Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...