Homeಮುಖಪುಟಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ...

ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

- Advertisement -
- Advertisement -

ಡೆಂಗ್ಯೂ ಜ್ವರ ಬಂದ ತಮ್ಮ ಐದು ವರ್ಷದ ಮಗಳನ್ನು ಎತ್ತಿ ಆಸ್ಪತ್ರೆಯೊಳಗೆ ಮೂರು ಗಂಟೆ ಅಲೆದಾಡಿದರೂ, ಚಿಕಿತ್ಸೆ ಸಿಗದೆ ಹೆತ್ತರವರ ಕಣ್ಣ ಮುಂದೆಯೆ ಬಾಲಕಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಫಿರೋಜಾಬಾದ್‌ನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿ ಮಾಡಲು ಆಸ್ಪತ್ರೆಗೆ ತೆರಳಿದ್ದ ಎನ್‌ಡಿಟಿವಿ ತಂಡವು ಈ ದುರಂತ ಘಟನೆಯನ್ನು ಕಂಡಿದೆ ಎಂದು ಅದು ವರದಿ ಮಾಡಿದೆ.

ಸವನ್ಯ ಗುಪ್ತಾ ಎಂಬ ಐದು ವರ್ಷದ ಬಾಲಕಿಯನ್ನ ಅವರ ಹೆತ್ತವರು ಬೆಳಿಗ್ಗೆ 8 ಗಂಟೆಗೆ ಆಸ್ಪತ್ರೆಗೆ ಕರೆತಂದಿದ್ದರು. ಮಧ್ಯಾಹ್ನದ ವರೆಗೆ ಕಾಯಿಸಿ ಮಧ್ಯಾಹ್ನದ ವೇಳೆಗೆ ಅವರನ್ನು ದಾಖಲಿಸಲಾಯಿತು.  ಆದರೆ ದಾಖಲಾದ ಕೂಡಲೇ ಬಾಲಕಿಯು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

“ನಮಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ನನ್ನ ಸಹೋದರಿ ಸುರಕ್ಷಿತವಾಗಿರುತ್ತಿದ್ದಳು. ನಾವು ಆಕೆಯ ಸ್ಥಿತಿಯ ಬಗ್ಗೆ ಸಿಬ್ಬಂದಿಗೆ ತಿಳಿಸಿದ್ದೆವು ಆದರೆ ಅವರು ನಮ್ಮ ಮನವಿಗೆ ಕಿವಿಗೊಡಲಿಲ್ಲ” ಎಂದು ಬಾಲಕಿಯ ಸಹೋದರ ಹೇಳಿದ್ದಾರೆ.

ಬಾಲಕಿಯ ದೇಶದಲ್ಲಿ ಉಷ್ಣತೆಯ ಹಚ್ಚಿದ್ದರೂ ಆಸ್ಪತ್ರೆ ಮಗುವನ್ನು ದಾಖಲಿಸಲು ನಿರಾಕರಿಸಸಿತ್ತು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. “ವೈದ್ಯರು ಏನನ್ನೂ ಮಾಡಲಿಲ್ಲ. ಅವರಿಗೆ ಹಣ ಮಾತ್ರ ಬೇಕು” ಎಂದು ಮೃತ ಮಗುವಿನ ಇನ್ನೊಬ್ಬ ಸಂಬಂಧಿ ಹೇಳಿದ್ದಾರೆ.

ಡೆಂಗ್ಯೂಗೆ ಈ ತಿಂಗಳ ಆರಂಭದಲ್ಲಿ ಫಿರೋಜಾಬಾದ್‌ನಲ್ಲಿ 45 ಮಕ್ಕಳು ಸೇರಿದಂತೆ 53 ಜನರು ಸಾವನ್ನಪ್ಪಿದ್ದು ವರದಿಯಾಗಿತ್ತು. ಅಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ರೋಗಕ್ಕೆ ತುತ್ತಾದವರು ಮತ್ತು ಮಕ್ಕಳ ಪೋಷಕರ ದೃಶ್ಯಗಳು ಕರುಣಾಜನಕವಾಗಿದ್ದು, ಜ್ವರದಿಂದ ಬಳಲುತ್ತಿರುವ ಮಕ್ಕಳ ಚೇತರಿಕೆಗೆ ಪೋಷಕರು ಪ್ರಾರ್ಥಿಸುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ಸರ್ಕಾರ ಈ ಬಗ್ಗೆ ತನಿಖೆಗೆ ಸೂಚಿಸಿತ್ತಾದರೂ, ಡೆಂಗ್ಯೂವನ್ನು ಸರ್ಕಾರ ಕಳಪೆಯಾಗಿ ನಿರ್ವಹಣೆ ಮಾಡಿರುವುದರ ವಿರುದ್ದ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆಗಳ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಹೇಳಿದ್ದರು.

ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 300 ಕಿಮೀ ದೂರದಲ್ಲಿರುವ ಫಿರೋಜಾಬಾದ್ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಡೆಂಗ್ಯೂ ಮತ್ತು ಮಾರಣಾಂತಿಕ ವೈರಲ್ ಜ್ವರದಿಂದ ಹೋರಾಡುತ್ತಿದೆ. ಇದುವರೆಗೂ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಕಳೆದ 48 ಗಂಟೆಗಳಲ್ಲಿ ಜಿಲ್ಲೆಯೊಂದರಲ್ಲೇ 16 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ ಎಂದು ವರದಿಯಾಗಿವೆ.

ಪಿರೋಜಾಬಾದ್‌ ಮಾತ್ರವಲ್ಲದೆ ನೆರೆಯ ಮಥುರಾ, ಆಗ್ರಾ ಮತ್ತು ಮೈನ್‌ಪುರಿ ಜಿಲ್ಲೆಗಳಲ್ಲೂ ಸೋಂಕು ಕಂಡುಬಂದಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಯುಪಿ – 68 ವರ್ಷದ ವೃದ್ಧೆಯನ್ನು ಥಳಿಸಿ ಕೊಂದ ದರೋಡೆಕೋರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...