Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...