Homeಮುಖಪುಟಪೆಗಾಸಸ್‌ ಹಗರಣ - ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

- Advertisement -
- Advertisement -

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೋಮವಾರ ಹೇಳಿದೆ. ಈ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಒಕ್ಕೂಟ ಸರ್ಕಾರ ಹೇಳಿದ್ದು, ಅದಕ್ಕಾಗಿಯೇ ಡೊಮೇನ್ ತಜ್ಞರ ಸಮಿತಿಯನ್ನು ರಚಿಸುವುದಾಗಿ ಅದು ತಿಳಿಸಿದೆ.

ಸುಪ್ರೀಂಕೋರ್ಟ್‌ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು, ಜೊತೆಗೆ ಒಕ್ಕೂಟ ಸರ್ಕಾರ ಕೂಡಾ ಈ ಬಗ್ಗೆ ಎರಡು ಬಾರಿ ಸಮಯ ತೆಗೆದುಕೊಂಡಿತ್ತು. “ಡೊಮೇನ್ ತಜ್ಞರ ಸಮಿತಿಯ ವರದಿಯು ಸುಪ್ರೀಂಕೋರ್ಟ್‌ಗೆ ಲಭ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಆದರೆ ಇದಕ್ಕೆ ಕೋಪಗೊಂಡ ಸುಪ್ರೀಂಕೋರ್ಟ್‌, ‘ರಾಷ್ಟ್ರೀಯ ಭದ್ರತೆ’ ಕುರಿತ ವಿಷಯನ್ನು ನಾವು ಅರ್ಥಮಾಡಿಕೊಂಡಿದ್ದು, ಆದರೆ ಸರ್ಕಾರದೊಂದಿಗೆ ವ್ಯಕ್ತಿಗಳ ಫೋನ್ ಹ್ಯಾಕಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಲು ಮಾತ್ರ ಕೇಳಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

“ಕಳೆದ ಬಾರಿಯೂ ರಾಷ್ಟ್ರೀಯ ಭದ್ರತೆ ಕುರಿತು ಹೇಳಲಾಯಿತು… ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ವೈಯಕ್ತಿಕ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆಯೆ ಎಂದು ನಾವು ನಿಮ್ಮನ್ನು ಕೇಳಿದ್ದೇವೆ … ಹಾಗಾಗಿ ಅದು ಅಧಿಕೃತವಾಗಿದೆಯೇ ಎಂದು ನಿಮ್ಮ ಅಫಿಡವಿಟ್ ಸಲ್ಲಿಸಿ” ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಕಳೆದ ತಿಂಗಳು ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಜೊತೆಗೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೆ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಕೋರ್ಟ್‌ ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತು.

“ನಾವು ಹ್ಯಾಕ್ ಆಗಿರುವ ವ್ಯಕ್ತಿಗಳ ಫೋನ್‌ಗಳ ಸಮಸ್ಯೆಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇವೆ. ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳುವ ವ್ಯಕ್ತಿಗಳೂ ಇದ್ದಾರೆ. ಈ ಬಗ್ಗೆ ಯಾವ ಏಜೆನ್ಸಿಗೆ ಅಧಿಕಾರವಿದೆ ಮತ್ತು ಅದಕ್ಕೆ ಅನುಮತಿ ಇದೆಯೋ ಇಲ್ಲವೋ … ಎಂದು ನಮಗೆ ತಿಳಿಯಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಅರ್ಜಿದಾರರಾಗಿರುವ ಪತ್ರಕರ್ತ ಎನ್ ರಾಮ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್‌, “ನಾವು ಪೆಗಾಸಸ್‌ ಅನ್ನು ಬಳಸಿದ್ದಾರೆಯೆ ಎಂದು ತಿಳಿಯಲು ಬಯಸುತ್ತೇವೆ… ರಾಷ್ಟ್ರೀಯ ಭದ್ರತೆಗೆ ಅಡ್ಡಿಪಡಿಸಲು ನಾವು ಬಯಸುವುದಿಲ್ಲ. ಇದು ವ್ಯಕ್ತಿಗಳ ಗೌಪ್ಯತೆಯ ಬಗ್ಗೆಗಿನ ವಿಷಯವಾಗಿದೆ. ಒಂದು ವೇಳೆ ಸಾಮಾನ್ಯ ನಾಗರೀಕರನ್ನು ಗುರಿಯಾಗಿಸಿ ಪೆಗಾಸಸ್‌ ಅನ್ನು ಬಳಸಿದರೆ ಅದು ತುಂಬಾ ಗಂಭೀರ ವಿಚಾರವಾಗಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯವು ಈ ವಿಷಯದ ಮೇಲೆ ಆದೇಶಗಳನ್ನು ಕಾಯ್ದಿರಿಸಿದ್ದು, ಎರಡು ಮೂರು ದಿನಗಳಲ್ಲಿ ಅವುಗಳನ್ನು ಘೋಷಿಸುವುದಾಗಿ ಹೇಳಿತು. ಸರ್ಕಾರವು ತನ್ನ ಮನಸ್ಸನ್ನು ಬದಲಾಯಿಸಿದರೆ ಅದಕ್ಕಿಂತ ಮೊದಲು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದ್ದಾರೆ.

ಇಸ್ರೇಲಿ ಮೂಲದ ಪೆಗಾಸಸ್‌ ತಂ‌ತ್ರಾಂಶವನ್ನು ಬಳಸಿಕೊಂಡು, ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಸೇರಿದಂತೆ ಸುಮಾರು 300 ಭಾರತೀಯ ಮೇಲೆ ಗೂಢಚಾರ ಮಾಡಲಾಗಿದೆ ಎಂದು, ಸುದ್ದಿ ಸಂಸ್ಥೆ ದಿ ವೈರ್‌ ತನಿಖಾ ವರದಿ ಪ್ರಕಟ ಮಾಡಿತ್ತು. ದಿ ವೈರ್ ಇತರ ಅಂತಾರಾಷ್ಟ್ರೀಯ ಮಾಧ್ಯಮಗಳ ಜೊತೆ ಸೇರಿ ಈ ತನಿಖಾ ವರದಿಯನ್ನು ಮಾಡಿತ್ತು. ಈ ವರದಿ ಪ್ರಕಟವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಸರ್ಕಾರದ ವಿರುದ್ದ ಭಾರಿ ಆಕ್ರೋಶ, ಪ್ರತಿಭಟನೆಗಳು ದಾಖಲಾಗಿದ್ದವು.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

Karnataka Legislative Assembly | ಕರ್ನಾಟಕ ವಿಧಾನಸಭಾ ಅಧಿವೇಶನ | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...