Homeಮುಖಪುಟಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೂ ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು 2019ರಲ್ಲಿ ಘೋಷಿಸಿಕೊಂಡಿದ್ದ "ಇಂಡಿಯನ್ ಎಕ್ಸ್‌ಪ್ರೆಸ್‌"- ದಿ ವೈರ್ ಜಾಲತಾಣದ ವರದಿಯಲ್ಲಿ ಉಲ್ಲೇಖ

- Advertisement -
- Advertisement -

ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಭಾನುವಾರದ ಆವೃತ್ತಿಯಾದ ‘ದಿ ಸಂಡೇ ಎಕ್ಸ್‌ಪ್ರೆಸ್‌’ನಲ್ಲಿ ಪ್ರಕಟವಾಗಿರುವ ಉತ್ತರ ಪ್ರದೇಶ ಸರ್ಕಾರದ ಜಾಹೀರಾತಿನಲ್ಲಿ ಕೊಲ್ಕತ್ತ ಎಂಎಎ ಮೇಲ್ಸೇತುವೆ ಚಿತ್ರ ಬಳಸಿರುವ ಸಂಬಂಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪತ್ರಿಕೆ ಸ್ಪಷ್ಟನೆಯನ್ನೂ ನೀಡಿದೆ. ಆಗಿರುವ ಪ್ರಮಾದಕ್ಕೆ ವಿಷಾದಿಸಿರುವ ಎಕ್ಸ್‌ಪ್ರೆಸ್‌, “ಇದು ಪತ್ರಿಕೆಯ ಮಾರುಕಟ್ಟೆ ವಿಭಾಗದಿಂದ ಆಗಿರುವ ತಪ್ಪು” ಎಂದು ಹೇಳಿದೆ.

ಪತ್ರಿಕೋದ್ಯಮದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಮಹತ್ವದ ಸ್ಥಾನವಿದೆ. ಅಂತೆಯೇ ಅದು ತನ್ನ ಜಾಹೀರಾತು ನಿಲುವನ್ನೂ ಈ ಹಿಂದೆಯೇ ಸ್ಪಷ್ಟಪಡಿಸಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ ನೀಡಿರುವ ಸ್ಪಷ್ಟನೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ‘ದಿ ವೈರ್‌’ ಸುದ್ದಿ ಜಾಲತಾಣವು, “ತನ್ನ ನಿಲುವಿಗೇ ವಿರುದ್ಧವಾಗಿ ಎಕ್ಸ್‌ಪ್ರೆಸ್‌ ಸ್ಪಷ್ಟನೆ ನೀಡಿದೆ” ಎಂಬ ಅಭಿಪ್ರಾಯ ತಾಳಿದೆ. 2019ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್, “ಪತ್ರಿಕೆಯಲ್ಲಿ ಪ್ರಕಟವಾಗುವ ಯಾವುದೇ ಜಾಹೀರಾತಿಗೆ ಪತ್ರಿಕೆ ಜವಾಬ್ದಾರರಾಗಿವುದಿಲ್ಲ” ಎಂದು ಘೋಷಿಸಿಕೊಂಡಿರುವುನ್ನು  ದಿ ವೈರ್‌ ನೆನಪಿಸಿದೆ.

ಎಕ್ಸ್‌ಪ್ರೆಸ್ ಪ್ರಕಟಿಸಿರುವ “2019ರ ರೇಟ್ ಕಾರ್ಡ್ (ಪುಟ 10)ರಲ್ಲಿ “ಯಾವುದೇ ಜಾಹೀರಾತಿಗೆ ಹಾಗೂ ಅದರಲ್ಲಿನ ಸಂಗತಿಗೆ ಯಾವುದೇ ರೀತಿಯಲ್ಲೂ ನಾವು (ಎಕ್ಸ್‌ಪ್ರೆಸ್) ಜವಾಬ್ದಾರರಾಗಿರುವುದಿಲ್ಲ” ಎಂದು ಘೋಷಿಸಿಕೊಳ್ಳಲಾಗಿದೆ.

“ಜಾಹೀರಾತಿನಲ್ಲಿನ ವಿಷಯ ಸರಿಯಾಗಿದೆ, ಪ್ರಚಲಿವಾಗಿದೆ, ಸಂಪೂರ್ಣವಾಗಿದೆ, ಯಾವುದೇ ಸುಳ್ಳನ್ನು ಹೊಂದಿರುವುದಿಲ್ಲ ಎಂಬುದಕ್ಕೆ ಜಾಹೀರಾತುದಾರರು ಪ್ರತಿನಿಧಿಗಳಾಗಿರುತ್ತಾರೆ. ಜಾಹೀರಾತಿನಲ್ಲಿ ಬಳಸಿರುವ ಚಿತ್ರ, ಲೋಗೋ, ಬರಹ ಇತ್ಯಾದಿಗಳ್ಯಾವುವು ಮೂರನೇ ವ್ಯಕ್ತಿಯದ್ದಾಗಿರುವುದಿಲ್ಲ ಹಾಗೂ ಬೌದ್ಧಿಕ ಆಸ್ತಿಯನ್ನು ಉಲ್ಲಂಘಿಸಿರುವುದಿಲ್ಲ. ಅಸಭ್ಯ, ಅಶ್ಲೀಲ ಅಥವಾ ಅವಹೇಳನಕಾರಿಯಾಗಿ ಇರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಜಾಹೀರಾತು ಅಥವಾ ಅದರ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಎಕ್ಸ್‌‌ಪ್ರೆಸ್‌ ಹೇಳಿಕೊಂಡಿದೆ.

ತನ್ನ ನಿಲುವಿಗೆ ವಿರುದ್ಧವಾದ ಸ್ಪಷ್ಟನೆಯನ್ನು ಭಾನುವಾರ ಪ್ರಕಟವಾಗಿರುವ ಜಾಹೀರಾತಿನ ಸಂಬಂಧ ಎಕ್ಸ್‌ಪ್ರೆಸ್ ನೀಡಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....