Homeಮುಖಪುಟಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

- Advertisement -
- Advertisement -

ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ವಿಡಿ ಸಾವರ್ಕರ್ ಮತ್ತು ಎಂ.ಎಸ್. ಗೋಲ್ವಾಲ್ಕರ್ ಅವರ ಕೃತಿಗಳನ್ನು ಸೇರಿಸುವುದನ್ನು ವಿಶ್ವವಿದ್ಯಾಲಯದ ಇಬ್ಬರು ಸದಸ್ಯರ ತಜ್ಞರ ಸಮಿತಿಯು ಪರಿಶೀಲನೆಗೆ ಒಳಪಡಿಸಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿಫಾರಸಿನಂತೆ ಈ ಸಮಿತಿಯನ್ನು ರಚಿಸಲಾಗಿದೆ.

ವಿಶ್ವವಿದ್ಯಾನಿಯಲದ ಪಠ್ಯ ಕ್ರಮದಲ್ಲಿ ಆರೆಸ್ಸೆಸ್‌‌ ನಾಯಕರ ಪುಸ್ತಕಗಳ ಸೇರ್ಪಡೆಗೆ ಸಂಬಂಧಿಸಿದ ವಿವಾದಕ್ಕೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ ವ್ಯಕ್ತಿಗಳಿಂದ ಮತ್ತು ಅವರನ್ನು ವೈಭವೀಕರಿಸುವುದರ ಬಗ್ಗೆ ಅಂತರ ಕಾಯ್ದುಕೊಂಡು ಬಂದಿದೆ. ಯಾವುದೇ ಪ್ರತಿಗಾಮಿ ಸಿದ್ಧಾಂತವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಮಿತಿಯು ಪಠ್ಯಕ್ರಮವನ್ನು ಪರಿಶೀಲಿಸುತ್ತದೆ ಮತ್ತು ಸಮಿತಿಯ ಶಿಫಾರಸುಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ, ಕಣ್ಣೂರು ವಿಶ್ವವಿದ್ಯಾನಿಲಯವು ಸಾವರ್ಕರ್ ಅವರ ‘ಹಿಂದುತ್ವ: ಹಿಂದೂ ಯಾರು’, ಗೋಲ್ವಾಲ್ಕರ್ ಅವರ ‘ಬಂಚ್ ಆಫ್‌ ಥಾಟ್ಸ್‌’, ‘ವಿ ಓರ್‌ ಅವರ್‌ ನೇಷನ್‌ಹುಡ್‌ ಡಿಫೈನೆಡ್‌’ ಕೃತಿಯನ್ನು ಎಂಎ(ಕಲಾ ಸ್ನಾತಕೋತ್ತರ) ಆಡಳಿತ ಮತ್ತು ರಾಜಕೀಯದ ವಿಷಯದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ದೀನದಯಾಳ್ ಉಪಾಧ್ಯಾಯರ ‘ಸಮಗ್ರ ಮಾನವತಾವಾದ’, ಬಾಲರಾಜ್ ಮಧೋಕ್ ಅವರ ‘ಭಾರತೀಯೀಕರಣ: ಏನು, ಏಕೆ ಮತ್ತು ಹೇಗೆ’ ಭಾಗಗಳು ಕೂಡ ಪಠ್ಯಕ್ರಮದಲ್ಲಿ ಒಳಗೊಂಡಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಗೋಪಿನಾಥ್ ರವೀಂದ್ರನ್ ಅವರು ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪವನ್ನು ತಿರಸ್ಕರಿಸಿದ್ದಾರೆ.

“ನಾವು ಗಾಂಧೀಜಿ, ನೆಹರು, ಅಂಬೇಡ್ಕರ್ ಮತ್ತು ಟಾಗೋರ್ ಅವರ ಕೃತಿಗಳನ್ನು ಸೇರಿಸಿದ್ದೇವೆ. ಹಾಗೆಯೆ ಪಠ್ಯಕ್ರಮದಲ್ಲಿ ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರ ಕೃತಿಗಳು ಒಳಗೊಂಡಿದೆ. ವಿದ್ಯಾರ್ಥಿಗಳು ಎಲ್ಲಾ ಸಿದ್ಧಾಂತಗಳ ಹಿಂದಿನ ಮೂಲ ಪಠ್ಯವನ್ನು ಕಲಿಯಲಿ ಮತ್ತು ಅರ್ಥಮಾಡಿಕೊಳ್ಳಲಿ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಹೇಳಿದ್ದು ಪ್ರಸ್ತುತ ಭಾರತದ ರಾಜಕೀಯದ ಭಾಗವಾಗಿದೆ. ಅದನ್ನು ಕಲಿಯುವುದರಲ್ಲಿ ತಪ್ಪೇನು?” ಎಂದು ಗೋಪಿನಾಥ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...