Homeಸಿನಿಮಾಕ್ರೀಡೆಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ - ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

ಕರಾವಳಿ: ಕಂಬಳ ಓಟಕ್ಕೆ ಟ್ರೈನಿಂಗ್ – ಸಿದ್ದಿಗಳಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ತರಬೇತಿ

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡದ ಅಥ್ಲೀಟುಗಳನ್ನು ಕಂಬಳ ಓಟಗಾರರನ್ನಾಗಿ ತರಬೇತುಗೊಳಿಸಲು ಕರಾವಳಿಯ ಕಂಬಳ ಸಮಿತಿ ನಿರ್ಧರಿಸಿದೆ. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಮತ್ತು ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಕಂಬಳದ ಓಟಗಾರಿಕೆಯನ್ನು ಕಲಿಸಿಕೊಡುವುದು ಕಂಬಳ ಅಕಾಡಮಿಯ ಉದ್ದೇಶವಾಗಿದೆ.

ಈ ತರಬೇತಿ ವಾರಾಂತ್ಯದಲ್ಲಿ ನಡೆಯಲಿದ್ದು, ಮೂಡಬಿದಿರೆ, ಮಿಯಾರು, ಬೈಂದೂರು ಮತ್ತು ಪೈವಳಿಕೆಯಲ್ಲಿ ಶಿಬಿರಗಳು ನಡೆಯಲಿವೆ. ನಿವೃತ್ತ ಕಂಬಳ ಓಟಗಾರರನ್ನು ಕೋಚ್‌ಗಳಾಗಿ ಆರಿಸಲಾಗಿದೆ. ಕೇರಳದ ಆಸಕ್ತರಿಗೂ ತರಬೇತಿ ಕೊಡಲಾಗುತ್ತದೆ. ಅಕ್ಟೋಬರ್‌ನಿಂದ ನಿಯಮಿತವಾಗಿ ಶಿಬಿರಗಳು ನಡೆಯಲಿದ್ದು, ಕೋವಿಡ್ ನಿರ್ಭಂದಗಳಿರುವುದರಿಂದ ಸದ್ಯ ಮೂಡಬಿದುರೆಯಲ್ಲಿ ಮಾತ್ರ ವಾರಾಂತ್ಯದ ಶಿಬಿರ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಸಮಿತಿ ಕೆಲವು ವರ್ಷಗಳ ಹಿಂದೆಯೆ ಇಂಥದೊಂದು ತರಬೇತಿಗೆ ಯೋಜನೆ ಹಾಕಿತ್ತು. ಆದರೆ ಗಾಯದ ಹೆದರಿಕೆಯಿಂದ ಅಥ್ಲೀಟ್‌ಗಳು ಮನಸ್ಸು ಮಾಡಿರಲಿಲ್ಲ. ಸಿಂಥೆಟಿಕ್ ಟ್ರಾಕ್‌ನಲ್ಲಿ ಓಡಿದಂತಲ್ಲ ಕಂಬಳದ ಕೆಸರು ಗದ್ದೆಯಲ್ಲಿ ಓಡುವುದು. ಕೆಸರು ಗದ್ದೆಯ ಓಟ ಕಠಿಣವಾದುದು.

ಮೂಡಬಿದಿರೆಯಲ್ಲಿ ಖ್ಯಾತ ಕಂಬಳ ಓಟಗಾರ ರವಿ ಅಳದಂಗಡಿಯವರ ಮಗ ಗಿರೀಶ್ ಅಥ್ಲೀಟ್‌ಗಳೂ ಸೇರಿದಂತೆ 40 ಮಂದಿಗೆ ಕಂಬಳ ಗದ್ದೆಯಲ್ಲಿ ಓಡುವ ತರಬೇತಿ ನೀಡುತ್ತಿದ್ದಾರೆ. ಈಚೆಗೆ ಕಂಬಳದ ಓಟಗಾರ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ಮತ್ತು ಅವರನ್ನು ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸುತ್ತಿರುವುದು ತರುಣರನ್ನು ಕಂಬಳ ಓಟದತ್ತ ಆಕರ್ಷಿಸುತ್ತಿದೆ. ಹೀಗಾಗಿ ಅಥ್ಲೀಟ್‌ಗಳು ಸೇರಿದಂತೆ ಇತರ ಯುವಕರೂ ಕಂಬಳ ಗದ್ದೆಯಲ್ಲಿ ಸಾಧನೆ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ.

ಸಿದ್ದಿ ಕಲಿಗಳಿಗೆ ಒಲಿಂಪಿಕ್ಸ್ ಗುರಿ!!

ರಾಜ್ಯ ಕ್ರೀಡಾ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರ ಉತ್ತರ ಕನ್ನಡದ ಅಂಕೋಲಾ, ಯಲ್ಲಾಪುರ, ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಸಿದ್ದಿ ಜನಾಂಗದ 24 ಪ್ರತಿಭಾವಂತ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟದ ತರಬೇತಿಗೆ ಆಯ್ಕೆ ಮಾಡಿದೆ.

ಕ್ರೀಡಾ ಸಾಧನೆಗೆ ಹೇಳಿ ಮಾಡಿಸಿದಂತ ದೈಹಿಕ ಸಾಮರ್ಥ್ಯದ ಆಫ್ರಿಕಾ ಮೂಲದ ಸಿದ್ದಿ ತರುಣ, ತರುಣಿಯರನ್ನು ಹಲವು ಬಾರಿ ಆಯ್ಕೆ ಮಾಡಿ ಬೆಂಗಳೂರಿನ ಕ್ರೀಡಾ ವಸತಿ ನಿಲಯಗಳಿಗೆ ಸೆರಿಸಲಾಗಿತ್ತಾದರೂ ಹೇಳಿಕೊಳ್ಳುವಂತ ಸಾಧನೆಯೇನೂ ಆಗಿಲ್ಲ. ಸರಿಯಾಗಿ ತರಬೇತಿ ಕೊಡದ ಮತ್ತು ಕ್ರೀಡಾಳುಗಳಿಗೆ ಸೌಲಭ್ಯ ಒದಗಿಸದ ಕೀಡಾ ಇಲಾಖೆಯ ವೈಫಲ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.

ಈಚೆಗೆ ಕ್ರೀಡಾ ಇಲಾಖೆ ಉತ್ತರ ಕನ್ನಡದ 400 ವಿದ್ಯಾರ್ಥಿಗಳನ್ನು ಕ್ರೀಡಾ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಿತ್ತು. ಇದರಲ್ಲಿ ಸಿದ್ದಿ ಜನಾಂಗದ 24 ಮಂದಿಯಲ್ಲಿ ಕ್ರೀಡಾ ಪ್ರತಿಭೆಯಿರುವುದನ್ನು ಗುರುತಿಸಿದ ಕ್ರೀಡಾ ವಿಜ್ಞಾನ ಕೇಂದ್ರದ ತಂಡ ಅವರನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿದೆ. ಇವರಿಗೆ ಬೇರೆ ಯಾವ ಪರೀಕ್ಷೆಗೂ ಒಳಪಡಿಸದೆ ಬೆಂಗಳೂರಿನ ವಿದ್ಯಾನಗರ ಮತ್ತಿತರೆಡೆ ಇರುವ ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಟ್ಟು 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿದ್ದಪಡಿಸುವ ಗುರಿ ಕ್ರೀಡಾ ಇಲಾಖೆಯದು.

ಈ ಕ್ರೀಡಾ ಪಟುಗಳೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ಸಂವಾದ ನಡೆಸಿದ ಕ್ರೀಡಾ ಮಂತ್ರಿ ಕೆ.ಸಿ ನಾರಾಯಣ ಗೌಡ ಉನ್ನತ ತರಬೇತಿಗೆ ಚಾಲನೆ ನಿಡಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...