Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...