Homeಕರ್ನಾಟಕಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ. ಕೋವಿಡ್‌ನಿಂದಾಗಿ ಎಲ್ಲರಿಗೂ ಆರ್ಥಿಕ ತೊಂದರೆಗಳಾಗಿವೆ. ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕೆನ್ನುವ ಮನಸ್ಥಿತಿಗೆ ಬಂದದ್ದರಿಂದ ಇಂಥ ಕೆಲಸಗಳು ಆಗುತ್ತವೆ ಎಂದರು.

ಮಾನವೀಯತೆ ಬಹಳ ಮುಖ್ಯ. ಇನ್ನೊಬ್ಬರಿಗಾಗಿ ಮನ ಮಿಡಿಯದಿದ್ದರೆ, ಮತ್ತೊಬ್ಬರಿಗಾಗಿ ನಾವು ಕೆಲಸ ಮಾಡದಿದ್ದರೆ, ಈ ಜೀವನ ಸಾರ್ಥಕವಾಗುವುದಿಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದ ಸಾಕಷ್ಟು ಪಾಠವನ್ನು ಕಲಿತಿದ್ದೇವೆ. ಕೋವಿಡ್ ಮೂರನೇ ಅಲೆ ಬರಬಾರದು. ಬಂದರೂ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಕ್ಸಿಜನ್ ಮಹತ್ವವನ್ನು ಕೋವಿಡ್ ಸಂದರ್ಭದಲ್ಲಿ ಅರಿತೆವು. ದಿನನಿತ್ಯದ ಆಹಾರದಲ್ಲಿನ ಮಹತ್ವವನ್ನು ಅರಿತು, ಪೌಷ್ಟಿಕ ಆಹಾರವನ್ನು ಪಡೆದುಕೊಂಡರೆ, ನಮ್ಮ ದೇಹದ ವ್ಯವಸ್ಥೆ ಸುಧಾರಿಸುತ್ತದೆ. ಏನಾದರೂ ಕೊರತೆಯಾದಾಗ ಮಾತ್ರ ನಮಗೆ ಅದರ ಮಹತ್ವ ತಿಳಿಯುತ್ತದೆ. ಜಯನಗರ ಟಿ. ಬ್ಲಾಕ್ ಆಸ್ಪತ್ರೆ ಕೊರತೆಯಾದ ಸಂದರ್ಭದಲ್ಲಿ ಹುಟ್ಟಿಕೊಂಡಿದ್ದು, ಎಲ್ಲರೂ ಈ ಆಸ್ಪತ್ರೆಗೆ ಸಹಾಯ ಮಾಡಿದ್ದಾರೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಇಲ್ಲಿನ ಸಿಬ್ಬಂದಿಯದ್ದು ಎಂದು ತಿಳಿಸಿದರು.

ಇದನ್ನೂ ಓದಿ: ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಕೊಡುಗೆ ನೀಡಿದ ಎಲ್ಲ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಆಗ ಮಾತ್ರ ಜೀವನಕ್ಕೆ ನಿಜವಾದ ಅರ್ಥ ಬರುತ್ತದೆ. ಅಗತ್ಯಕ್ಕಿಂತ ಹೆಚ್ಚಿನದನ್ನು ಪಡೆದುಕೊಳ್ಳುವ ಪ್ರವೃತ್ತಿಗಿಂತ ಕೊಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದರು.

ಆರೋಗ್ಯ ವ್ಯವಸ್ಥೆ ಒಂದೇ ಪ್ರಾಧಿಕಾರದಡಿಗೆ ಬರಬೇಕು ಎನ್ನುವ ಚಿಂತನೆ ಇದೆ. ಬೆಂಗಳೂರಿಗೆ ಯೋಜಿತ ಬೆಳವಣಿಗೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ದೊರೆಯಬೇಕು. ಬೆಂಗಳೂರಿನಲ್ಲಿ ಮೆಗಾ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಿ ಇನ್ನಷ್ಟು ವಾಸಯೋಗ್ಯವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯ ರೆಡ್ಡಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...