Homeಕರ್ನಾಟಕಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ. ಕೋವಿಡ್‌ನಿಂದಾಗಿ ಎಲ್ಲರಿಗೂ ಆರ್ಥಿಕ ತೊಂದರೆಗಳಾಗಿವೆ. ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕೆನ್ನುವ ಮನಸ್ಥಿತಿಗೆ ಬಂದದ್ದರಿಂದ ಇಂಥ ಕೆಲಸಗಳು ಆಗುತ್ತವೆ ಎಂದರು.

ಮಾನವೀಯತೆ ಬಹಳ ಮುಖ್ಯ. ಇನ್ನೊಬ್ಬರಿಗಾಗಿ ಮನ ಮಿಡಿಯದಿದ್ದರೆ, ಮತ್ತೊಬ್ಬರಿಗಾಗಿ ನಾವು ಕೆಲಸ ಮಾಡದಿದ್ದರೆ, ಈ ಜೀವನ ಸಾರ್ಥಕವಾಗುವುದಿಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದ ಸಾಕಷ್ಟು ಪಾಠವನ್ನು ಕಲಿತಿದ್ದೇವೆ. ಕೋವಿಡ್ ಮೂರನೇ ಅಲೆ ಬರಬಾರದು. ಬಂದರೂ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಕ್ಸಿಜನ್ ಮಹತ್ವವನ್ನು ಕೋವಿಡ್ ಸಂದರ್ಭದಲ್ಲಿ ಅರಿತೆವು. ದಿನನಿತ್ಯದ ಆಹಾರದಲ್ಲಿನ ಮಹತ್ವವನ್ನು ಅರಿತು, ಪೌಷ್ಟಿಕ ಆಹಾರವನ್ನು ಪಡೆದುಕೊಂಡರೆ, ನಮ್ಮ ದೇಹದ ವ್ಯವಸ್ಥೆ ಸುಧಾರಿಸುತ್ತದೆ. ಏನಾದರೂ ಕೊರತೆಯಾದಾಗ ಮಾತ್ರ ನಮಗೆ ಅದರ ಮಹತ್ವ ತಿಳಿಯುತ್ತದೆ. ಜಯನಗರ ಟಿ. ಬ್ಲಾಕ್ ಆಸ್ಪತ್ರೆ ಕೊರತೆಯಾದ ಸಂದರ್ಭದಲ್ಲಿ ಹುಟ್ಟಿಕೊಂಡಿದ್ದು, ಎಲ್ಲರೂ ಈ ಆಸ್ಪತ್ರೆಗೆ ಸಹಾಯ ಮಾಡಿದ್ದಾರೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಇಲ್ಲಿನ ಸಿಬ್ಬಂದಿಯದ್ದು ಎಂದು ತಿಳಿಸಿದರು.

ಇದನ್ನೂ ಓದಿ: ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಕೊಡುಗೆ ನೀಡಿದ ಎಲ್ಲ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಆಗ ಮಾತ್ರ ಜೀವನಕ್ಕೆ ನಿಜವಾದ ಅರ್ಥ ಬರುತ್ತದೆ. ಅಗತ್ಯಕ್ಕಿಂತ ಹೆಚ್ಚಿನದನ್ನು ಪಡೆದುಕೊಳ್ಳುವ ಪ್ರವೃತ್ತಿಗಿಂತ ಕೊಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದರು.

ಆರೋಗ್ಯ ವ್ಯವಸ್ಥೆ ಒಂದೇ ಪ್ರಾಧಿಕಾರದಡಿಗೆ ಬರಬೇಕು ಎನ್ನುವ ಚಿಂತನೆ ಇದೆ. ಬೆಂಗಳೂರಿಗೆ ಯೋಜಿತ ಬೆಳವಣಿಗೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ದೊರೆಯಬೇಕು. ಬೆಂಗಳೂರಿನಲ್ಲಿ ಮೆಗಾ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಿ ಇನ್ನಷ್ಟು ವಾಸಯೋಗ್ಯವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯ ರೆಡ್ಡಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...