Homeಅಂತರಾಷ್ಟ್ರೀಯಅಫ್ಘಾನ್‌ ಮಾಜಿ ಉಪಾಧ್ಯಕ್ಷನ ಸಹೋದರನನ್ನು ಕೊಂದ ತಾಲಿಬಾನ್

ಅಫ್ಘಾನ್‌ ಮಾಜಿ ಉಪಾಧ್ಯಕ್ಷನ ಸಹೋದರನನ್ನು ಕೊಂದ ತಾಲಿಬಾನ್

- Advertisement -
- Advertisement -

ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೀಹ್ ಅವರ ಸಹೋದರ ರೋಹುಲ್ಲಾ ಅಜೀಜಿ ಮತ್ತು ಅವರ ಚಾಲಕನನ್ನು ಉತ್ತರ ಪಂಜ್‌ಶಿರ್ ಪ್ರಾಂತ್ಯದ ಕರುಖ್ ಜಿಲ್ಲೆಯಲ್ಲಿ ತಾಲಿಬಾನ್ ಗುಂಡಿಕ್ಕಿ ಕೊಂದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಅಮ್ರುಲ್ಲಾ ಸಲೀಹ್ ಅವರ ಸೋದರ ಸಂಬಂಧಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪಂಜ್‌ಶೀರ್‌ನ ತಾಲಿಬಾನ್ ವಿರೋಧಿ ಗುಂಪಿನ ಮುಂಚೂಣಿಯ ನಾಯಕರಲ್ಲಿ ಒಬ್ಬರಾಗಿರುವ ಅಜೀಜಿ ಅವರು ಗುರುವಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ತಾಲಿಬಾನಿಗಳು ತಪಾಸಣಾ ಕೇಂದ್ರದಲ್ಲಿ ತಡೆದಿದ್ದಾರೆ. ನಂತರ ಅಜೀಜಿ ಮತ್ತು ಅವರ ಚಾಲನಿಗೆ ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಅವರ ಸೋದರ ಸಂಬಂಧಿ ಶುರೇಶ್‌ ಸಲೀಹ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರತಿಭಟನಾಕಾರರ ಮೇಲೆ ತಾಲಿಬಾನ್ ಹಿಂಸಾಚಾರ; ವಿಶ್ವಸಂಸ್ಥೆ ಖಂಡನೆ

ತಾಲಿಬಾನಿಗಳು ಅಜೀಜಿ ಅವರನ್ನು ತಡೆಯುವ ಸಮಯದಲ್ಲಿ ಅವರು ಎಲ್ಲಿಗೆ ಹೋಗುತ್ತಿದ್ದರು ಎಂದು ತಿಳಿದಿಲ್ಲ ಎಂದು ಶುರೇಶ್‌‌ ಹೇಳಿದ್ದಾರೆ. ಅವರನ್ನು ತಡೆದಿದ್ದ ಪ್ರದೇಶದಲ್ಲಿ ಫೋನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಅಜೀಜಿ ಅವರ ಮೃಹ ದೇಹವನ್ನು ಆತನ ಸಂಬಂಧಿಕರಿಗೆ ನೀಡಲಾಗಿಲ್ಲ ಎಂದು ಖಾಮಾ ನ್ಯೂಸ್ ಅನ್ನು ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ. ಈ ಮಧ್ಯೆ, ತಾಲಿಬಾನ್ ಈ ಸುದ್ದಿಯನ್ನು ನಿರಾಕರಿಸಿದ್ದು, ತಾಲಿಬಾನ್‌ನೊಂದಿಗಿನ ಸಂಘರ್ಷದ ಸಮಯದಲ್ಲಿ ಅಜೀಜಿಯವರನ್ನು ಕೊಲ್ಲಲಾಯಿತು ಎಂದು ಐಎಎನ್ಎಸ್ ವರದಿ ಮಾಡಿದೆ.

ಇದು ಪಂಜ್‌ಶೀರ್ ಪ್ರಾಂತ್ಯದಲ್ಲಿ ಪ್ರಾಣ ಕಳೆದುಕೊಂಡ ತಾಲಿಬಾನ್ ವಿರೋಧಿ ನಾಯಕರ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ. ಈ ಹಿಂದೆ, ಕಮಾಂಡರ್ ಅಬ್ದುಲ್ ವದೂದ್‌‌ ಅವರು ತಾಲಿಬಾನ್‌ ವಿರೋಧಿ ಪಡೆಯ ವಕ್ತಾರ ಫಾಹಿಮ್‌ ದಷ್ಟಿ ಅವರೊಂದಿಗೆ ಹತ್ಯೆಯಾಗಿದ್ದರು.

ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಆದರೆ ತಾಲಿಬಾನ್ ಇಬ್ಬರನ್ನೂ ಕೊಂದಿರುವುದನ್ನು ನಿರಾಕರಿಸಿದ್ದು, ಬದಲಾಗಿ ಸಂಘರ್ಷದ ಸಮಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ಕಾಬೂಲ್‌ನ ಈಶಾನ್ಯದಲ್ಲಿರುವ ಪಂಜ್‌ಶೀರ್ ಪ್ರಾಂತ್ಯವನ್ನು ತಾನು ವಶಪಡಿಸಿರುವುದಾಗಿ ಕಳೆದ ವಾರ ತಾಲಿಬಾನ್‌ ಹೇಳಿತ್ತು. ಆದರೆ ಅಲ್ಲಿನ ಕೆಲವು ಭಾಗಗಳಲ್ಲಿ ಇನ್ನೂ ಹೋರಾಟ ನಡೆಯುತ್ತಿದೆ.

ತಾಲಿಬಾನ್‌ ವಿರೋಧಿ ಪಡೆಗಳು ತಾಲಿಬಾನ್‌ನಿಂದ ಕೆಲವು ಪ್ರದೇಶಗಳನ್ನು ಮರು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿಕೊಂಡಿದೆ. ಈ ಬಗ್ಗೆ ತಾಲಿಬಾನ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...