Homeಮುಖಪುಟಪೆಗಾಸಸ್‌ ಹಗರಣ - ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

- Advertisement -
- Advertisement -

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೋಮವಾರ ಹೇಳಿದೆ. ಈ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಒಕ್ಕೂಟ ಸರ್ಕಾರ ಹೇಳಿದ್ದು, ಅದಕ್ಕಾಗಿಯೇ ಡೊಮೇನ್ ತಜ್ಞರ ಸಮಿತಿಯನ್ನು ರಚಿಸುವುದಾಗಿ ಅದು ತಿಳಿಸಿದೆ.

ಸುಪ್ರೀಂಕೋರ್ಟ್‌ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು, ಜೊತೆಗೆ ಒಕ್ಕೂಟ ಸರ್ಕಾರ ಕೂಡಾ ಈ ಬಗ್ಗೆ ಎರಡು ಬಾರಿ ಸಮಯ ತೆಗೆದುಕೊಂಡಿತ್ತು. “ಡೊಮೇನ್ ತಜ್ಞರ ಸಮಿತಿಯ ವರದಿಯು ಸುಪ್ರೀಂಕೋರ್ಟ್‌ಗೆ ಲಭ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಆದರೆ ಇದಕ್ಕೆ ಕೋಪಗೊಂಡ ಸುಪ್ರೀಂಕೋರ್ಟ್‌, ‘ರಾಷ್ಟ್ರೀಯ ಭದ್ರತೆ’ ಕುರಿತ ವಿಷಯನ್ನು ನಾವು ಅರ್ಥಮಾಡಿಕೊಂಡಿದ್ದು, ಆದರೆ ಸರ್ಕಾರದೊಂದಿಗೆ ವ್ಯಕ್ತಿಗಳ ಫೋನ್ ಹ್ಯಾಕಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಲು ಮಾತ್ರ ಕೇಳಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

“ಕಳೆದ ಬಾರಿಯೂ ರಾಷ್ಟ್ರೀಯ ಭದ್ರತೆ ಕುರಿತು ಹೇಳಲಾಯಿತು… ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ವೈಯಕ್ತಿಕ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆಯೆ ಎಂದು ನಾವು ನಿಮ್ಮನ್ನು ಕೇಳಿದ್ದೇವೆ … ಹಾಗಾಗಿ ಅದು ಅಧಿಕೃತವಾಗಿದೆಯೇ ಎಂದು ನಿಮ್ಮ ಅಫಿಡವಿಟ್ ಸಲ್ಲಿಸಿ” ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಕಳೆದ ತಿಂಗಳು ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಜೊತೆಗೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೆ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಕೋರ್ಟ್‌ ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತು.

“ನಾವು ಹ್ಯಾಕ್ ಆಗಿರುವ ವ್ಯಕ್ತಿಗಳ ಫೋನ್‌ಗಳ ಸಮಸ್ಯೆಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇವೆ. ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳುವ ವ್ಯಕ್ತಿಗಳೂ ಇದ್ದಾರೆ. ಈ ಬಗ್ಗೆ ಯಾವ ಏಜೆನ್ಸಿಗೆ ಅಧಿಕಾರವಿದೆ ಮತ್ತು ಅದಕ್ಕೆ ಅನುಮತಿ ಇದೆಯೋ ಇಲ್ಲವೋ … ಎಂದು ನಮಗೆ ತಿಳಿಯಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಅರ್ಜಿದಾರರಾಗಿರುವ ಪತ್ರಕರ್ತ ಎನ್ ರಾಮ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್‌, “ನಾವು ಪೆಗಾಸಸ್‌ ಅನ್ನು ಬಳಸಿದ್ದಾರೆಯೆ ಎಂದು ತಿಳಿಯಲು ಬಯಸುತ್ತೇವೆ… ರಾಷ್ಟ್ರೀಯ ಭದ್ರತೆಗೆ ಅಡ್ಡಿಪಡಿಸಲು ನಾವು ಬಯಸುವುದಿಲ್ಲ. ಇದು ವ್ಯಕ್ತಿಗಳ ಗೌಪ್ಯತೆಯ ಬಗ್ಗೆಗಿನ ವಿಷಯವಾಗಿದೆ. ಒಂದು ವೇಳೆ ಸಾಮಾನ್ಯ ನಾಗರೀಕರನ್ನು ಗುರಿಯಾಗಿಸಿ ಪೆಗಾಸಸ್‌ ಅನ್ನು ಬಳಸಿದರೆ ಅದು ತುಂಬಾ ಗಂಭೀರ ವಿಚಾರವಾಗಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯವು ಈ ವಿಷಯದ ಮೇಲೆ ಆದೇಶಗಳನ್ನು ಕಾಯ್ದಿರಿಸಿದ್ದು, ಎರಡು ಮೂರು ದಿನಗಳಲ್ಲಿ ಅವುಗಳನ್ನು ಘೋಷಿಸುವುದಾಗಿ ಹೇಳಿತು. ಸರ್ಕಾರವು ತನ್ನ ಮನಸ್ಸನ್ನು ಬದಲಾಯಿಸಿದರೆ ಅದಕ್ಕಿಂತ ಮೊದಲು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದ್ದಾರೆ.

ಇಸ್ರೇಲಿ ಮೂಲದ ಪೆಗಾಸಸ್‌ ತಂ‌ತ್ರಾಂಶವನ್ನು ಬಳಸಿಕೊಂಡು, ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಸೇರಿದಂತೆ ಸುಮಾರು 300 ಭಾರತೀಯ ಮೇಲೆ ಗೂಢಚಾರ ಮಾಡಲಾಗಿದೆ ಎಂದು, ಸುದ್ದಿ ಸಂಸ್ಥೆ ದಿ ವೈರ್‌ ತನಿಖಾ ವರದಿ ಪ್ರಕಟ ಮಾಡಿತ್ತು. ದಿ ವೈರ್ ಇತರ ಅಂತಾರಾಷ್ಟ್ರೀಯ ಮಾಧ್ಯಮಗಳ ಜೊತೆ ಸೇರಿ ಈ ತನಿಖಾ ವರದಿಯನ್ನು ಮಾಡಿತ್ತು. ಈ ವರದಿ ಪ್ರಕಟವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಸರ್ಕಾರದ ವಿರುದ್ದ ಭಾರಿ ಆಕ್ರೋಶ, ಪ್ರತಿಭಟನೆಗಳು ದಾಖಲಾಗಿದ್ದವು.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

Karnataka Legislative Assembly | ಕರ್ನಾಟಕ ವಿಧಾನಸಭಾ ಅಧಿವೇಶನ | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...