Homeಅಂತರಾಷ್ಟ್ರೀಯಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಫ್ರಾನ್ಸ್ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರನ್ನು ಪ್ಯಾರಿಸ್‍ನಲ್ಲಿ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ ಭೇಟಿ ಮಾಡಿದ್ದಾರೆ. ಕೇರಳದ ಆರ್ಥಿಕತೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕೇರಳ ಆರ್ಥಿಕತೆಯ ಮಾದರಿಯನ್ನು ಅಧ್ಯಯನ ನಡೆಸಿ, ಕೆಲ ಶಿಫಾರಸ್ಸುಗಳನ್ನು ನೀಡುವ ಇಂಗಿತವನ್ನು ಪಿಕೆಟಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಕೆಟಿಯವರೊಂದಿಗೆ economic disparity in India ಎಂಬ ವಿಷಯದ ಕುರಿತು ಆಳವಾದ ಸಂಶೋಧನೆ ನಡೆಸಿರುವ, World Inequality Database at the Paris School of Economics ನ ಸಹ ಸಂಚಾಲಕರಾದ ಪ್ರೊ.ಲುಕಾಸ್ ಚಾನ್ಸಲ್‍ರವರು ಸಹ ಉಪಸ್ಥಿತರಿದ್ದರು. ಈ ಕುರಿತು ಒಂದು ಗಂಟೆಗಳ ಕಾಲ ಚರ್ಚೆಯನ್ನು ಪಿಣರಾಯಿ ವಿಜಯನ್ ನಡೆಸಿದ್ದಾರೆ.
ಸಮಾಜದಲ್ಲಿರುವ ಆರ್ಥಿಕ ಅಸಮಾನತೆ, ಅದನ್ನು ಸರಿದೂಗಿಸಲು ತೆಗೆದುಕೊಂಡಿರುವ ಕ್ರಮಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲು ಮಾಡುತ್ತಿರುವ ಪ್ರಯತ್ನಗಳ ಕುರಿತ ಪಿಣರಾಯಿ ಚರ್ಚಿಸಿದ್ದಾರೆ. ಜೊತೆಗೆ ಅಂಚಿಗೊತ್ತಲ್ಪಟ್ಟ ಸಮುದಾಯಗಳನ್ನು ಮೇಲೆತ್ತಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ದೇಶಕ್ಕೆ ಮಾದರಿಯಾಗಿರುವ ಅಸಂಘಟಿತ ವಲಯಕ್ಕೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಆಸ್ತಿ ತೆರಿಗೆ, ಭೂಮಿ ತೆರಿಗೆ ಮತ್ತು ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕುವ ಮೂಲಕ ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವ ಸಲಹೆಯನ್ನು ಪಿಕೆಟಿ ನೀಡಿದ್ದಾರೆ. ಅದಕ್ಕೆ ವಿಜಯನ್‍ರವರು, ಪಿಕೆಟಿಯವರನ್ನು ಕೇರಳಕ್ಕೆ ಒಮ್ಮೆ ಭೇಟಿ ನೀಡಿ ಆರ್ಥಿಕ ಅಸಮಾನತೆಗಳ ಕುರಿತ ವಿಶ್ಲೇಷಣೆ ಮತ್ತು ಪರಿಹಾರೋಪಾಯಗಳ ಕುರಿತು ತಿಳಿಸಲು ಆಹ್ವಾನ ನೀಡಿದ್ದಾರೆ.

ಥಾಮಸ್ ಪಿಕೆಟಿಯವರು ಪ್ರತಿಷ್ಠಿತ ಪ್ಯಾರಿಸ್ ಸ್ಕೂಲ್ ಆಫ್ ಎಕಾನಮಿಕ್ಸ್ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‍ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆದಾಯ ಮತ್ತು ಸಂಪತ್ತಿನ ಅಸಮಾನತೆಯ ಕುರಿತು ಹೆಚ್ಚು ಅಧ್ಯಯನ ನಡೆಸಿರುವ ಇರುವ ಫ್ರೆಂಚ್‍ನ ಪ್ರಖ್ಯಾತ ಅರ್ಥತಜ್ಞರು. ಇವರ Capital in the Twenty-First Century ಪುಸ್ತಕ 2013ರಲ್ಲಿ ಬಿಡುಗಡೆಯಾಗಿ ಅಪಾರ ಜನಮನ್ನಣೆ ಗಳಿಸಿದೆ. ಇದು ಕಳೆದ 250 ವರ್ಷಗಳಲ್ಲಾಗಿರುವ ಸಂಪತ್ತಿನ ಕ್ರೋಢೀಕರಣ ಮತ್ತು ಅಸಮಾನ ಹಂಚಿಕೆಯ ಕುರಿತು ಚರ್ಚಿಸುತ್ತದೆ. ಈ ಪುಸ್ತಕವು ಹೆಚ್ಚು ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲೇ ಅತ್ಯಂತ ಹೆಚ್ಚಿನ ಸಂಪತ್ತಿನ ಅಸಮಾನ ಹಂಚಿಕೆಯಿದೆ ಎಂದು ವಾದಿಸುವುದಲ್ಲದೇ, ಸಮರ್ಪಕ ತೆರಿಗೆ ವಿಧಾನಗಳಿಂದ ಮಾತ್ರ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸುತ್ತದೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ. ಭಾರತದಲ್ಲಿನ ಶ್ರೀಮಂತ ವರ್ಗಗಳು ಅಲ್ಲಿನ ಬಡವರನ್ನು ಅತ್ಯಂತ ಕೆಳಮಟ್ಟದಲ್ಲಿ ಕಾಣುತ್ತಿದ್ದು, ಸಂಪತ್ತಿನ ಮರುಹಂಚಿಕೆಯ ರಾಜಕಾರಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೂರೋಪಿನ 13 ರಾಷ್ಟ್ರಗಳ ಪ್ರವಾಸದಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‍ರವರು ಮೇ 20ರೊಳಗೆ ಫ್ರಾನ್ಸ್, ನೆದರ್ಲೆಂಡ್, ಸ್ವಿಜರ್‍ಲ್ಯಾಂಡ್ ಮತ್ತು ಇಂಗ್ಲೆಂಡ್ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...