Homeಮುಖಪುಟಪೆಗಾಸಸ್‌ ಹಗರಣ - ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

- Advertisement -
- Advertisement -

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೋಮವಾರ ಹೇಳಿದೆ. ಈ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಒಕ್ಕೂಟ ಸರ್ಕಾರ ಹೇಳಿದ್ದು, ಅದಕ್ಕಾಗಿಯೇ ಡೊಮೇನ್ ತಜ್ಞರ ಸಮಿತಿಯನ್ನು ರಚಿಸುವುದಾಗಿ ಅದು ತಿಳಿಸಿದೆ.

ಸುಪ್ರೀಂಕೋರ್ಟ್‌ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು, ಜೊತೆಗೆ ಒಕ್ಕೂಟ ಸರ್ಕಾರ ಕೂಡಾ ಈ ಬಗ್ಗೆ ಎರಡು ಬಾರಿ ಸಮಯ ತೆಗೆದುಕೊಂಡಿತ್ತು. “ಡೊಮೇನ್ ತಜ್ಞರ ಸಮಿತಿಯ ವರದಿಯು ಸುಪ್ರೀಂಕೋರ್ಟ್‌ಗೆ ಲಭ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಆದರೆ ಇದಕ್ಕೆ ಕೋಪಗೊಂಡ ಸುಪ್ರೀಂಕೋರ್ಟ್‌, ‘ರಾಷ್ಟ್ರೀಯ ಭದ್ರತೆ’ ಕುರಿತ ವಿಷಯನ್ನು ನಾವು ಅರ್ಥಮಾಡಿಕೊಂಡಿದ್ದು, ಆದರೆ ಸರ್ಕಾರದೊಂದಿಗೆ ವ್ಯಕ್ತಿಗಳ ಫೋನ್ ಹ್ಯಾಕಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಲು ಮಾತ್ರ ಕೇಳಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

“ಕಳೆದ ಬಾರಿಯೂ ರಾಷ್ಟ್ರೀಯ ಭದ್ರತೆ ಕುರಿತು ಹೇಳಲಾಯಿತು… ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ವೈಯಕ್ತಿಕ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆಯೆ ಎಂದು ನಾವು ನಿಮ್ಮನ್ನು ಕೇಳಿದ್ದೇವೆ … ಹಾಗಾಗಿ ಅದು ಅಧಿಕೃತವಾಗಿದೆಯೇ ಎಂದು ನಿಮ್ಮ ಅಫಿಡವಿಟ್ ಸಲ್ಲಿಸಿ” ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಕಳೆದ ತಿಂಗಳು ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಜೊತೆಗೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೆ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಕೋರ್ಟ್‌ ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತು.

“ನಾವು ಹ್ಯಾಕ್ ಆಗಿರುವ ವ್ಯಕ್ತಿಗಳ ಫೋನ್‌ಗಳ ಸಮಸ್ಯೆಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇವೆ. ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳುವ ವ್ಯಕ್ತಿಗಳೂ ಇದ್ದಾರೆ. ಈ ಬಗ್ಗೆ ಯಾವ ಏಜೆನ್ಸಿಗೆ ಅಧಿಕಾರವಿದೆ ಮತ್ತು ಅದಕ್ಕೆ ಅನುಮತಿ ಇದೆಯೋ ಇಲ್ಲವೋ … ಎಂದು ನಮಗೆ ತಿಳಿಯಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಅರ್ಜಿದಾರರಾಗಿರುವ ಪತ್ರಕರ್ತ ಎನ್ ರಾಮ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್‌, “ನಾವು ಪೆಗಾಸಸ್‌ ಅನ್ನು ಬಳಸಿದ್ದಾರೆಯೆ ಎಂದು ತಿಳಿಯಲು ಬಯಸುತ್ತೇವೆ… ರಾಷ್ಟ್ರೀಯ ಭದ್ರತೆಗೆ ಅಡ್ಡಿಪಡಿಸಲು ನಾವು ಬಯಸುವುದಿಲ್ಲ. ಇದು ವ್ಯಕ್ತಿಗಳ ಗೌಪ್ಯತೆಯ ಬಗ್ಗೆಗಿನ ವಿಷಯವಾಗಿದೆ. ಒಂದು ವೇಳೆ ಸಾಮಾನ್ಯ ನಾಗರೀಕರನ್ನು ಗುರಿಯಾಗಿಸಿ ಪೆಗಾಸಸ್‌ ಅನ್ನು ಬಳಸಿದರೆ ಅದು ತುಂಬಾ ಗಂಭೀರ ವಿಚಾರವಾಗಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯವು ಈ ವಿಷಯದ ಮೇಲೆ ಆದೇಶಗಳನ್ನು ಕಾಯ್ದಿರಿಸಿದ್ದು, ಎರಡು ಮೂರು ದಿನಗಳಲ್ಲಿ ಅವುಗಳನ್ನು ಘೋಷಿಸುವುದಾಗಿ ಹೇಳಿತು. ಸರ್ಕಾರವು ತನ್ನ ಮನಸ್ಸನ್ನು ಬದಲಾಯಿಸಿದರೆ ಅದಕ್ಕಿಂತ ಮೊದಲು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದ್ದಾರೆ.

ಇಸ್ರೇಲಿ ಮೂಲದ ಪೆಗಾಸಸ್‌ ತಂ‌ತ್ರಾಂಶವನ್ನು ಬಳಸಿಕೊಂಡು, ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಸೇರಿದಂತೆ ಸುಮಾರು 300 ಭಾರತೀಯ ಮೇಲೆ ಗೂಢಚಾರ ಮಾಡಲಾಗಿದೆ ಎಂದು, ಸುದ್ದಿ ಸಂಸ್ಥೆ ದಿ ವೈರ್‌ ತನಿಖಾ ವರದಿ ಪ್ರಕಟ ಮಾಡಿತ್ತು. ದಿ ವೈರ್ ಇತರ ಅಂತಾರಾಷ್ಟ್ರೀಯ ಮಾಧ್ಯಮಗಳ ಜೊತೆ ಸೇರಿ ಈ ತನಿಖಾ ವರದಿಯನ್ನು ಮಾಡಿತ್ತು. ಈ ವರದಿ ಪ್ರಕಟವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಸರ್ಕಾರದ ವಿರುದ್ದ ಭಾರಿ ಆಕ್ರೋಶ, ಪ್ರತಿಭಟನೆಗಳು ದಾಖಲಾಗಿದ್ದವು.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

Karnataka Legislative Assembly | ಕರ್ನಾಟಕ ವಿಧಾನಸಭಾ ಅಧಿವೇಶನ | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...