Homeಮುಖಪುಟಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ...

ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

- Advertisement -
- Advertisement -

ಡೆಂಗ್ಯೂ ಜ್ವರ ಬಂದ ತಮ್ಮ ಐದು ವರ್ಷದ ಮಗಳನ್ನು ಎತ್ತಿ ಆಸ್ಪತ್ರೆಯೊಳಗೆ ಮೂರು ಗಂಟೆ ಅಲೆದಾಡಿದರೂ, ಚಿಕಿತ್ಸೆ ಸಿಗದೆ ಹೆತ್ತರವರ ಕಣ್ಣ ಮುಂದೆಯೆ ಬಾಲಕಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಫಿರೋಜಾಬಾದ್‌ನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿ ಮಾಡಲು ಆಸ್ಪತ್ರೆಗೆ ತೆರಳಿದ್ದ ಎನ್‌ಡಿಟಿವಿ ತಂಡವು ಈ ದುರಂತ ಘಟನೆಯನ್ನು ಕಂಡಿದೆ ಎಂದು ಅದು ವರದಿ ಮಾಡಿದೆ.

ಸವನ್ಯ ಗುಪ್ತಾ ಎಂಬ ಐದು ವರ್ಷದ ಬಾಲಕಿಯನ್ನ ಅವರ ಹೆತ್ತವರು ಬೆಳಿಗ್ಗೆ 8 ಗಂಟೆಗೆ ಆಸ್ಪತ್ರೆಗೆ ಕರೆತಂದಿದ್ದರು. ಮಧ್ಯಾಹ್ನದ ವರೆಗೆ ಕಾಯಿಸಿ ಮಧ್ಯಾಹ್ನದ ವೇಳೆಗೆ ಅವರನ್ನು ದಾಖಲಿಸಲಾಯಿತು.  ಆದರೆ ದಾಖಲಾದ ಕೂಡಲೇ ಬಾಲಕಿಯು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

“ನಮಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ನನ್ನ ಸಹೋದರಿ ಸುರಕ್ಷಿತವಾಗಿರುತ್ತಿದ್ದಳು. ನಾವು ಆಕೆಯ ಸ್ಥಿತಿಯ ಬಗ್ಗೆ ಸಿಬ್ಬಂದಿಗೆ ತಿಳಿಸಿದ್ದೆವು ಆದರೆ ಅವರು ನಮ್ಮ ಮನವಿಗೆ ಕಿವಿಗೊಡಲಿಲ್ಲ” ಎಂದು ಬಾಲಕಿಯ ಸಹೋದರ ಹೇಳಿದ್ದಾರೆ.

ಬಾಲಕಿಯ ದೇಶದಲ್ಲಿ ಉಷ್ಣತೆಯ ಹಚ್ಚಿದ್ದರೂ ಆಸ್ಪತ್ರೆ ಮಗುವನ್ನು ದಾಖಲಿಸಲು ನಿರಾಕರಿಸಸಿತ್ತು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. “ವೈದ್ಯರು ಏನನ್ನೂ ಮಾಡಲಿಲ್ಲ. ಅವರಿಗೆ ಹಣ ಮಾತ್ರ ಬೇಕು” ಎಂದು ಮೃತ ಮಗುವಿನ ಇನ್ನೊಬ್ಬ ಸಂಬಂಧಿ ಹೇಳಿದ್ದಾರೆ.

ಡೆಂಗ್ಯೂಗೆ ಈ ತಿಂಗಳ ಆರಂಭದಲ್ಲಿ ಫಿರೋಜಾಬಾದ್‌ನಲ್ಲಿ 45 ಮಕ್ಕಳು ಸೇರಿದಂತೆ 53 ಜನರು ಸಾವನ್ನಪ್ಪಿದ್ದು ವರದಿಯಾಗಿತ್ತು. ಅಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ರೋಗಕ್ಕೆ ತುತ್ತಾದವರು ಮತ್ತು ಮಕ್ಕಳ ಪೋಷಕರ ದೃಶ್ಯಗಳು ಕರುಣಾಜನಕವಾಗಿದ್ದು, ಜ್ವರದಿಂದ ಬಳಲುತ್ತಿರುವ ಮಕ್ಕಳ ಚೇತರಿಕೆಗೆ ಪೋಷಕರು ಪ್ರಾರ್ಥಿಸುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ಸರ್ಕಾರ ಈ ಬಗ್ಗೆ ತನಿಖೆಗೆ ಸೂಚಿಸಿತ್ತಾದರೂ, ಡೆಂಗ್ಯೂವನ್ನು ಸರ್ಕಾರ ಕಳಪೆಯಾಗಿ ನಿರ್ವಹಣೆ ಮಾಡಿರುವುದರ ವಿರುದ್ದ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆಗಳ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಹೇಳಿದ್ದರು.

ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 300 ಕಿಮೀ ದೂರದಲ್ಲಿರುವ ಫಿರೋಜಾಬಾದ್ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಡೆಂಗ್ಯೂ ಮತ್ತು ಮಾರಣಾಂತಿಕ ವೈರಲ್ ಜ್ವರದಿಂದ ಹೋರಾಡುತ್ತಿದೆ. ಇದುವರೆಗೂ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಕಳೆದ 48 ಗಂಟೆಗಳಲ್ಲಿ ಜಿಲ್ಲೆಯೊಂದರಲ್ಲೇ 16 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ ಎಂದು ವರದಿಯಾಗಿವೆ.

ಪಿರೋಜಾಬಾದ್‌ ಮಾತ್ರವಲ್ಲದೆ ನೆರೆಯ ಮಥುರಾ, ಆಗ್ರಾ ಮತ್ತು ಮೈನ್‌ಪುರಿ ಜಿಲ್ಲೆಗಳಲ್ಲೂ ಸೋಂಕು ಕಂಡುಬಂದಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಯುಪಿ – 68 ವರ್ಷದ ವೃದ್ಧೆಯನ್ನು ಥಳಿಸಿ ಕೊಂದ ದರೋಡೆಕೋರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...