Homeಮುಖಪುಟಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

ಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ನಾಳೆ (ಸೆ.14) ಒಕ್ಕೂಟ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡಲಿದ್ದು, ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ಕೂಡ ವ್ಯಕ್ತವಾಗುತ್ತಿದೆ. ಇದೇ ವೇಳೆ ತಮಿಳು ಭಾಷೆಯನ್ನು “ದೇವರ ಭಾಷೆ” ಎಂದು ಮದ್ರಾಸ್ ಹೈಕೋರ್ಟ್ ಕೊಂಡಾಡಿದೆ.

ದೇಶದಾದ್ಯಂತ ದೇವಾಲಯದ ಪವಿತ್ರೀಕರಣ/ಪ್ರತಿಷ್ಠಾಪನೆಯನ್ನು ಅರುಣಗಿರಿನಾಥರು, ಅಜ್ವರರು ಮತ್ತು ನಾಯನ್ಮಾರ್‌ಗಳಂತಹ ಸಂತರು ರಚಿಸಿದ ತಮಿಳು ಸ್ತೋತ್ರಗಳನ್ನು ಪಠಿಸುವ ಮೂಲಕ ನಡೆಸಬೇಕು ಎಂದು ಹೇಳಿದೆ.

ಇತ್ತೀಚಿಗೆ ಅರ್ಜಿ ವಿಚಾರಣೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎನ್.ಕಿರುಬಾಕರನ್ ಮತ್ತು ನ್ಯಾಯಮೂರ್ತಿ ಬಿ.ಪುಗಲೆಂಧಿ ಅವರ ಪೀಠವು ಆದೇಶದಲ್ಲಿ ಈ ಹೇಳಿಕೆ ನೀಡಿದ್ದು, ನಮ್ಮ ದೇಶದಲ್ಲಿ ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

ತಮಿಳು ಶೈವ ಮಂತ್ರಂ (ಸ್ತುತಿಗೀತೆಗಳು) ಮತ್ತು ಸಂತ ಅಮರಾವತಿ ಆತರಂಗರೈ ಕರೂರರ ಹಾಡುಗಳೊಂದಿಗೆ ಕರೂರು ಜಿಲ್ಲೆಯ ಅರುಲ್ಮಿಗು ಪಶುಪತೇಶ್ವರ ಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

“ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ಭಾಷೆಯಲ್ಲಿ ಆರಾಧನೆ ನಡೆಯುತ್ತದೆ. ನಮ್ಮ ದೇಶದಲ್ಲಿ, ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ. ಬೇರೆ ಯಾವುದೇ ಭಾಷೆ ಅದಕ್ಕೆ ಸಮನಲ್ಲ ಎಂದು ಬಿಂಬಿಸಲಾಗಿದೆ. ನಿಸ್ಸಂದೇಹವಾಗಿ, ಸಂಸ್ಕೃತ ಅಗಾಧವಾದ ಪ್ರಾಚೀನ ಸಾಹಿತ್ಯವನ್ನು ಹೊಂದಿರುವ ಪ್ರಾಚೀನ ಭಾಷೆ. ಆದರೆ, ಸಂಸ್ಕೃತದಲ್ಲಿ ವೇದಗಳನ್ನು ಪಠಿಸಿದರೆ ಮಾತ್ರ ದೇವರುಗಳು ಭಕ್ತರ ಪ್ರಾರ್ಥನೆಯನ್ನು ಕೇಳುತ್ತಾರೆ ಎಂಬ ನಂಬಿಕೆಯನ್ನು ಹರಡಲಾಗಿದೆ” ಎಂದು ಪೀಠ ಹೇಳಿದೆ.

ಜನರು ಮಾತನಾಡುವ ಪ್ರತಿಯೊಂದು ಭಾಷೆಯೂ ದೇವರ ಭಾಷೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. “ಮನುಷ್ಯನು ಭಾಷೆಯನ್ನು ಸೃಷ್ಟಿಸಲು ಸಾಧ್ಯವಿಲ್ಲ. ಭಾಷೆಗಳು ಶತಮಾನಗಳಿಂದ ಅಸ್ತಿತ್ವದಲ್ಲಿವೆ. ಒಂದು ತಲೆಮಾರಿನಿಂದ ಇನ್ನೊಂದು ಪೀಳಿಗೆಗೆ ವರ್ಗಾವಣೆಯಾಗಿವೆ. ಅಸ್ತಿತ್ವದಲ್ಲಿರುವ ಭಾಷೆಗಳಲ್ಲಿ ಮಾತ್ರ ಸುಧಾರಣೆಯಾಗಬಹುದು. ಆದರೆ ಯಾವುದೇ ಭಾಷೆಯ ಸೃಷ್ಟಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು, ತಮಿಳುನಾಡಿನ ಜೊತೆ ಒಕ್ಕೂಟ ಸರ್ಕಾರ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆ ಬಳಸಬೇಕು. ಹಿಂದಿ ಬಳಸಕೂಡದು ಎಂದು ಮದ್ರಾಸ್ ಹೈಕೋರ್ಟ್ ಮಧುರೈ ಪೀಠ ಇತ್ತಿಚೆಗೆ ತೀರ್ಪು ನೀಡಿದೆ.

ರಾಜ್ಯಗಳೊಂದಿಗೆ ಸಂವಹನ ನಡೆಸುವಾಗ ಅಧಿಕೃತ ಭಾಷೆಗಳ ಕಾಯ್ದೆ, 1963ರ ನಿಯಮಗಳನ್ನು ಪಾಲಿಸಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಮಧುರೈ ನ್ಯಾಯಪೀಠ ಸೂಚನೆ ನೀಡಿತ್ತು.


ಇದನ್ನೂ ಓದಿ: ಸಿಎಎ ಹಿಂಪಡೆಯುವಂತೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ಅಸೆಂಬ್ಲಿ: ಬಿಜೆಪಿ ಮಿತ್ರ ಪಕ್ಷದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...