್ ಹೇಳುವುದು ಕೂಡ ಇವೇ ಮಾತುಗಳನ್ನು. “ತರಕಾರಿಗಿಂತ ಆಟೋ ಬಾಡಿಗೆ ಜಾಸ್ತಿ ಆಗಿದೆ. ಯಾವಾಗ ಪೆಟ್ರೋಲ್, ಡಿಸೇಲ್, ಆಟೋ ಗ್ಯಾಸ್ ಬೆಲೆ ಕಡಿಮೆಯಾಗುತ್ತದೋ” ಎನ್ನುತ್ತಾರೆ.

ಇನ್ನು ಕಿರಾಣಿ-ದಿನಸಿ ಅಂಗಡಿಗಳ ವಿಷಯಕ್ಕೆ ಬಂದರೆ, ಬೇಳೆ, ಎಣ್ಣೆ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ ಎನ್ನುವುದು ಸಾಮಾನ್ಯ ಅಭಿಪ್ರಾಯ. “ವ್ಯಾಪಾರವಿಲ್ಲ, ಆದರೆ, 30 ವರ್ಷದಿಂದ ಇದೆ ಕೆಲಸ ಮಾಡುತ್ತಿರುವ ನಮಗೆ ಬೇರೆ ಮಾರ್ಗವಿಲ್ಲ ಎನ್ನುವುದು ಹಲವರ ಅಳಲು.

ಎಪಿಎಂಸಿ ಒಕ್ಕೂಟ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಅವರು ಹೇಳುವಂತೆ, “ಎಪಿಎಂಸಿಯಲ್ಲಿ ಬೇಳೆ ಪದಾರ್ಥಗಳಲ್ಲಿ ಹೆಚ್ಚಿನ ಏರಿಕೆಯಾಗಿಲ್ಲ. ಸಕ್ಕರೆ ಒಂದೆರಡು ರೂಪಾಯಿಯ ವ್ಯತ್ಯಾಸ ಕಂಡಿದೆ. ಆದರೆ ಎಣ್ಣೆ ಪದಾರ್ಥದ ಬೆಲೆ ಹೆಚ್ಚಾಗಿದೆ. ಹೋಲ್‌ಸೇಲ್ ಮತ್ತು ರಿಟೇಲ್ ಮಾರಾಟಕ್ಕೆ ಸ್ವಲ್ಪ ವ್ಯತ್ಯಾಸವಿದೆ” ಎನ್ನುತ್ತಾರೆ.

ಸೆಪ್ಟೆಂಬರ್ ಮಾಸಿಕದಲ್ಲಿ ಬೆಲೆ

ಲಾಕ್‌ಡೌನ್ ಸಮಯದಲ್ಲಿ ಚಿಲ್ಲರೆ ವ್ಯಾಪಾರದಲ್ಲಿ ಆಹಾರ ಧಾನ್ಯಗಳ ಬೆಲೆ ಭಾರಿ ಏರಿಕೆ ಕಂಡಿತ್ತು. ಈಗ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಇದಕ್ಕೆ ಕಾರಣ. ಲಾಕ್‌ಡೌನ್‌ನಿಂದ ಜನ ಅಂಗಡಿಗಳಿಗೆ ಬರುವುದು ಕಡಿಮೆಯಾಗಿದೆ. ಈಗ ಬೆಲೆ ಏರಿಕೆಯಿಂದ ಸಾರಿಗೆ ವ್ಯವಸ್ಥೆಯ ದರ ಕೂಡ ಏರಿಕೆಯಾಗಿರುವುದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ.

ಇನ್ನು ಹೋಟೆಲ್ ಉದ್ಯಮದ ಸ್ಥಿತಿ ನಿಜಕ್ಕೂ ಶೋಚನೀಯವಾಗಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮತ್ತು ಅಡುಗೆ ಎಣ್ಣೆಯ ತೀವ್ರ ಬೆಲೆ ಏರಿಕೆ ಹೋಟೆಲ್ ಉದ್ಯಮಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

“ಅಡುಗೆ ಎಣ್ಣೆ ಜಾಸ್ತಿ ಆಗಿದೆ, ಗ್ಯಾಸ್ ರೇಟ್ ಜಾಸ್ತಿ ಆಯ್ತು ಅಂತಾ ನಾವು ರೇಟ್ ಜಾಸ್ತಿ ಮಾಡುವ ಹಾಗಿಲ್ಲ. ಹಾಗೆ ಮಾಡಿದ್ರೆ ಜನ ಹೋಟೆಲ್‌ಗೆ ಬರಲ್ಲ” ಎನ್ನುತ್ತಾರೆ ಕಳೆದ 40 ವರ್ಷಗಳಿಂದ ಪುಟ್ಟ ಹೋಟೆಲ್ ನಡೆಸುತ್ತಿರುವ ಶ್ರೀನಿವಾಸ್ ಮತ್ತು ಅವರ ಪುತ್ರ ಕುಲೋತ್ತಮ್.

“ಲಾಕ್‌ಡೌನ್‌ಗೆ ಮೊದಲು 700 ರೂಪಾಯಿ ಕೊಟ್ಟು ಒಂದು ಟಿನ್ ಎಣ್ಣೆ ತರುತ್ತಿದ್ದೆ. ಈಗ 1,300 ರೂಪಾಯಿ ಕೊಡ್ತಾ ಇದ್ದೇವೆ. ಗ್ಯಾಸ್ ರೇಟ್ ಕೂಡ ಜಾಸ್ತಿ ಆಗ್ತಾನೆ ಇದೆ. ಹದಿನೈದು ದಿನಕ್ಕೆ ಒಂದೊಂದು ರೇಟ್ ಹೇಳ್ತಾರೆ. ಹಾಗಂತ ನಾವು ಕ್ವಾಲಿಟಿ ಕಡಿಮೆ ಮಾಡುವಂತಿಲ್ಲ. ತಿಂಡಿಗಳ ಸಂಖ್ಯೆಯನ್ನು ಕಡಿಮೆ ಮಾಡುವಂತಿಲ್ಲ. ಯಾಕೆಂದರೆ ಗ್ರಾಹಕರು ಬೇರೆಡೆಗೆ ಹೋಗುತ್ತಾರೆ. ಗ್ರಾಹಕರಿಲ್ಲದೆ ಕಷ್ಟ ಅನುಭವಿಸುತ್ತಿದ್ದೆವೆ. ಇರುವವರನ್ನು ಕಳೆದುಕೊಂಡರೆ ಹೋಟೆಲ್ ನಡೆಸುವುದೆ ಕಷ್ಟ. ಮೊದಲು ಬರುತ್ತಿದ್ದ ಬ್ಯಾಚಲರ್ಸ್ ಈಗ ಇಲ್ಲ. ಆನ್‌ಲೈನ್ ಕ್ಲಾಸ್, ವರ್ಕ್ ಫ್ರಂ ಹೋಮ್‌ಗಳಿಂದ ಜನ ಮನೆಬಿಟ್ಟು ಹೊರಬರುತ್ತಿಲ್ಲ” ಎನ್ನುತ್ತಾರೆ ಕುಲೋತ್ತಮ್.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, “ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ. ಇಂಧನ ಬೆಲೆಗಳ ಏರಿಕೆಯಾಗಿದೆ. ಇವುಗಳಿಂದ ಸಾರಿಗೆ ವೆಚ್ಚ ಹೆಚ್ಚಾಗಿದೆ. ಬೇಳೆ ಕಾಳುಗಳು, ಅದರಲ್ಲೂ ಮುಖ್ಯವಾಗಿ ಅಡುಗೆ ಎಣ್ಣೆ ಶೇಕಡಾ 120% ಏರಿಕೆಯಾಗಿದೆ. ಮೂರು ತಿಂಗಳ ಹಿಂದೆ ವಿದ್ಯುತ್ ದರ ಕೂಡ ಏರಿಕೆಯಾಗಿದೆ. ಇವುಗಳಿಂದ ನಮ್ಮ ಉದ್ಯಮದ ಮೇಲೆ ತುಂಬಾ ಹೊಡೆತ ಬಿದ್ದಿದೆ” ಎನ್ನುತ್ತಾರೆ.

“ಕೊರೊನಾದಿಂದ ಈಗಷ್ಟೇ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದೇವೆ. ಹೀಗಾಗಿ ನಾವು ಬೆಲೆ ಏರಿಕೆ ಮಾಡುತ್ತಿಲ್ಲ. ಇದು ಬೆಲೆ ಏರಿಕೆ ಮಾಡುವ ಸಂದರ್ಭ ಅಲ್ಲ ಅಂತ ನಮ್ಮ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಐಟಿ ಕಂಪನಿಗಳು ಆರಂಭವಾಗಬೇಕು, ಜನರಿಗೆ ಕೆಲಸ ಸಿಗಬೇಕು. ವರ್ಕ ಫ್ರಂ ಹೋಮ್ ಮುಗಿದ ಮೇಲೆ ಈ ಬಗ್ಗೆ ಯೋಚಿಸಬೇಕು. ಮುಂದಿನ ಜನವರಿಯವರೆಗೂ ಹೋಟೆಲ್ ಪದಾರ್ಥಗಳ ಬೆಲೆ ಏರಿಕೆ ಮಾಡಬಾರದು ಎಂಬ ನಿರ್ಧಾರ ಆಗಿದೆ” ಎಂದಿದ್ದಾರೆ.

“ಈಗ 50 ಸಾವಿರ ವ್ಯಾಪಾರ ಆಗುವ ಜಾಗದಲ್ಲಿ ತಿಂಡಿ-ಊಟದ ಬೆಲೆಯನ್ನು 5% ಏರಿಕೆ ಮಾಡಿದ್ರೆ, ವ್ಯಾಪಾರ 45 ಸಾವಿರಕ್ಕೆ ಕುಸಿಯುವ ಸಾಧ್ಯತೆ ಇದೆ. ಹಾಗಾಗಿ ನಾವು ಬೆಲೆ ಏರಿಕೆ ಮಾಡಲ್ಲ. ಗ್ರಾಹಕರನ್ನು ಉಳಿಸಿಕೊಳ್ಳಬೇಕು. ನಮ್ಮ ಖರ್ಚು ನಮಗಿದ್ದೆ ಇರುತ್ತದೆ. ಮುಖ್ಯವಾಗಿ ಅಡುಗೆ ಎಣ್ಣೆ ಬೆಲೆ ಹತೋಟಿಗೆ ತರಬೇಕು” ಎನ್ನುತ್ತಾರೆ ಪಿ.ಸಿ.ರಾವ್.

“ಬೆಂಗಳೂರಿನಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಸಣ್ಣ ಅಂಗಡಿಗಳು ಬಂದ್ ಆಗಿವೆ. ಒಂದು ಅಂಗಡಿಯಲ್ಲಿ ಇಬ್ಬರು, ಮೂವರು ಕೆಲಸಗಾರರು ಇರುತ್ತಿದ್ದರು. ಹೋಟೆಲ್ ವ್ಯಾಪಾರಕ್ಕೆ ಈ ಸಣ್ಣ ಸಣ್ಣ ಅಂಗಡಿಗಳು ಕಾರಣ ಆಗಿದ್ದವು. ಇವುಗಳು ಬಂದ್ ಆದ ಕಾರಣ ನಮ್ಮ ವ್ಯಾಪಾರಕ್ಕೆ ತೊಂದರೆ ಆಗಿದೆ. ಬೆಲೆ ಹತೋಟಿ ಇದ್ದಿದ್ರೆ ನಮಗೆ ಸಹಾಯವಾಗ್ತಾ ಇತ್ತು” ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಮುಖ್ಯವಾಗಿ ತರಕಾರಿ ಮಾರಾಟಗಾರರು, ದಿನಸಿ ಅಂಗಡಿ, ಸಣ್ಣ ಸಣ್ಣ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರ ಮೇಲೆ ಈ ಇಂಧನದ ಬೆಲೆ ಏರಿಕ ತೀವ್ರವಾದ ಸಮಸ್ಯೆ ಒಡ್ಡಿದೆ. ಅಡುಗೆ ಎಣ್ಣೆಯನ್ನು ಪ್ರತಿ ಮನೆಯಲ್ಲೂ ಈಗ ಎಚ್ಚರದಿಂದ ಬಳಸುವಂತಾಗಿದೆ. ಒಟ್ಟಾರೆ ಬೆಲೆ ಏರಿಕೆ ಎಲ್ಲಾ ಕಾರ್ಮಿಕ ವರ್ಗದವರ ಮೇಲೂ ಪ್ರತ್ಯಕ್ಷ ಮತ್ತು ಪರೋಕ್ಷ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಇದನ್ನೂ ಓದಿ: ಬೆಂಗಳೂರು: ಮರ ಕಡಿಯದಂತೆ ಸರ್ಕಾರಿ ಶಾಲಾ ಮಕ್ಕಳಿಂದ ಅಪ್ಪಿಕೊ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...