Homeಕರ್ನಾಟಕಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

- Advertisement -
- Advertisement -

‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ ಪೂಜೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ಭಾವಕ್ಕೆ ಬಿಟ್ಟ ವಿಚಾರ. ಇದಕ್ಕೆ ಬಿಜೆಪಿ ಸರ್ಕಾರ ನಿರ್ಬಂಧ ಹೇರಬಾರದು. ಸರ್ಕಾರ ತನ್ನ ನಿರ್ಬಂಧ ಆದೇಶ ಹಿಂಪಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಯ ಗಾತ್ರ ಹಾಗೂ ಹಬ್ಬ ಆಚರಣೆ ಅವಧಿಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ನಗರದ ಮಾವಳ್ಳಿಯ ಗಣೇಶ ಮೂರ್ತಿ ತಯಾರಕರು ಮತ್ತು ಮಾರಾಟಗಾರರನ್ನು ಗುರುವಾರ ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘‘ಈ ದೇಶದ ಸಂಸ್ಕೃತಿ ನಮ್ಮ ಆಸ್ತಿ. ಈ ಸಂಸ್ಕೃತಿಯಲ್ಲಿ ನಾವು ಬೆಳೆಯುತ್ತಿದ್ದೇವೆ. ಯಾವ ಧರ್ಮದವರು ಹೇಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಭಾರತದಲ್ಲಿ ಹಿಂದೂಗಳ ಜತೆಗೆ ಇತರೆ ಧರ್ಮದವರು ಕೂಡ ವಿಘ್ನಗಳನ್ನು ನಿವಾರಣೆ ಮಾಡುವ ವಿನಾಯಕನ ಪೂಜೆ ಮಾಡುತ್ತಾರೆ. ಸಣ್ಣ ಸಗಣಿ ಉಂಡೆಗೆ ಒಂದು ಗರಿಕೆಯಿಟ್ಟು ಅದನ್ನು ಗಣೇಶ ಎಂದು ನಾವು ಪೂಜೆ ಮಾಡುತ್ತೇವೆ. ಇದೇ ನಮ್ಮ ಹಿರಿಯರು, ನಮ್ಮ ಸಂಸ್ಕೃತಿ ನಮಗೆ ತೋರಿರುವ ಮಾರ್ಗದರ್ಶನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

“ಕೋವಿಡ್ ಸಮಯದಲ್ಲಿ ದೇವಸ್ಥಾನ ತೆರೆಯಲು ಅವಕಾಶ ಕೊಟ್ಟಿದ್ದೀರಿ. ನಿಮ್ಮವರು ಒಕ್ಕೂಟ ಸರ್ಕಾರದ ಸಚಿವರಾದರು ಎಂಬುದಕ್ಕೇ ಜನಾಶೀರ್ವಾದ ಯಾತ್ರೆ ಮಾಡಿಸುತ್ತಿದ್ದೀರಿ. ಚುನಾವಣೆ ನಡೆಸುತ್ತಿದ್ದೀರಿ. ಈಗ ಬಿಜೆಪಿ ನಾಯಕರು ಶಿಫಾರಸ್ಸು ಮಾಡುವ ಕಡೆ ವಾರ್ಡ್‌ನಲ್ಲಿ ಒಂದು ಗಣೇಶ ಇಟ್ಟು ಪೂಜೆ ಮಾಡಬೇಕು. ಅದೂ ಮನೆಯಲ್ಲಿ 2 ಅಡಿ, ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಮೂರ್ತಿ ಮಾತ್ರ ಇಡಬೇಕು ಎಂದು ನಿರ್ಬಂಧ ಹಾಕಿದ್ದೀರಿ? ಇದು ಸರಿಯೇ? ಈಗ ಇಷ್ಟು ದೊಡ್ಡ ಗಣೇಶ ಮೂರ್ತಿ ಮಾಡಿರುವವರ ಕತೆ ಏನಾಗಬೇಕು. ಸರ್ಕಾರ ಇದೇ ಆದೇಶವನ್ನು 3 ತಿಂಗಳ ಹಿಂದೆಯೇ ಯಾಕೆ ಪ್ರಕಟಿಸಲಿಲ್ಲ?” ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.

“ಎಷ್ಟು ಗಾತ್ರದ ವಿಗ್ರಹ ಪೂಜೆ ಮಾಡಬೇಕು ಅಂತಾ ನಿರ್ದೇಶನ ನೀಡಲು ನೀವ್ಯಾರು? ಇದು ನಮ್ಮ ವೈಯಕ್ತಿಕ ವಿಚಾರ. ಇದರಲ್ಲಿ ನಿಮ್ಮ ಸಮಸ್ಯೆ ಏನು? ಕೋವಿಡ್ ಮಾರ್ಗಸೂಚಿ ಏನು ಬೇಕಾದರೂ ಮಾಡಿಕೊಳ್ಳಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಕ್ಕೂಟ ಸರ್ಕಾರ ಇಡೀ ದೇಶಕ್ಕೆ ಒಂದು ಕೋವಿಡ್ ಮಾರ್ಗಸೂಚಿ ಪ್ರಕಟಿಸಿರುವಾಗ ಬಿಜೆಪಿ ಆಡಳಿತದಲ್ಲಿರುವ ಕರ್ನಾಟಕಕ್ಕೂ ಗುಜರಾತ್, ಮಧ್ಯ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಕೋವಿಡ್ ನಿಯಮದಲ್ಲಿ ವ್ಯತ್ಯಾಸ ಏಕಿದೆ?” ಎಂದು ಅವರು ಕೇಳಿದ್ದಾರೆ.

“ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಮಾವಳಿ ಹಾಕಿದರೆ ಅದನ್ನು ನಿಮ್ಮ ಪಕ್ಷದ ಕಾರ್ಯಕರ್ತರೇ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದು ಉಲ್ಟಾ ಆಗಿದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಹೀಗೆ ಇದು ನಮ್ಮ ವೈಯಕ್ತಿಕ ವಿಚಾರ. ಅದಕ್ಕೆ ನಿರ್ಬಂಧ ಹಾಕುವುದು ಸರಿಯಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

“ಗಣೇಶ ವಿಗ್ರಹವನ್ನು ಸಾಮಾನ್ಯರು ಮಾಡಲು ಸಾಧ್ಯವಿಲ್ಲ. ಈ ಕಸುಬು, ಕಲೆಯನ್ನು ಕಲಿತು, ಅದನ್ನೇ ನಂಬಿ ಜೀವನ ಮಾಡುತ್ತಿರುವವರು ಮಾತ್ರ ಮಾಡಲು ಸಾಧ್ಯ. ಬೇರೆ ರಾಜ್ಯಗಳಲ್ಲಿ ಇವರಿಗೆ ಪರಿಹಾರ ನೀಡಿದ್ದಾರೆ. ಆದರೆ ನೀವು ಯಾವ ಪರಿಹಾರ ಕೊಟ್ಟಿದ್ದೀರಿ? ಲೆಕ್ಕ ಇದೆಯಾ? ರಾಜ್ಯದಲ್ಲಿ ಹೂವು, ಹಣ್ಣು ವ್ಯಾಪಾರದವರು, ಆರ್ಕೆಸ್ಟ್ರಾ, ಪೆಂಡಾಲ್ ವ್ಯಾಪಾರಿಗಳಲ್ಲಿ ಯಾರಿಗೆ ನೀವು ಪರಿಹಾರ ಕೊಟ್ಟಿದ್ದೀರಿ? ಮೂರ್ತಿಗೆ ನಿರ್ಬಂಧ ಹೇರಿರುವುದರಿಂದ ಇವರೆಲ್ಲರಿಗೂ ಹೊಡೆತ ಬೀಳಲಿದೆ. ಇದು ಕೇವಲ ಪಾಲಿಕೆ ವ್ಯಾಪ್ತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಒಂದೇ ನೀತಿ ಇರಬೇಕು. ಒಂದೇ ದೃಷ್ಟಿಯಲ್ಲಿ ನೋಡಬೇಕು” ಎಂದು ಅವರು ಹೇಳಿದ್ದಾರೆ.

‘‘ಇಲ್ಲಿ ಹಿಂದೂ ಭಾವನೆ ಒಂದೇ ಅಲ್ಲ. ಇದು ಎಲ್ಲರ ಭಕ್ತಿ, ಉತ್ಸಾಹದ ವಿಚಾರ. ಸರ್ಕಾರ ಗಣೇಶ ಹಬ್ಬ ಆಚರಣೆಗೆ 10-15 ದಿನಗಳ ಅವಕಾಶ ನೀಡಬೇಕು. ಆರ್ಕೆಸ್ಟ್ರಾ ಮತ್ತಿತರ ಮನರಂಜನೆ ಕಾರ್ಯಕ್ರಮಕ್ಕೂ ಅವಕಾಶ ಇರಬೇಕು. ಕೋವಿಡ್ ನಿಯಮಾವಳಿ ವ್ಯಾಪ್ತಿಯಲ್ಲೇ ಆಚರಣೆಗೆ ಅವಕಾಶ ನೀಡಬೇಕು. ಕೋವಿಡ್ ನಿಯಮ ಮಾಡಿದರೆ ಅದು ಎಲ್ಲರಿಗೂ ಅನ್ವಯವಾಗಬೇಕು” ಎಂದು ಡಿಕೆಶಿ ತಿಳಿಸಿದ್ದಾರೆ.

“ಹೊಸದಾಗಿ ಒಕ್ಕೂಟ ಸರ್ಕಾರದ ಮಂತ್ರಿಯಾದವರಿಗೆ ಜನಾಶೀರ್ವಾದ ಮಾಡಲು ಅವಕಾಶ ಕೊಟ್ಟಿದ್ದೇಕೆ? ಬೇರೆ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಯಾಕೆ? ಪ್ರತಿಭಟನೆ ಮಾಡುತ್ತಿದ್ದ ಹೆಣ್ಣು ಮಕ್ಕಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದೇಕೆ? ಕಾನೂನು ಒಬ್ಬೊಬ್ಬರಿಗೆ ಒಂದು ಎಂಬಂತೆ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ಕೈಗೊಂಬೆಯಾಗಬಾರದು. ಗಣೇಶನ ಪೂಜೆ ಎಲ್ಲರ ಹಕ್ಕು, ಎಲ್ಲರ ಆಸ್ತಿ. ಎಲ್ಲ ಧರ್ಮದವರು ತಮ್ಮ ಸಂಪ್ರದಾಯ ಆಚರಣೆಗೆ ಅವಕಾಶ ಮಾಡಿಕೊಡಿ. ಈ ಹಬ್ಬ ಅನೇಕರ ಜೀವನಕ್ಕೆ ಆಸರೆಯಾಗಿದೆ. ಸರ್ಕಾರ ನಮ್ಮ ಭಾವನೆ ಕೆರಳಿಸಲು ಪ್ರಯತ್ನಿಸಬಾರದು.” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...