Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

- Advertisement -
- Advertisement -

ಕೊರೊನಾ, ಲಾಕ್‌ಡೌನ್, ಬೆಲೆ ಏರಿಕೆ, ಉದ್ಯೋಗ ನಷ್ಟ, ಖಾಲಿ ಜೇಬು, ಹಸಿದ ಹೊಟ್ಟೆ- ಇಂದಿನ ದುಬಾರಿ ದುನಿಯಾದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಸಮಸ್ಯೆಗಳಿವು. ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸುದ್ದಿ ಕಾಣಿಸದ ದಿನವಿಲ್ಲ. ಇದೇ ಸಂದರ್ಭದಲ್ಲಿ ಹೇಗೋ ಆದಷ್ಟು ಕೊಂಡು ತಿನ್ನುವ ಎಂದುಕೊಳ್ಳಲು ಉದ್ಯೋಗವೂ ಇಲ್ಲ. ಕೆಲಸ ಇರುವವರ ಸಂಬಳಕ್ಕೂ ಉದ್ಯೋಗದಾತರು ಕತ್ತರಿ ಹಾಕುತ್ತಿದ್ದಾರೆ. ಕಳೆದ ವರ್ಷ ದೇಶಾದ್ಯಂತ ಲಾಕ್‌ಡೌನ್ ಹೇರಿದ ಬಳಿಕ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಲೇ ಇದೆ. ಲಾಕ್‌ಡೌನ್ ಮುಗಿದರೂ ಉದ್ಯೋಗ ಕ್ಷೇತ್ರದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಇಂದಿಗೂ ದೇಶದ ಯುವಜನರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ಅಂಕಿಅಂಶಗಳ ಪ್ರಕಾರ, 2021ರ ಆಗಸ್ಟ್‌ನಲ್ಲಿ ನಿರುದ್ಯೋಗ ದರವು 8.3%ಗೆ ಏರಿಕೆಯಾಗಿದೆ. ಜುಲೈನಲ್ಲಿ 37.4% ಇದ್ದ ಉದ್ಯೋಗ ದರವು ಆಗಸ್ಟ್‌ನಲ್ಲಿ 37.2% ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ಜುಲೈನಲ್ಲಿ 399.7 ಮಿಲಿಯನ್ (39.9 ಕೋಟಿ) ಇದ್ದ ಉದ್ಯೋಗಗಳು ಆಗಸ್ಟ್‌ನಲ್ಲಿ 397.8 ಮಿಲಿಯನ್‌ಗೆ (39.7 ಕೋಟಿ) ಕುಗ್ಗಿದೆ. ಅಂದರೆ, ಒಂದೇ ತಿಂಗಳಲ್ಲಿ 1.9 ಮಿಲಿಯನ್ (19 ಲಕ್ಷ) ಉದ್ಯೋಗಗಳು ನಷ್ಟವಾಗಿವೆ.

ಇದನ್ನು ಕ್ಷೇತ್ರವಾರು ನೋಡುವುದಾದರೆ, ಕೃಷಿ ಕ್ಷೇತ್ರದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 8.7 ಮಿಲಿಯನ್ ಉದ್ಯೋಗಗಳು ಕಡಿತಗೊಂಡಿವೆ. ಅಂದರೆ, ಜುಲೈ ತಿಂಗಳಲ್ಲಿ ಖಾರಿಫ್ ಬೆಳೆ ಬಿತ್ತನೆಯ ಸಮಯದಲ್ಲಿ ಸರಾಸರಿ 124 ಮಿಲಿಯನ್ ಇದ್ದ ಕೃಷಿ ಕ್ಷೇತ್ರದ ಉದ್ಯೋಗಗಳು ಆಗಸ್ಟ್‌ನಲ್ಲಿ 116 ಮಿಲಿಯನ್‌ಗೆ ಕುಸಿದಿವೆ.

ಕೈಗಾರಿಕಾ ವಲಯದಲ್ಲಿ ಜುಲೈನಲ್ಲಿ 2.5 ಮಿಲಿಯನ್ ಉದ್ಯೋಗ ನಷ್ಟವಾದರೆ, ಆಗಸ್ಟ್‌ನಲ್ಲಿ 0.94 ಮಿಲಿಯನ್ ಉದ್ಯೋಗಗಳು ಕಡಿತವಾಗಿವೆ. ಇನ್ನು, ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳಲ್ಲಿ ಸುಮಾರು 10 ಮಿಲಿಯನ್ ಕಾರ್ಮಿಕರು ಶಾಶ್ವತವಾಗಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ (ಮಾರ್ಚ್ 2020) ಮೊದಲು, ಉತ್ಪಾದನಾ ವಲಯವು ಸುಮಾರು 40 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಇದು ಏಪ್ರಿಲ್ 2020ರಲ್ಲಿ 21 ಮಿಲಿಯನ್‌ಗೆ ಕುಸಿಯಿತು. ಜುಲೈ 2020ರ ವೇಳೆಗೆ 30 ಮಿಲಿಯನ್ ಸಮೀಪಕ್ಕೆ ಉದ್ಯೋಗ ಕ್ಷೇತ್ರ ಸುಧಾರಿಸಿತು. ನಂತರ, ಫೆಬ್ರವರಿ 2021ರವರೆಗೆ 30 ಮಿಲಿಯನ್ ಗಡಿಯಲ್ಲಿತ್ತು. ಆದರೆ, ಕೊರೊನಾ 2ನೇ ಅಲೆಯ ವೇಳೆ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಪ್ರಮಾಣವು 26 ಮಿಲಿಯನ್‌ಗೆ ಕುಸಿಯಿತು. ಜುಲೈ ವೇಳೆಗೆ ಇದು ಸುಮಾರು 29 ಮಿಲಿಯನ್‌ಗೆ ಏರಿಕೆಯಾಗಿ ಚೇತರಿಸಿಕೊಂಡಿತು. ಆದರೆ, ಆಗಸ್ಟ್‌ನಲ್ಲಿ ಮತ್ತೆ 28 ಮಿಲಿಯನ್‌ಗೆ ಕುಸಿದುಹೋಗಿದೆ. 2ನೇ ಅಲೆಯ ಲಾಕ್‌ಡೌನ್ ನಂತರವೂ ಆಗಸ್ಟ್‌ನಲ್ಲಿ ಸರಾಸರಿ ಒಂದು ಮಿಲಿಯನ್ ಉದ್ಯೋಗ ನಷ್ಟವು ನಿರಾಶಾದಾಯಕ ಪರಿಸ್ಥಿತಿಯನ್ನು ಚಿತ್ರಿಸುತ್ತಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೊನಾ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿದ್ದ 40 ಮಿಲಿಯನ್ ಉದ್ಯೊಗ ಎಂಬುದು ಈಗ ತುಂಬಾ ದೂರದ ಮಾತಿನಂತೆ ಕಾಣುತ್ತದೆ.

ಇದೇ ವೇಳೆ ಉತ್ಪಾದನಾ ಕ್ಷೇತ್ರದಿಂದ ಹೊರನೂಕಲ್ಪಟ್ಟವರನ್ನು ಸೇವಾ ಕ್ಷೇತ್ರ ಸೆಳೆದಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನವು ಆರ್ಥಿಕ ಭದ್ರತೆಯನ್ನು ಒದಗಿಸದಿದ್ದರೂ ತಾತ್ಕಾಲಿಕ ನಿಟ್ಟುಸಿರು ಬಿಡಲು ನೆರವಾಗಿವೆ. ಆಗಸ್ಟ್‌ನಲ್ಲಿ ಸೇವಾ ವಲಯವು 8.5 ಮಿಲಿಯನ್ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸಿದೆ. ವೈಯಕ್ತಿಕ ವೃತ್ತಿಪರೇತರ ಸೇವೆಗಳು ಮತ್ತು ಚಿಲ್ಲರೆ ವ್ಯಾಪಾರ, ಮನೆಕೆಲಸದವರು, ಮನೆ ಅಡುಗೆಯವರು, ಬ್ಯೂಟಿಷಿಯನ್‌ಗಳು, ಮಸಾಜ್ ಮಾಡುವವರು, ಜಿಮ್ನಾಷಿಯಂ ತರಬೇತುದಾರರು, ಕ್ಷೌರಿಕರು, ಕೊಳಾಯಿಗಾರರು, ತೋಟಗಾರರು, ಭದ್ರತಾ ಸಿಬ್ಬಂದಿ, ಕ್ಯಾಬ್ ಚಾಲಕರು ಮುಂತಾದವರು ಈ ವಲಯದಲ್ಲಿ ಸೇರಿದ್ದಾರೆ. ಆಗಸ್ಟ್‌ನಲ್ಲಿ ಅಂತಹ ಉದ್ಯೋಗಗಳು 4.7 ಮಿಲಿಯನ್ ಹೆಚ್ಚಳವಾಗಿದೆ. ಈ ವರ್ಗದಲ್ಲಿನ ಒಟ್ಟು ಉದ್ಯೋಗ ಸುಮಾರು 30 ಮಿಲಿಯನ್‌ನಷ್ಟಿದೆ. ಜೂನ್ ಮತ್ತು ಜುಲೈನಲ್ಲಿ 23.9 ಮಿಲಿಯನ್‌ಗೆ ಕುಸಿದಿದ್ದ ಈ ರೀತಿಯ ಉದ್ಯೋಗಗಳು 28.6 ಮಿಲಿಯನ್‌ಗೆ ಏರಿದ ಕಾರಣ ಆಗಸ್ಟ್ ಭಾಗಶಃ ಚೇತರಿಕೆ ಕಂಡಿದೆ.

ಇನ್ನು, ಆಗಸ್ಟ್‌ನಲ್ಲಿ ಉದ್ಯೋಗದಲ್ಲಿ ಹೆಚ್ಚಳವನ್ನು ಕಂಡ ಸೇವಾ ವಲಯ ಎಂದರೆ ಚಿಲ್ಲರೆ ವ್ಯಾಪಾರವಾಗಿದೆ. ಈ ಉದ್ಯಮದಲ್ಲಿ ಉದ್ಯೋಗವು ದಾಖಲೆಯ 64.4 ಮಿಲಿಯನ್ ತಲುಪಿದೆ. ಜುಲೈನಲ್ಲಿ ಇದು 59.9 ಮಿಲಿಯನ್ ಆಗಿತ್ತು. ಆದರೆ, ಈ ಕ್ಷೇತ್ರದಲ್ಲಿ ನಿಯತವಾಗಿ ವೇತನ ನೀಡುವ ಉದ್ಯೋಗಗಳು ಕೇವಲ 0.94 ಮಿಲಿಯನ್‌ಗಳಷ್ಟು ಮಾತ್ರ ಹೆಚ್ಚಾಗಿವೆ.

2020ರ ಸೆಪ್ಟೆಂಬರ್‌ನಲ್ಲಿ 6.68% ಇದ್ದ ನಿರುದ್ಯೋಗ ದರವು, 2021ರ ಆಗಸ್ಟ್‌ನಲ್ಲಿ 8.23%ಗೆ ಏರಿಕೆಯಾಗಿದೆ. ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು ಶೇ.42ರಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನ ಈ ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಈ ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

“ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದ ಕೆಲಸ ಹೋಯ್ತು. ಕೃಷಿ ಮಾಡೋಣ ಎಂದರೆ ಸರಿಯಾದ ಮಳೆಯಿಲ್ಲ. ಹಲವೆಡೆ ಪ್ರವಾಹ ಎಬ್ಬಿಸಿರುವ ಮಳೆ ನಮ್ಮ ಮೇಲೆ ಮುನಿಸಿಕೊಂಡಿದೆ. ಹೀಗಾಗಿ ಹೊಟ್ಟೆಪಾಡಿಗಾಗಿ ಪರಿತಪಿಸುವ ಸ್ಥಿತಿ ಕುಟುಂಬದಲ್ಲಿದೆ. ಹೀಗಾಗಿ ಊರಲ್ಲಿದ್ದ ಬೈಕ್ ತಂದು ಬೆಂಗಳೂರಿನಲ್ಲಿ ರ್‍ಯಾಪಿಡೋ ಓಡಿಸುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆ ಅದಕ್ಕೂ ಹೊಡೆತ ಕೊಟ್ಟಿದೆ. ಬೇರೆ ದಾರಿಯಿಲ್ಲದ ಕಾರಣ ಇದನ್ನೇ ನಂಬಿ ನಾನು-ನನ್ನ ಕುಟುಂಬ ಬದುಕುತ್ತಿದ್ದೇವೆ.” – ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಯಾಗಿದ್ದು ಉದ್ಯೋಗ ಕಳೆದುಕೊಂಡ ನವೀನ್ (ರ್‍ಯಾಪಿಡೋ ಚಾಲಕ).

ಇದನ್ನೂ ಓದಿ:ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...