Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...