Homeಕರ್ನಾಟಕಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

- Advertisement -
- Advertisement -

‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ ಪೂಜೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ಭಾವಕ್ಕೆ ಬಿಟ್ಟ ವಿಚಾರ. ಇದಕ್ಕೆ ಬಿಜೆಪಿ ಸರ್ಕಾರ ನಿರ್ಬಂಧ ಹೇರಬಾರದು. ಸರ್ಕಾರ ತನ್ನ ನಿರ್ಬಂಧ ಆದೇಶ ಹಿಂಪಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಯ ಗಾತ್ರ ಹಾಗೂ ಹಬ್ಬ ಆಚರಣೆ ಅವಧಿಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ನಗರದ ಮಾವಳ್ಳಿಯ ಗಣೇಶ ಮೂರ್ತಿ ತಯಾರಕರು ಮತ್ತು ಮಾರಾಟಗಾರರನ್ನು ಗುರುವಾರ ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘‘ಈ ದೇಶದ ಸಂಸ್ಕೃತಿ ನಮ್ಮ ಆಸ್ತಿ. ಈ ಸಂಸ್ಕೃತಿಯಲ್ಲಿ ನಾವು ಬೆಳೆಯುತ್ತಿದ್ದೇವೆ. ಯಾವ ಧರ್ಮದವರು ಹೇಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಭಾರತದಲ್ಲಿ ಹಿಂದೂಗಳ ಜತೆಗೆ ಇತರೆ ಧರ್ಮದವರು ಕೂಡ ವಿಘ್ನಗಳನ್ನು ನಿವಾರಣೆ ಮಾಡುವ ವಿನಾಯಕನ ಪೂಜೆ ಮಾಡುತ್ತಾರೆ. ಸಣ್ಣ ಸಗಣಿ ಉಂಡೆಗೆ ಒಂದು ಗರಿಕೆಯಿಟ್ಟು ಅದನ್ನು ಗಣೇಶ ಎಂದು ನಾವು ಪೂಜೆ ಮಾಡುತ್ತೇವೆ. ಇದೇ ನಮ್ಮ ಹಿರಿಯರು, ನಮ್ಮ ಸಂಸ್ಕೃತಿ ನಮಗೆ ತೋರಿರುವ ಮಾರ್ಗದರ್ಶನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

“ಕೋವಿಡ್ ಸಮಯದಲ್ಲಿ ದೇವಸ್ಥಾನ ತೆರೆಯಲು ಅವಕಾಶ ಕೊಟ್ಟಿದ್ದೀರಿ. ನಿಮ್ಮವರು ಒಕ್ಕೂಟ ಸರ್ಕಾರದ ಸಚಿವರಾದರು ಎಂಬುದಕ್ಕೇ ಜನಾಶೀರ್ವಾದ ಯಾತ್ರೆ ಮಾಡಿಸುತ್ತಿದ್ದೀರಿ. ಚುನಾವಣೆ ನಡೆಸುತ್ತಿದ್ದೀರಿ. ಈಗ ಬಿಜೆಪಿ ನಾಯಕರು ಶಿಫಾರಸ್ಸು ಮಾಡುವ ಕಡೆ ವಾರ್ಡ್‌ನಲ್ಲಿ ಒಂದು ಗಣೇಶ ಇಟ್ಟು ಪೂಜೆ ಮಾಡಬೇಕು. ಅದೂ ಮನೆಯಲ್ಲಿ 2 ಅಡಿ, ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಮೂರ್ತಿ ಮಾತ್ರ ಇಡಬೇಕು ಎಂದು ನಿರ್ಬಂಧ ಹಾಕಿದ್ದೀರಿ? ಇದು ಸರಿಯೇ? ಈಗ ಇಷ್ಟು ದೊಡ್ಡ ಗಣೇಶ ಮೂರ್ತಿ ಮಾಡಿರುವವರ ಕತೆ ಏನಾಗಬೇಕು. ಸರ್ಕಾರ ಇದೇ ಆದೇಶವನ್ನು 3 ತಿಂಗಳ ಹಿಂದೆಯೇ ಯಾಕೆ ಪ್ರಕಟಿಸಲಿಲ್ಲ?” ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.

“ಎಷ್ಟು ಗಾತ್ರದ ವಿಗ್ರಹ ಪೂಜೆ ಮಾಡಬೇಕು ಅಂತಾ ನಿರ್ದೇಶನ ನೀಡಲು ನೀವ್ಯಾರು? ಇದು ನಮ್ಮ ವೈಯಕ್ತಿಕ ವಿಚಾರ. ಇದರಲ್ಲಿ ನಿಮ್ಮ ಸಮಸ್ಯೆ ಏನು? ಕೋವಿಡ್ ಮಾರ್ಗಸೂಚಿ ಏನು ಬೇಕಾದರೂ ಮಾಡಿಕೊಳ್ಳಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಕ್ಕೂಟ ಸರ್ಕಾರ ಇಡೀ ದೇಶಕ್ಕೆ ಒಂದು ಕೋವಿಡ್ ಮಾರ್ಗಸೂಚಿ ಪ್ರಕಟಿಸಿರುವಾಗ ಬಿಜೆಪಿ ಆಡಳಿತದಲ್ಲಿರುವ ಕರ್ನಾಟಕಕ್ಕೂ ಗುಜರಾತ್, ಮಧ್ಯ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಕೋವಿಡ್ ನಿಯಮದಲ್ಲಿ ವ್ಯತ್ಯಾಸ ಏಕಿದೆ?” ಎಂದು ಅವರು ಕೇಳಿದ್ದಾರೆ.

“ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಮಾವಳಿ ಹಾಕಿದರೆ ಅದನ್ನು ನಿಮ್ಮ ಪಕ್ಷದ ಕಾರ್ಯಕರ್ತರೇ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದು ಉಲ್ಟಾ ಆಗಿದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಹೀಗೆ ಇದು ನಮ್ಮ ವೈಯಕ್ತಿಕ ವಿಚಾರ. ಅದಕ್ಕೆ ನಿರ್ಬಂಧ ಹಾಕುವುದು ಸರಿಯಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

“ಗಣೇಶ ವಿಗ್ರಹವನ್ನು ಸಾಮಾನ್ಯರು ಮಾಡಲು ಸಾಧ್ಯವಿಲ್ಲ. ಈ ಕಸುಬು, ಕಲೆಯನ್ನು ಕಲಿತು, ಅದನ್ನೇ ನಂಬಿ ಜೀವನ ಮಾಡುತ್ತಿರುವವರು ಮಾತ್ರ ಮಾಡಲು ಸಾಧ್ಯ. ಬೇರೆ ರಾಜ್ಯಗಳಲ್ಲಿ ಇವರಿಗೆ ಪರಿಹಾರ ನೀಡಿದ್ದಾರೆ. ಆದರೆ ನೀವು ಯಾವ ಪರಿಹಾರ ಕೊಟ್ಟಿದ್ದೀರಿ? ಲೆಕ್ಕ ಇದೆಯಾ? ರಾಜ್ಯದಲ್ಲಿ ಹೂವು, ಹಣ್ಣು ವ್ಯಾಪಾರದವರು, ಆರ್ಕೆಸ್ಟ್ರಾ, ಪೆಂಡಾಲ್ ವ್ಯಾಪಾರಿಗಳಲ್ಲಿ ಯಾರಿಗೆ ನೀವು ಪರಿಹಾರ ಕೊಟ್ಟಿದ್ದೀರಿ? ಮೂರ್ತಿಗೆ ನಿರ್ಬಂಧ ಹೇರಿರುವುದರಿಂದ ಇವರೆಲ್ಲರಿಗೂ ಹೊಡೆತ ಬೀಳಲಿದೆ. ಇದು ಕೇವಲ ಪಾಲಿಕೆ ವ್ಯಾಪ್ತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಒಂದೇ ನೀತಿ ಇರಬೇಕು. ಒಂದೇ ದೃಷ್ಟಿಯಲ್ಲಿ ನೋಡಬೇಕು” ಎಂದು ಅವರು ಹೇಳಿದ್ದಾರೆ.

‘‘ಇಲ್ಲಿ ಹಿಂದೂ ಭಾವನೆ ಒಂದೇ ಅಲ್ಲ. ಇದು ಎಲ್ಲರ ಭಕ್ತಿ, ಉತ್ಸಾಹದ ವಿಚಾರ. ಸರ್ಕಾರ ಗಣೇಶ ಹಬ್ಬ ಆಚರಣೆಗೆ 10-15 ದಿನಗಳ ಅವಕಾಶ ನೀಡಬೇಕು. ಆರ್ಕೆಸ್ಟ್ರಾ ಮತ್ತಿತರ ಮನರಂಜನೆ ಕಾರ್ಯಕ್ರಮಕ್ಕೂ ಅವಕಾಶ ಇರಬೇಕು. ಕೋವಿಡ್ ನಿಯಮಾವಳಿ ವ್ಯಾಪ್ತಿಯಲ್ಲೇ ಆಚರಣೆಗೆ ಅವಕಾಶ ನೀಡಬೇಕು. ಕೋವಿಡ್ ನಿಯಮ ಮಾಡಿದರೆ ಅದು ಎಲ್ಲರಿಗೂ ಅನ್ವಯವಾಗಬೇಕು” ಎಂದು ಡಿಕೆಶಿ ತಿಳಿಸಿದ್ದಾರೆ.

“ಹೊಸದಾಗಿ ಒಕ್ಕೂಟ ಸರ್ಕಾರದ ಮಂತ್ರಿಯಾದವರಿಗೆ ಜನಾಶೀರ್ವಾದ ಮಾಡಲು ಅವಕಾಶ ಕೊಟ್ಟಿದ್ದೇಕೆ? ಬೇರೆ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಯಾಕೆ? ಪ್ರತಿಭಟನೆ ಮಾಡುತ್ತಿದ್ದ ಹೆಣ್ಣು ಮಕ್ಕಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದೇಕೆ? ಕಾನೂನು ಒಬ್ಬೊಬ್ಬರಿಗೆ ಒಂದು ಎಂಬಂತೆ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ಕೈಗೊಂಬೆಯಾಗಬಾರದು. ಗಣೇಶನ ಪೂಜೆ ಎಲ್ಲರ ಹಕ್ಕು, ಎಲ್ಲರ ಆಸ್ತಿ. ಎಲ್ಲ ಧರ್ಮದವರು ತಮ್ಮ ಸಂಪ್ರದಾಯ ಆಚರಣೆಗೆ ಅವಕಾಶ ಮಾಡಿಕೊಡಿ. ಈ ಹಬ್ಬ ಅನೇಕರ ಜೀವನಕ್ಕೆ ಆಸರೆಯಾಗಿದೆ. ಸರ್ಕಾರ ನಮ್ಮ ಭಾವನೆ ಕೆರಳಿಸಲು ಪ್ರಯತ್ನಿಸಬಾರದು.” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...