Homeಮುಖಪುಟ‘ನೀಟ್‌-2021’ ಪರೀಕ್ಷೆ - ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

- Advertisement -
- Advertisement -

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ಅರ್ಹತಾ ಪರೀಕ್ಷೆಯಾಗಿರುವ, ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌ -2021) ಭಾನುವಾರ ನಡೆಯಲಿದೆ. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಕೆಲವು ಹೊಸ ನಿಯಮಗಳನ್ನೂ ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಪಾಲಿಸುವುದು ಅವಶ್ಯವಾಗಿದೆ.

  • ವಿದ್ಯಾರ್ಥಿಗಳು ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಫ್ರಿಸ್ಕಿಂಗ್‌ಗೆ ಒಳಗಾಗಬೇಕು. ವಿದ್ಯಾರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅವರನ್ನು ಮುಟ್ಟದೇ ಪತ್ತೆ ಹಚ್ಚುವ ವಿಧಾನವಾಗಿದೆ ಇದು. ಈ ಪ್ರಕ್ರಿಯೆ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಭರಣ ಸೇರಿದಂತೆ ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌’ ಬೇಡ: ನ್ಯಾಯಮೂರ್ತಿ ರಾಜನ್
  • ಕೊರೊನಾ ಹಿನ್ನಲೆಯಲ್ಲಿ ಪರೀಕ್ಷಾ ಕೊಠಡಿ ಒಳಗೆ 50ML ಹ್ಯಾಂಡ್​​ ಸ್ಯಾನಿಟೈಜರ್​ ಬಾಟಲ್‌ಗೆ ಅನುಮತಿ ನೀಡಲಾಗಿದೆ.
  • ಪಾರದರ್ಶಕ ಬಾಟಲಿಯಲ್ಲಿ ನೀರು, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ. ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳನ್ನು ಅವಕಾಶ ಹೊಂದಿದ್ದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ನೀಟ್‌-2021 ನಲ್ಲಿ ವಸ್ತ್ರ ಸಂಹಿತೆಯನ್ನೂ ಪರಿಚಯಿಸಲಾಗಿದೆ

  • ದಪ್ಪ ಅಡಿಭಾಗವಿರುವ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ಅನುಮತಿ ಇಲ್ಲ.
  • ಗಂಡಸರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬಹುದಾಗಿದೆ.
  • ಹಗುರವಾದ ಬಟ್ಟೆಗಳನ್ನು ಧರಿಸಬೇಕಾಗಿದ್ದು, ಝಿಪ್ ಕಿಸೆಗಳಿರುವ, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ಧರಿಸಿರಬಾರದು.
  • ಸರಳವಾಗಿರುವ ಪ್ಯಾಂಟ್ ಧರಿಸಬಹುದಾಗಿದೆ.
  • ಮಹಿಳೆಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು.
  • ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಬೇಕು.

ಇದನ್ನೂ ಓದಿ: ಇದು ನೀಟ್‌ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...