Homeಮುಖಪುಟಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

- Advertisement -
- Advertisement -

ಅಮೆರಿಕಾ ಮೂಲದ ಖ್ಯಾತ ವಾಹನ ತಯಾರಿಕಾ ಕಂಪೆನಿ ಫೋರ್ಡ್‌​​ ಮೋಟಾರ್ಸ್‌ ಭಾರತದಲ್ಲಿ ತನ್ನ ಉತ್ಪಾದಕ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ನಂತರ ಭಾರತದಲ್ಲಿ ಉತ್ಪಾದನಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿರುವ ಅಮೆರಿಕಾದ ಮೂರನೇ ವಾಹನ ತಯಾರಕ ಕಂಪೆನಿಯಾಗಿದೆ ಫೋರ್ಡ್‌​ ಮೋಟಾರ್ಸ್!.

ಫೋರ್ಡ್‌​ ಮೋಟಾರ್ಸ್‌ಗೆ ಗುಜರಾತ್(ಸನಂದ್) ಹಾಗೂ ತಮಿಳುನಾಡಿ(ಚೆನ್ನೈ)ನಲ್ಲಿ ಎರಡು ಉತ್ಪಾದಕ ಘಟಕಗಳಿವೆ. ಈ ಎರಡೂ ಘಟಕಗಳು ಬಂದ್ ಆಗಲಿವೆ ಎಂದು ಕಂಪೆನಿ ಹೇಳಿದೆ. ಭಾರತದಲ್ಲಿ ಕಂಪನಿಯು 2 ಬಿಲಿಯನ್ ಡಾಲರ್​ನಷ್ಟು ನಷ್ಟವನ್ನು ಅನುಭವಿಸಿದೆ, ಹೀಗಾಗಿ ಭಾರತದಿಂದ ನಾವು ಹೊರ ಹೋಗುತ್ತಿದ್ದೇವೆ ಎಂದು ಫೋರ್ಡ್‌​ ಹೇಳಿದೆ. ಕಂಪೆನಿಯು ಈ ಹಿಂದೆ ಭಾರತದ ಎರಡು ಘಟಕಗಳಲ್ಲಿ ಸುಮಾರು 2.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿತ್ತು.

ಇದನ್ನೂ ಓದಿ: ಉದ್ಯೋಗ ನಷ್ಟದ ಪರಿಣಾಮ ಚಿನ್ನದ ಮೇಲಿನ ಸಾಲದಲ್ಲಿ ಶೇ. 77ರಷ್ಟು ಹೆಚ್ಚಳ

ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಗುಜರಾತ್‌ನ ಘಟಕದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿದರೆ, 2022 ರ ಎರಡನೆ ತ್ರೈಮಾಸಿಕದಲ್ಲಿ ತಮಿಳುನಾಡಿನ ಘಟಕದಲ್ಲೂ ತನ್ನ ಕಾರ್ಯಾಚರಣೆಯನ್ನು ಫೋರ್ಡ್‌​ ನಿಲ್ಲಿಸಲಿದೆ ಎಂದು ಕಂಪೆನಿ ಹೇಳಿದೆ.

ಭಾರತದ ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿದ್ದರಿಂದ ಅಮೆರಿಕಾದ ಕಂಪೆನಿಗಳಾದ ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ಕಂಪೆನಿಗಳು ಈ ಹಿಂದೆಯೆ ಭಾರತವನ್ನು ತೊರೆದಿದ್ದವು. ಇದೀಗ ಫೋರ್ಡ್‌​ ಕೂಡಾ ತನ್ನ ಉತ್ಪಾದನೆಯನ್ನು ನಿಲ್ಲಿಸಲು ಮುಂದಾಗಿದೆ.

ವಿಶ್ವದ ಐದನೇ ಅತಿದೊಡ್ಡ ಕಾರು ತಯಾರಕ ಕಂಪೆನಿಯಾಗಿರುವ ಫೋರ್ಡ್‌​, ಭಾರತವನ್ನು ಪ್ರವೇಶಿಸಿದ ಮೊದಲ ಪ್ರಮುಖ ಜಾಗತಿಕ ಆಟೋ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಇದು 1 ಬಿಲಿಯನ್‌ ಡಾಲರ್‌ನ ಆರಂಭಿಕ ಹೂಡಿಕೆಯೊಂದಿಗೆ 1996 ರಲ್ಲಿ ಆರಂಭಗೊಂಡಿತ್ತು. ತನ್ನ ಉದ್ಯಮ ಉತ್ತುಂಗದಲ್ಲಿ ಇದ್ದಾಗ ಕಂಪೆನಿಯು ಭಾರತದಲ್ಲಿ 14,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿತ್ತು. ಪ್ರಸ್ತುತ ಕಂಪೆನಿಯು ಭಾರತದ ಮಾರುಕಟ್ಟೆಯಿಂದ ಹೊರಹೋಗುತ್ತಿರುವುದರಿಂದ ಸುಮಾರು 4,000 ಉದ್ಯೋಗಗಳು ನಷ್ಟವಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...