Homeರಾಜಕೀಯಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

ಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

- Advertisement -
- Advertisement -
  • ಟೀಮ್ ಗೌರಿ |
ಅಪ್ಪಚ್ಚು
ಚಂದ್ರಕಲಾ
ಜೀವಿಜಯ

ಕೊಡಗಿನ ಮಡಿಕೇರಿಯ ಹಾಲಿ ಶಾಸಕ ಅಪ್ಪಚ್ಚು ರಂಜನ್. ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್‍ನ ಚಂದ್ರಕಲಾರವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದ್ದು ಕಾಂಗ್ರೆಸ್ಸಿನಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮತ್ತು ಎಂಎಲ್‍ಸಿ ವೀಣಾ ಅಚ್ಚಯ್ಯ ಇಬ್ಬರೂ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸುವ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಹೊರತು ಮಿಕ್ಕ ಸಮಯದಲ್ಲಿ ನಾಪತ್ತೆಯಾಗಿರುತ್ತಾರೆ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಿಂದ ದೂರವಿದ್ದು ಈ ಬಾರಿ ಒಂದೊಳ್ಳೆಯ ಅವಕಾಶವಿದ್ದು ಕಾಂಗ್ರೆಸ್ ತಾನಾಗಿಯೇ ಕೈಚೆಲ್ಲಿಕೊಂಡಂತಾಗಿದೆ. ಜೆಡಿಎಸ್ ಅಭ್ಯರ್ಥಿ ಜೀವಿಜಯ ಅವರ ಬಗ್ಗೆ ಒಳ್ಳೆ ಅಭಿಪ್ರಾಯಗಳೇನೋ ಕೇಳಿಬರುತ್ತಿವೆಯಾದರೂ ಕಳೆದ ಬಾರಿ ಸೋತುಹೋದ ಇವರು ಮತ್ತೆ ಜನರ ಬಳಿ ಬರಲೇ ಇಲ್ಲವೆಂಬ ಆರೋಪವಿದೆ. ಸ್ವಂತ ಊರಿಗೆ 1 ಕಿಲೋಮೀಟರ್ ದೂರದಲ್ಲಿರುವ ಐಗೂರು ಮಸೀದಿಯ ಬಳಿ ಬಹಿರಂಗವಾಗಿ ಕುರಾನ್ ಸುಟ್ಟಾಗ ಸೌಜನ್ಯಕ್ಕೂ ಅಲ್ಪಸಂಖ್ಯಾತರನ್ನು ಸಂತೈಸದಿರುವುದು ಅವರ ಮೇಲೆ ಅಸಮಾಧಾನ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ಚಂದ್ರಕಲಾರವರು ಮತ್ತು ಜೆಡಿಎಸ್ ಜೀವಿಜಯ ಇಬ್ಬರೂ ಅರೆಭಾಷೆ ಗೌಡರಾಗಿರುವ ಕಾರಣ ಮತಗಳು ವಿಭಜನೆಯಾಗುವುದು ಖಚಿತವಾಗಿದೆ. ಈ ಕಾರಣಕ್ಕೆ ಬಿಜೆಪಿಯೇತರ ಶಾಸಕರು ಗೆಲ್ಲುವ ಎಲ್ಲ ಸಾಧ್ಯತೆಗಳೂ ಸಹ ಕ್ಷೀಣಿಸುವ ಸಾಧ್ಯತೆಗಳಿವೆ. ಹಾಲಿ ಶಾಸಕ ವಿರೋಧಿ ಅಲೆಯ ನಡುವೆಯೂ ಅಪ್ಪಚ್ಚು ರಂಜನ್ ಮತ್ತೆ ಆಯ್ಕೆಯಾದರೂ ಆಶ್ಚರ್ಯವಿಲ್ಲ.

ಬೋಪಯ್ಯ

ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರದೇ ಮೇಲುಗೈ. ಕಾಂಗ್ರೆಸ್‍ನಿಂದ ಕೊಡವ ಸಮಾಜದ ಅರುಣ್ ಮಾಚಯ್ಯ, ಜೆಡಿಎಸ್‍ನಿಂದ ಸಂಕೇತ ಪೂವಯ್ಯ ಮತ್ತು ಬಿಜೆಪಿ ಕೆ.ಜಿ.ಬೋಪಯ್ಯ ಇವರು ಕಣದಲ್ಲಿದ್ದಾರೆ. ಕೊಡವ ಸಮಾಜ ಇಲ್ಲಿಯವರೆಗೆ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡೇ ಬಂದಿದ್ದು ಅದು ತಮ್ಮ ಪಾರುಪತ್ಯಕ್ಕೆ ಧಕ್ಕೆ ತರಲಾರದು ಎಂದು ಬಲವಾಗಿ ನಂಬಿದೆ. ಆ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೊಡವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೂ ಸತತವಾಗಿ ಸೋಲುತ್ತಿದ್ದಾರೆ. ಸ್ವತಃ ಬಿಜೆಪಿಯೇ ಹಿಂದುಮುಂದು ನೋಡಿ ಬೋಪಯ್ಯಗೆ ಟಿಕೆಟ್ ಕೊಟ್ಟರೂ ಕೊಡವರು ಮತ್ತು ಮಲಯಾಳಿ ಈಡಿಗರು ಒಕ್ಕಲಿಗ ಕೆ.ಜಿ.ಬೋಪಯ್ಯರನ್ನೇ ಗೆಲ್ಲಿಸಬೇಕೆಂದು ಬಗೆದಿರುವಂತಿದೆ. ಇಲ್ಲೀವರೆಗೂ ಈ ಎರಡೂ ಜನಾಂಗ ತಮ್ಮಲ್ಲಿರುವ ಅಧಿಕಾರವನ್ನು ಕಾಯ್ದಿರಿಸಿಕೊಳ್ಳಲು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ದಾರಿ ಹಿಡಿಯುವ ಸಾಧ್ಯತೆಗಳೇ ಹೆಚ್ಚಿದೆಯಾದರು ಸದ್ಯದ ಮಟ್ಟಿಗೆ ಕಾಂಗ್ರೆಸ್‍ನ ಅರುಣ್ ಮಾಚಯ್ಯ ಕೂಡಾ ಗೆಲುವಿನ ಸಂಭಾವ್ಯತೆಯನ್ನು ಉಳಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...