HomeUncategorizedಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಚುನಾವಣಾ ಆಯೋಗದ ಆಂತರಿಕ ಕದನ ಬೀದಿಗೆ ಬಿದ್ದಿದೆ. ಚುನಾವಣಾ ಆಯುಕ್ತ ಅಶೋಕ್ ಲಾವಸಾ ಅವರು ಮೇ 4ರಿಂದೀಚೆಗೆ ಆಯೋಗ ನಡೆಸುವ ‘ಮಾದರಿ ನೀತಿ ಸಂಹಿತೆ’ ಸಭೆಗಳಿಂದ ದೂರ ಉಳಿಯುತ್ತಾ ಬರುವ ಮೂಲಕ ತಮ್ಮ ಪ್ರತಿರೋಧ ಹೊರಹಾಕಿದ ಘಟನೆ ಬೆಳಕಿಗೆ ಬಂದಿದೆ. ಚುನಾವಣಾ ಆಯೋಗ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕೇಳಿಬಂದ ಸಂಹಿತೆ ಉಲ್ಲಂಘನೆಯ ಹಲವು ಆರೋಪಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಕ್ಕೆ ಅವರ ವಿರೋಧ ಇತ್ತು ಎನ್ನಲಾಗಿದೆ.

ಅಶೋಕ್ ಲಾವಸಾ

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿರುವ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನೀತಿ ಸಂಹಿತೆ ದೂರುಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿಯೂ ಸೇರಿದಂತೆ ಇನ್ನಿಬ್ಬರು ಚುನಾವಣಾ ಆಯುಕ್ತರನ್ನು ಒಳಗೊಂಡ ಮೂವರು ಅಧಿಕಾರಿಗಳ ಒಂದು ಸಮಿತಿಯಿರುತ್ತದೆ. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಹೀಗೆ ಬಹುಮತದ ಆದೇಶಕ್ಕೆ ವ್ಯತಿರಿಕ್ತವಾಗಿ ಅಭಿಪ್ರಾಯ ಹೊರಹಾಕಿದ ಇನ್ನೊಬ್ಬ ಸದಸ್ಯರ ವಾದವನ್ನು `ಅಲ್ಪಮತ’ ಅಭಿಪ್ರಾಯ ಎಂದು ಪರಿಗಣಿಸಲಾಗುವುದು. ಇದು ಚುನಾವಣಾ ಆಯೋಗದ ನೀತಿ ಸಂಹಿತೆ ದೂರುಗಳನ್ನು ವಿಚಾರಣೆ ನಡೆಸುವ ವೈಖರಿ. ಅಶೋಕ್ ಲಾವಾಸಾ ಅವರಿಗೆ ಈ ವೈಖರಿಗೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ, ಬದಲಿಗೆ ಅಯೋಗದ ಬಹುಮತ ತೀರ್ಪಿನ ಆದೇಶವನ್ನು ನೀಡುವಾಗ ಅದರಲ್ಲಿ ತನ್ನ `ಅಲ್ಪಮತ’ ವಾದವನ್ನೂ ಉಲ್ಲೇಖಿಸಬೇಕಿತ್ತು ಎಂಬುದು ಅವರ ಬೇಡಿಕೆ. ಸಾಮಾನ್ಯವಾಗಿ ಬಹುಸದಸ್ಯ ನ್ಯಾಯಪೀಠಗಳು ತಮ್ಮ ತೀರ್ಪು ಹೇಳುವಾಗ ಹೀಗೆ ಬಹುಮತದ ತೀರ್ಪನ್ನೇ ಅಂತಿಮ ತೀರ್ಪಾಗಿ ಪ್ರಕಟಿಸುವಾಗಲೂ ಅದಕ್ಕೆ ವ್ಯತಿರಿಕ್ತ ವಾದ ಮುಂದಿಟ್ಟ ಪೀಠದ ಅಲ್ಪಮತ ವಾದವನ್ನೂ ಉಲ್ಲೇಖಿಸುತ್ತೇವೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರದಲ್ಲಿ ಮೂವರು ಆಯಕ್ತರು ತ್ರಿಸದಸ್ಯ ನ್ಯಾಯಮಂಡಳಿ ಕ್ಲೀನ್ ಚಿಟ್ ನೀಡಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ, `ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಸನೀಲ್ ಅರೋರಾ ಅವರನ್ನು ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ “ಇದು ಚುನಾವಣೆ ನಡೆಯುತ್ತಿರುವ ಸಂದರ್ಭವಾಗಿರುವುದರಿಂದ ಇಂಥಾ ಚರ್ಚೆಯನ್ನು ಮುಂದುವರೆಸುವುದು ನನಗೆ ಇಷ್ಟವಿಲ್ಲ. ಈ ಹಂತದಲ್ಲಿ, ಮೌನವಾಗಿರುವುದು ನಿಜಕ್ಕೂ ತ್ರಾಸದಾಯಕ. ಆದರೂ ಚುನಾವಣೆಗಳು ಸುಸೂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ನಾನು ಮೌನವಾಗಿರುತ್ತೇನೆ” ಎಂದಿದ್ದಾರೆ.

ಸುನೀಲ್ ಅರೋರ

ಜೊತೆಗೆ, “ಲಾವಸಾ ಅವರ ವಾದ ನನ್ನ ಗಮನಕ್ಕೆ ಬಂದಿದೆ. ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ದೂರುಗಳ ತೀರ್ಪು `ಎಕ್ಸಿಕ್ಯೂಟಿವ್ ತೀರ್ಮಾನ’ಗಳಾಗಿರುತ್ತವೆಯೇ `ಕ್ವಾಸಿಜ್ಯುಡಿಸಿಯಲ್’ ತೀರ್ಮಾನಗಳಲ್ಲ. ಅವರು ಹೇಳುವಂತೆ ಅಲ್ಪಮತ ವಾದವನ್ನು ಉಲ್ಲೇಖಿಸುವ ಅವಕಾಶ ಕ್ವಾಸಿ ಜ್ಯುಡಿಸಿಯಲ್ ತೀರ್ಮಾನಗಳಲ್ಲಿ ಸಾಧ್ಯವಿದೆ, ಆದರೆ ಎಕ್ಸಿಕ್ಯೂಟಿವ್ ತೀರ್ಮಾನಗಳಲ್ಲಿ ಅಲ್ಲ” ಎಂದು ಸ್ಪಷ್ಟಣೆ ನೀಡಿದ್ದಾರೆ.

ಚುನಾವಣಾ ಆಯೋಗದ ಆಂತರಿಕ ಕಾನೂನುಗಳ ದೃಷ್ಟಿಯಲ್ಲಿ, ಯಾವುದೇ ಪ್ರಕರಣದ ವಿಚಾರಣೆಯ ನಂತರ ಬಾಧಿತ ಪಕ್ಷಗಳಿಗೆ ತಮ್ಮ ದೂರುಗಳಿಗೆ ಪೂರಕವಾದ ಸಾಕ್ಷ್ಯಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟು ಒಂದು ಸಂಪೂರ್ಣ ತನಿಖೆಗೆ ಆದೇಶಿಸುವ ಸಾಧ್ಯತೆಯಿರುವ ಪ್ರಕರಣಗಳನ್ನು ಕ್ವಾಸಿಜ್ಯುಡಿಸಿಯಲ್ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಆದರೆ ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂತಹ ತನಿಖೆಯ ಅವಶ್ಯಕತೆ ಇರುವುದಿಲ್ಲ, ಬದಲಿಗೆ ಪ್ರಾಥಮಿಕ ಸಾಕ್ಷ್ಯಗಳನ್ನು ಆಧರಿಸಿ, ಚುನಾವಣೆ ಮುಗಿಯುವುದರೊಳಗೇ ಬಾಧಿತವಾಗುವಂತೆ ಸಂಬಂಧಪಟ್ಟ ವ್ಯಕ್ತಿ ಅಥವಾ ಪ್ರಕರಣಕ್ಕೆ ಸೂಕ್ತ ಶಿಕ್ಷೆ, ನಿರ್ಬಂಧ ಹೇರಲಾಗುವುದು. ಹಾಗಾಗಿ ಅವು `ಎಕ್ಸಿಕ್ಯೂಟಿವ್ ತೀರ್ಪು’ಗಳು ಎನಿಸಿಕೊಳ್ಳುತ್ತವೆ. ಹಾಗಾಗಿ ಇಂಥಾ ಎಕ್ಸಿಕ್ಯೂಟಿವ್ ತೀರ್ಪುಗಳಲ್ಲಿ `ಅಲ್ಪಮತ’ದ ವಾದವನ್ನೂ ಉಲ್ಲೇಖಿಸಬೇಕೆಂಬ ನಿಯಮವಿಲ್ಲ ಎಂಬುದು ಚುನಾವಣಾ ಆಯೋಗದ ವಾದ.

ಇದನ್ನು ಓದಿ: ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಅದೇನೆ ಇರಲಿ, ಚುನಾವಣಾ ಆಯೋಗ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಸಾರ್ವಜನಿಕ ಅಭಿಪ್ರಾಯ ದಟ್ಟವಾಗುತ್ತಿರುವ ಸಮಯದಲ್ಲೇ ಈ ಪ್ರಕರಣ ಹೊರಬಂದಿರುವುದು ಇಡೀ ಆಯೋಗದ ಪಾರದರ್ಶಕ, ಪ್ರಾಮಾಣಿಕತೆಗಳನ್ನೆ ಪ್ರಶ್ನಿಸುವಂತೆ ಮಾಡಿದೆ. ಕಳೆದ ವರ್ಷದ ಡಿಸೆಂಬರ್ 2ರಂದು ಮೋದಿಯವರ ಸರ್ಕಾರ ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕ ಮಾಡಿದಾಗಲೇ ಹಲವು ಚರ್ಚೆಗಳು ಹುಟ್ಟಿಕೊಂಡಿದ್ದವು. 1980ರ ರಾಜಸ್ಥಾನ್ ಕ್ಯಾಡರ್‍ನ ಐಎಎಸ್ ಅಧಿಕಾರಿಯಾದ ಸನೀಲ್ ಅರೋರಾ ಆಡಳಿತಾತ್ಮಕ ಮೇಲ್ದರ್ಜೆಯ ಹುದ್ದೆಗೇರಿಸಲ್ಪಟ್ಟದ್ದು ಎನ್‍ಡಿಎ ಅಧಿಕಾರದ ಅವಧಿಗಳಲ್ಲೇ. ರಾಜಸ್ಥಾನದ ರಾಜ್ಯ ಸರ್ಕಾರದ ಹುದ್ದೆಗಳಲ್ಲಿದ್ದ ಅರೋರಾ ಅವರನ್ನು 1999ರಲ್ಲಿ ವಾಜಪೇಯಿಯವರ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಗರಿಕ ವಿಮಾನಯಾನ ಖಾತೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸೇವೆಯ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೇ ಇಂಡಿಯನ್ ಏರ್‍ಲೈನ್ಸ್‍ನ ಛೀಫ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ನೇಮಕಗೊಂಡಿದ್ದರು. ಎನ್‍ಡಿಎ ಸರ್ಕಾರ ಅಧಿಕಾರ ಕಳೆದುಕೊಂಡು ಯುಪಿಎ ಅಧಿಕಾರಕ್ಕೆ ಬಂದ ನಂತರ, ಅರೋರ ಅವರ ಬಿಜೆಪಿ ಸಖ್ಯವನ್ನು ಸೂಕ್ಷ್ಮವಾಗಿ ಗಮನದಲ್ಲಿರಿಸಿಕೊಂಡೇ ಅವರನ್ನು ಕೇಂದ್ರ ಸೇವೆಯಿಂದ ಬಿಡುಗಡೆಗೊಳಿಸಿ ಮರಳಿ ರಾಜಸ್ಥಾನ ರಾಜ್ಯ ಸೇವೆಗೆ ನಿಯೋಜಿಸಲಾಗಿತ್ತು. ಅದಾದ ಒಂದು ದಶಕದ ನಂತರವಷ್ಟೇ ಮೋದಿಯವರು ಅಧಿಕಾರಕ್ಕೇರಿದ ತರುವಾಯ 2017ರಲ್ಲಿ ಅವರನ್ನು ರಾಜ್ಯ ಸೇವೆಯಿಂದ ಮತ್ತೆ ಕೇಂದ್ರ ಸೇವೆಗೆ ನಿಯೋಜಿಸಿಕೊಂಡು ಚುನಾವಣಾ ಆಯೋಗದ ಆಯುಕ್ತ ಹುದ್ದೆ ನೀಡಲಾಗಿತ್ತು.

ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್, ಸಿಬಿಐ, ಆರ್‍ಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ತಮ್ಮ ಆಂತರಿಕ ಕಚ್ಚಾಟದಿಂದ ಬೀದಿಗೆ ಬೀಳುತ್ತಿರುವ ಸಾಲಿಗೆ ಚುನಾವಣಾ ಆಯೋಗವೂ ಸೇರ್ಪಡೆಗೊಂಡಂತಾಗಿದೆ.

ಇದನ್ನು ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...