Homeಮುಖಪುಟಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

ಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ಒಕ್ಕೂಟ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕರ್ನಲ್‌ನಲ್ಲಿ ಇತ್ತೀಚೆಗೆ ರೈತರ ಮೇಲೆ ಹಲ್ಲೆ ನಡೆಸಿದ್ದ ಹರಿಯಾಣದ ಮನೋಹರ್‌‌ಲಾಲ್‌ ಕಟ್ಟರ್‌ ಸರ್ಕಾರದ ವಿರುದ್ದವು ರೈತರು ಹೋರಾಟಕ್ಕೆ ವೇದಿಕೆ ಸಿದ್ದಗೊಳಿಸಿದ್ದಾರೆ. ಕಳೆದ ಕೆಲವು ದಿನದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲಿ ರಾಜ್ಯದ ಕರ್ನಲ್‌ ಜಿಲ್ಲಾ ಕೇಂದ್ರವನ್ನು ರೈತರು ಶಾಶ್ವತ ರೈತ ಹೋರಾಟದ ಸ್ಥಳವನ್ನಾಗಿ ಮಾಡಿದ್ದಾರೆ.

ರೈತರು ಕರ್ನಲ್‌ನ ಮಿನಿ ಸೆಕ್ರೆಟರಿಯೇಟ್‌ನ ಹೊರಗೆ ಹೋರಾಟ ಮಾಡುತ್ತಿದ್ದಾರೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸೆಕ್ರಟರಿಯೇಟ್‌ನ ಹೊರಗೆ ಇರುವ ಮರಗಳನ್ನು ರೈತರು ನೆರಳಿಗಾಗಿ ಆಶ್ರಯಿಸಿದ್ದರು. ಆದರೆ ಗುರುವಾರ ರಾತ್ರಿ ಈ ಮರಗಳ ಕೊಂಬೆಗಳನ್ನು ಸರ್ಕಾರ ಕತ್ತರಿಸಿದೆ ಎಂದು ವರದಿಯಾಗಿದೆ. ಈ ಮೂಲಕ, ಸಾಧ್ಯವಿರುವ ಎಲ್ಲಾ ದಾರಿಯ ಮುಖಾಂತರ ರೈತರನ್ನು ಮಣಿಸಲು ಸರ್ಕಾರ ಹೊರಟಿದೆ ಎಂದು ಸಾಬೀತುಪಡಿಸಿದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಹೋರಾಟಗಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಕಿಡಿ ಕಾರಿದ್ದಾರೆ.

“ರೈತರು ಮತ್ತು ಪೊಲೀಸರು ಕರ್ನಾಲ್‌ನ ಮಿನಿ ಸೆಕ್ರೆಟರಿಯೇಟ್‌ ಹೊರಗೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗೆ ಕುಳಿತುಕೊಳ್ಳುತ್ತಿದ್ದರು. ರೈತರಿಗೆ ಕಷ್ಟಕರವಾಗಲು ಹರಿಯಾಣ ಆಡಳಿತವು ಮರದ ಕೊಂಬೆಗಳನ್ನು ಕತ್ತರಿಸಿದೆ. ನಿನ್ನೆ ರಾತ್ರಿ ಆ ಮರಗಳ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ವರದಿಯಾಗಿದೆ. ಚಕ್ರವರ್ತಿ ಬೆತ್ತಲಾಗಿದ್ದಾನೆ” ಎಂದು ರೈತ ಹೋರಾಟಗಳನ್ನು ನಿರಂತರವಾಗಿ ವರದಿ ಮಾಡುತ್ತಿರುವ ಹೋರಾಟಗಾರ ಸಂದೀಪ್‌ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಅವರು ಅಲ್ಲಿನ ವಿಡಿಯೋಗಳನ್ನು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿ V/s ಬಿಜೆಪಿ: ವಿಪಕ್ಷ ನಾಯಕನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಬಿಜೆಪಿಯ ಹಿರಿಯ ನಾಯಕ

ಸಂದೀಪ್‌ ಸಿಂಗ್ ಅವರ ವಿಡಿಯೊವನ್ನು ಶೇರ್‌ ಮಾಡಿರುವ ಪತ್ರಕರ್ತೆ ಸ್ವಾತಿ ಚತುರ್ವೇದಿ ಅವರು, “ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ಮಾಡಲು ಮರದ ಕೊಂಬೆಗಳನ್ನು ಕತ್ತರಿಸಿದ ಖಟ್ಟರ್ ಆಡಳಿತಕ್ಕೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಖ್ಯಾತ ವಕೀಲ, ಮಾನವ ಹಕ್ಕುಗಳ ಹೋರಾಟಗಾರ ಪ್ರಶಾಂತ್ ಭೂಷಣ್‌ ಅವರು, “ರೈತರು ನೆರಳಿನಲ್ಲಿ ಕುಳಿತುಕೊಳ್ಳಬಾರದು ಎಂದು ಖಟ್ಟರ್ ಸರ್ಕಾರವು ಮರಗಳ ಕೊಂಬೆಗಳನ್ನು ಕತ್ತರಿಸಿತು. ತಮ್ಮ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿರುವುದನ್ನು ವಿರೋಧಿಸಿ ರೈತರು ಆ ಮರಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬಿಜೆಪಿಯ ಭ್ರಷ್ಟತನ, ಕ್ರೌರ್ಯ ಮತ್ತು ಅಮಾನವೀಯ ನಡೆಯನ್ನು ಎಂದಿಗೂ ಕನಿಷ್ಠವಾಗಿ ಅಂದಾಜಿಸಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...