Homeಮುಖಪುಟಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ.

- Advertisement -
- Advertisement -

ಕಾಲನ ಗರ್ಭ ಸೇರಿದ ಆಸ್ಕರ್‌

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು.

ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ. ಜೊತೆಗೆ ಆಸ್ಕರ್‌ ಎಂದೂ ಮಹತ್ವಾಕಾಂಕ್ಷಿಯೂ ಆಗಿರಲಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸುತ್ತಿದ್ದ ಅವರು ಕೇಂದ್ರದಲ್ಲಿ ರಸ್ತೆ ಸಾರಿಗೆ, ಹೆದ್ದಾರಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನಾ ಅನುಷ್ಠಾನ, ಯುವಜನ ಹಾಗೂ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಮಂತ್ರಿಯಾದಾಗ ಅವರು ಹಿಗ್ಗಿದವರಲ್ಲ, ಆಗದಿದ್ದಾಗ ಅವರು ಕುಗ್ಗಿದವರಲ್ಲ. ಆಸ್ಕರ್‌, ಆಸ್ಕರಣ್ಣ ನಾಗಿಯೇ ಉಳಿದಿದ್ದರು.

1975-76ರ ಅವಧಿಯಲ್ಲಿ ಉಡುಪಿಯ ಮುನ್ಸಿಪಲ್‌ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು 1980ರಲ್ಲಿ ಮೊದಲ ಬಾರಿಗೆ ವಿ.ಎಸ್‌ ಆಚಾರ್ಯರನ್ನು ಸೋಲಿಸಿ, ಉಡುಪಿ ಕ್ಷೇತ್ರದಿಂದ ಏಳನೇ ಲೋಕ ಸಭೆ ಪ್ರವೇಶಿಸಿದ ಅವರು ಮುಂದೆ, 1984 ರಲ್ಲಿ ಕೆ ಎಸ್‌ ಹೆಗ್ಡೆ , 1989 ರಲ್ಲಿ ಎಂ ಸಂಜೀವ, 1991ರಲ್ಲಿ ರುಕ್ಮಯ್ಯ ಪೂಜಾರಿಯರನ್ನು ಮತ್ತು 1996ರಲ್ಲಿ ಜಯರಾಮ ಶೆಟ್ಟರನ್ನು ಸೋಲಿಸಿ ಲೋಕ ಸಭೆಗೆ ಆಯ್ಕೆಯಾದರು.

1980ರಲ್ಲಿ ಮೊದಲ ಸಲ ಆಸ್ಕರ್‌ ಗೆದ್ದಾಗ ಅವರ ಗೆಲುವಿನ ಅಂತರ ಒಂದೂವರೆ ಲಕ್ಷವಾಗಿದ್ದರೆ, 196ರಲ್ಲಿ ಅವರ ಗೆಲುವಿನ ಅಂತರ ಕೇವಲ ಎರಡು ಸಾವಿರವಾಗಿತ್ತು. ಆ ಹೊತ್ತಿಗೆ ದೆಹಲಿ ಕೇಂದ್ರಿತ ರಾಜಕಾರಣದಲ್ಲಿ ಮುಳುಗಿದ್ದ ಆಸ್ಕರ್‌ ಅವರಿಗೆ ತನ್ನ ಕಾಲ ಕೆಳಗಿನ ನೆಲ ಕುಸಿಯುವುದು ಗೊತ್ತಾಗಲೇ ಇಲ್ಲ. ಅವರು ತನಗೆ ಮತ ಹಾಕಿದವರಿಗಿಂತ ಹೆಚ್ಚಗಿ ದೆಹಲಿ ಜನಗಳಿಗೇ ಹತ್ತಿರವಾಗುತ್ತಾ ಹೋದರು. ಕಾಂಗ್ರೆಸ್‌ ನ ಕೇಂದ್ರ ಕಚೇರಿಯಲ್ಲಿಯೇ ಅವರು 24 ಗಂಟೆಗಳ ಕಾಲ ದುಡಿಯತೊಡಗಿದರು. ಪರಿಣಾಮವಾಗಿ, 1998ರ ಲೋಕ ಸಭಾ ಚುನಾವಣೆಯಲ್ಲಿ ಅವರು ಸುಮಾರು 42 ಸಾವಿರ ಮತಗಳಿಂದ ಸೋತರು. ಸೋತರೂ ಮತ್ತೆ ರಾಜ್ಯ ಸಭೆಗೆ ಪ್ರವೇಶ ಪಡೆದರು.

80-90ರ ದಶಕದಲ್ಲಿ ಆಗಿನ್ನೂ ಯುವಕರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿಯವರು ತಮಗೊದಗಿದ ಅವಕಾಶಗಳನ್ನು ಉಪಯೋಗಿಸಿಕೊಂಡು ಉಡುಪಿ ಮಂಗಳೂರುಗಳಲ್ಲಿ ಹೆಚ್ಚು ಕೆಲಸ ಮಾಡಿದ್ದರೆ, ಕರಾವಳಿ ಇವತ್ತು ಈ ಮಟ್ಟಿನ ಕೋಮುವಾದಕ್ಕೆ ಬಲಿಯಾಗುತ್ತಿರಲಿಲ್ಲ. ಭೂ ಸುಧಾರಣೆಯ ಆನಂತರ ಹುಟ್ಟಿಕೊಂಡ ಹೊಸ ತಲೆಮಾರಿನ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಈ ನಾಯಕರು ವಿಫಲರಾಗಿದ್ದರು. ಕಾರಣ ತಮ್ಮದೇ ಜನಗಳಿಂದ ದೂರವಾಗುತ್ತಲೇ ಹೋದರು. ಪೂಜಾರಿಯವರು ಮತ್ತು ಮೊಯಿಲಿಯವರು ಸೋತರು, ಆಸ್ಕರ್‌ ಇದೀಗ ಕೊನೆಯುಸಿರು ಎಳೆದರು.

ಮೃದು ಮಾತಿನ ಆಸ್ಕರ್‌ ಅಂದರೆ ದೆಹಲಿಯಲ್ಲಿ ಎಲ್ಲರಿಗೂ ಇಷ್ಟ. ಯೋಗ ಮತ್ತು ಕಥಕ್‌ ಅವರ ಪ್ರೀತಿಯ ಹವ್ಯಾಸಗಳು. ಹೆಂಡತಿ ಬ್ಲೋಸಮ್‌ ರನ್ನು ಹತ್ತಿರ ಕುಳಿತುಕೊಳ್ಳಿಸದೇ ಇದ್ದರೆ ಅವರು ಭಾಷಣ ಮಾಡುತ್ತಲೇ ಇರಲಿಲ್ಲ. ಕಚೇರಿಗೆ ಯಾರು ಹೋದರೂ ಕರೆದು ಮಾತಾಡಿಸುವ ಸೌಜನ್ಯ, ನಮ್ಮಂಥ ರಾಜಕೀಯೇತರ ಜನರು ಹೋದರೆ ಹತ್ತಿರ ಕುಳ್ಳಿರಿಸಿಕೊಂಡು ಹೆಗಲ ಮೇಲೆ ಕೈ ಹಾಕಿ ಹರಟುವ ಪ್ರೀತಿ ಮೊದಲಾದ ಗುಣಗಳಿಂದಾಗಿ ಆಸ್ಕರ್‌ ಅಜಾತ ಶತ್ರುವಾಗಿಯೇ ಉಳಿದರು.

2004-2008ರ ಅವಧಿಯಲ್ಲಿ ನಾನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಸಂಘಕ್ಕೊಂದು ಸಾಂಸ್ಕೃತಿಕ ಸಮುಚ್ಚಯ ಕಟ್ಟುತ್ತಿದ್ದಾಗ, ಆಸ್ಕರ್‌, ಮೊಯಿಲಿ ಮತ್ತು ಅನಂತ ಕುಮಾರ್‌ ನಮ್ಮ ಸಹಾಯಕ್ಕೆ ನಿಂತಿದ್ದರು. ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಗೆಳೆಯ ವಸಂತ ಶೆಟ್ಟಿ ಬೆಳ್ಳಾರೆಯವರು ಆಸ್ಕರ್‌ ಮತ್ತು ಮೊಯಿಲಿಯವರನ್ನು ಸೇರಿಸಿ ಯಕ್ಷಗಾನವನ್ನು ಮಾಡುವ ಯೋಜನೆ ರೂಪಿಸಿದರು. ಮಂಗಳೂರಿನಿಂದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿಯವರು ಸಹಾಯ ಹಸ್ತ ಚಾಚಿದರು. ವಿದ್ಯಾ ಕೋಳ್ಯೂರು ತರಬೇತಿ ನೀಡಿದರು. ಕೃಷ್ಣ ಭಟ್ಟರು ಎಲ್ಲ ವ್ಯವಸ್ಥೆ ಮಾಡಿದರು. ಆಸ್ಕರ್‌ ಅವರದು ʼ ಅತ್ಯುನ್ನತಿಯೊಳ್‌ ಅಮರಸಿಂಧೂದ್ಭವನಾದ ಭೀಷ್ಮಾಚಾರ್ಯ, ಮೊಯಿಲಿಯವರದು ʼ ಸೂತ ಪುತ್ರ ಕರ್ಣʼ, ನಂದು ʼನೀತಿವಂತ ವಿದುರʼ ಇತ್ಯಾದಿ. ಒಂದು ಹಂತದಲ್ಲಿ ಭೀಷ್ಮಚಾರ್ಯ ಅವರು ಇದಿರಾದಾಗ ನಾನು ( ವಿದುರ) ಹೇಳಿದೆ-
ʼ ಅಚಾರ್ಯರೇ, ನಿಮಗೆ ಹಸ್ತಿನಾಪುರದ ಪಟ್ಟವನ್ನು ಕಾಯುವುದೇ ಕೆಲಸವಾಯಿತಲ್ಲ? ನೀವು ಪಟ್ಟವೇರುವುದು ಯಾವಾಗ?

ತುಂಬಿದ ಸಭೆ ಚಪ್ಪಳೆ ತಟ್ಟಿತು, ಭೀಷ್ಮರು ಮುಗುಳ್ನಕ್ಕರು.

ಮರುದಿನ ದೇಶದಾದ್ಯಂತ ʼ ನೇತಾ ಬನ್‌ ಗಯಾ ಅಭಿನೇತಾʼ ಅಂತ ಸುದ್ದಿಯಾಯಿತು.
ರಾಜಕೀಯದ ಪಟ್ಟುಗಳು ಕ್ಷಿಪ್ರವಾಗಿ ಬದಲಾಗುತ್ತಿರುವಾಗ ಆಸ್ಕರ್‌ ಮರೆಯಾದದ್ದು ಸಾಂಕೇತಿಕವೂ ಹೌದು .

ಪೋತು ಬಲೆ ಆಸ್ಕರಣ್ಣ!

(ಚಿತ್ರದಲ್ಲಿ ಎಡಬದಿಗೆ ಕರ್ಣನಾಗಿ ಮೊಯಿಲಿ, ಮಧ್ಯೆ ಭೀಷ್ಮನಾಗಿ ಆಸ್ಕರ್‌ ಮತ್ತು ಬಲಬದಿಯಲ್ಲಿ ವಿದುರನಾಗಿ ನಾನು, ಫೋಟೋ: ದಿನೇಶ್‌ ಶೆಣೈ)
  • ಪುರುಷೋತ್ತಮ ಬಿಳಿಮಲೆ

ಇದನ್ನೂ ಓದಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...