Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...