Homeಕರ್ನಾಟಕಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಬಿಜೆಪಿಯವರು 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಗುತ್ತದೆ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ. ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದರು.

ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ. ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್‌ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ: ಕಲಬುರಗಿ ಕಾಂಗ್ರೆಸ್‌ಗೆ, ಬೆಳಗಾವಿ, ಹು-ಧಾರವಾಡ ಬಿಜೆಪಿಗೆ, ಕಾಣೆಯಾದ ಜೆಡಿಎಸ್

ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದು ಹೇಳಿದರು.

ನಾನು, ದೇಶಪಾಂಡೆ ಅವರು, ಧ್ರುವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...