Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...