Homeಚಳವಳಿರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ಕರ್ನಾಲ್‌ನಲ್ಲಿ ಆ.28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಕಳೆದ ತಿಂಗಳು ರೈತರ ಮೇಲೆ ನಡೆದ ಲಾಠಿಚಾರ್ಜ್ ಮತ್ತು ರೈತರ ತಲೆ ಒಡೆಯಲು ಆದೇಶ ನೀಡಿದ್ದ ಐಎಎಸ್ ಅಧಿಕಾರಿಯ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಗುರುವಾರ ಹೇಳಿದ್ದಾರೆ.

ಇದರ ಜೊತೆಗೆ “ಯಾರಾದರೂ ಬೇಡಿಕೆಯಿಟ್ಟ ಮಾತ್ರಕ್ಕೆ ತನಿಖೆ ಇಲ್ಲದೆ ಯಾರನ್ನೂ ಗಲ್ಲಿಗೇರಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರ. ಪೊಲೀಸರ ಲಾಠಿಚಾರ್ಜ್‌‌ನಲ್ಲಿ ಸುಮಾರು 10 ಮಂದಿ ರೈತರು ಗಾಯಗೊಂಡಿದ್ದರು. ಓರ್ವ ರೈತ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಕಾರಣರಾದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸಬೇಕು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳು ರೈತರ ಇಟ್ಟಿದ್ದಾರೆ. ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಕಳೆದ ತಿಂಗಳು ಪ್ರತಿಭಟನಾ ನಿರತ ರೈತರ ತಲೆ ಒಡೆಯುವಂತೆ ಪೊಲೀಸರಿಗೆ ಆದೇಶ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ಸದ್ಯ ಐಎಎಸ್ ಅಧಿಕಾರಿ ಸಿನ್ಹಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಶಿಕ್ಷೆಯಲ್ಲ ಎಂದು ರೈತ ಸಂಘದ ನಾಯಕರು ಹೇಳಿ, ಪ್ರತಿಭಟನೆ ನಡೆಸುತ್ತಿದ್ದಾರೆ.

“ನಾವು ನಿಷ್ಪಕ್ಷಪಾತ ತನಿಖೆಗೆ ಸಿದ್ಧರಿದ್ದೇವೆ, ಆದರೆ ಇದು ಕೇವಲ ಕರ್ನಾಲ್ ಮಾಜಿ SDM ಆಯುಷ್ ಸಿನ್ಹಾಗೆ ಮಾತ್ರ ಸಂಬಂಧಿಸಿಲ್ಲ, ಆದರೆ ಇಡೀ ಕರ್ನಾಲ್ ಘಟನೆಗೆ ಸಂಬಂಧಿಸಿರುತ್ತದೆ. ತನಿಖೆಯಲ್ಲಿ ರೈತರು ಅಥವಾ ರೈತ ನಾಯಕರು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಪರಿಗಣಿಸಬೇಕು” ಎಂದು ಗೃಹ ಸಚಿವ ಅನಿಲ್ ವಿಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಯಾರೋ ಹೇಳುತ್ತಾರೆ ಎಂದು ನಾವು ಯಾರನ್ನೂ ನೇಣಿಗೇರಿಸಲು ಸಾಧ್ಯವಿಲ್ಲ. ದೇಶದ ಕಾನೂನು ರೈತರಿಗೊಂದು ಬೇರೆಯವರಿಗೊಂದು ಇಲ್ಲ. ಅಪರಾಧದ ಮಾಡಿದವರಿಗೆ ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಅಪರಾಧ ಕಂಡುಹಿಡಿಯಲು ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

ರೈತ ಪ್ರತಿಭಟನೆ ಹಿನ್ನೆಲೆ, ಹರಿಯಾಣ ಸರ್ಕಾರವು ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಗುರುವಾರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. “ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸೆಪ್ಟೆಂಬರ್ 9 ರ 23:59 ಗಂಟೆಗಳ ವರೆಗೆ ಸ್ಥಗಿತಗೊಳಿಸಲಾಗುತ್ತದೆ” ಎಂದು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆಯಷ್ಟೇ ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು ಎಂದು ಎಚ್ಚರಿಕೆ ನೀಡಿದ್ದರು.


ಇದನ್ನೂ ಓದಿ: ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...