Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್ - ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ...

ಫ್ಯಾಕ್ಟ್‌‌ಚೆಕ್ – ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ ಹಳೆಯದು!

- Advertisement -
- Advertisement -

ನಟ ಅಮಿತಾಬ್ ಬಚ್ಚನ್ ಅವರು ಸೆಪ್ಟೆಂಬರ್ 8, 2021 ರಂದು ಮುಂಬೈನ ಲಾಲ್‌ಬಾಗ್‌ನಲ್ಲಿ ಈ ವರ್ಷದ ಗಣೇಶ ಮೂರ್ತಿಯ ಮೊದಲ ದರ್ಶನ ಎಂದು ವಿಡಿಯೊವೊಂದನ್ನು ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ಬಹಳ ಸಂಭ್ರಮದಿಂದ ಪೂಜಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಗಣಪತಿ ಪೂಜೆಯ ಚಪ್ಪರ ಅತಿದೊಡ್ಡದು ಮತ್ತು ಅತ್ಯಂತ ಜನಪ್ರಿಯವಾಗಿದೆ. ಅಲ್ಲಿ ಕೂರಿಸುವ ಗಣಪತಿಯ ಮೂರ್ತಿಯನ್ನು ‘ಲಾಲ್‌ಬೌಚ ರಾಜಾ’ ಎಂದು ಎಂದು ಕರೆಯುತ್ತಾರೆ. ಅಲ್ಲಿ ಈ ವರ್ಷದ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10 ರಂದು ಆಚರಿಸಲಾಯಿತು.

ಅಮಿತಾಬ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅದೇ ವಿಡಿಯೊವನ್ನು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ.

ಅಮಿತಾಬ್ ಅವರು ಟ್ವೀಟ್ ಮಾಡಿರುವ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಫೇಸ್‌ಬುಕ್‌ನಲ್ಲಿ ಅವರ ಪೋಸ್ಟ್ 4,500 ಕ್ಕೂ ಹೆಚ್ಚು ಶೇರ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಅಮಿತಾಬ್ ಅವರು ಟ್ವೀಟ್ ಮಾಡಿದ ನಂತರ ಹಲವಾರು ಜನರು ಈ ವಿಡಿಯೊ ಈ ವರ್ಷದ್ದು ಎಂದು ಹಂಚಿಕೊಂಡಿದ್ದಾರೆ. ಕೊರೊನಾ ಪ್ರಯುಕ್ತ ದೊಡ್ಡ ಕೂಟಗಳನ್ನು ನಿಷೇಧಿಸಿದರೂ ಸಹ ಸಾವಿರಾರು ಜನರು ಸೇರಿರುವುದು ವಿಡಿಯದಲ್ಲಿ ಕಾಣುತ್ತಿರುವುದರಿಂದ ಇದು ವಿವಾದವನ್ನೂ ಉಂಟು ಮಾಡಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿ ಕಂಡುಬರುವಂತೆ ಜನಸಮೂಹವು ಯಾವುದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಸ್ಥಳಗಳನ್ನು ತೆರೆಯಲು ಅನುಮತಿ ನೀಡುವಂತೆ ಮಹಾರಾಷ್ಟ್ರದ ಪ್ರತಿಪಕ್ಷವಾದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿತ್ತು. ಈ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಿವಾದಗಳೂ ಉಂಟಾಗಿತ್ತು. ಹೀಗಾಗಿ, ವಿಡಿಯೊದಲ್ಲಿನ ಕಾಣುತ್ತಿರುವ ಜನರು ಮಾಸ್ಕ್‌ ಕೂಡಾ ಧರಿಸದೆ ಅಲ್ಲಿ ಭಾಗವಹಿಸಿದ್ದು ವಿವಾದವಾಗಿತ್ತು.

ಈ ಬಗ್ಗೆ ಆಲ್ಟ್ ನ್ಯೂಸ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ನಡೆಸಲು ಅದನ್ನು ರಿವರ್ಸ್ ಇಮೇಜ್‌ ಸರ್ಚ್‌ ಮೂಲಕ ಹುಡುಕಾಡಿದೆ. ಈ ಹುಡುಕಾಟದಲ್ಲಿ ಪ್ರಸ್ತುತ ವಿಡಿಯೊ ಈ ವರ್ಷದ್ದಲ್ಲ ಎಂದು ಆಲ್ಟ್‌ನ್ಯೂಸ್‌ ಕಂಡು ಹಿಡಿದಿದೆ. ಅಮಿತಾಬ್ ಅವರು ಹಂಚಿಕೊಂಡಿರುವ ವಿಡಿಯೊ 2016 ರ ಸೆಪ್ಟೆಂಬರ್‌ನದ್ದು ಎಂದು ಆಲ್ಟ್‌ ನ್ಯೂಸ್ ಕಂಡುಕೊಂಡಿದೆ. 2016 ರ ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊವನ್ನು 2016 ರ ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

 

ಸುದ್ದಿ ಸಂಸ್ಥೆ ಎಎನ್ಐ ಕೂಡಾ ಇದೇ ಘಟನೆಯನ್ನು ಬೇರೆ ಬೇರೆ ಕೋನದಿಂದ ಚಿತ್ರೀಕರಿಸಿದ ವಿಡಿಯೊವನ್ನು 2016 ರ ಸೆಪ್ಟೆಂಬರ್‌ 1 ರಂದು ಟ್ವಿಟರ್‌ಗೆ ಅಪ್ಲೋಡ್ ಮಾಡಿತ್ತು.

ಕೊರೊನಾ ನಿರ್ಬಂಧಗಳ ಹಿನ್ನಲೆಯಲ್ಲಿ ಈ ವರ್ಷವು ಮಹಾರಾಷ್ಟ್ರ ಸರ್ಕಾರವು ಲಾಲ್‌ಬಾಗ್‌ಗೆ ಯಾವುದೇ ಭಕ್ತರಿಗೆ ದೈಹಿಕ ಭೇಟಿಗೆ ಅನುಮತಿ ನೀಡಿರಲಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಲಾಲ್‌ಬೌಚಾ ರಾಜ’ ಸರ್ವಜನಿಕ ಗಣೇಶೋತ್ಸವ ಮಂಡಳಿಯು ವಿಗ್ರಹದ ಆನ್‌ಲೈನ್ ದರ್ಶನವನ್ನು ಸೆಪ್ಟೆಂಬರ್ 10 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭಿಸಿತ್ತು.

ವರದಿಯಲ್ಲಿ, ಈ ವರ್ಷದ ಮೂರ್ತಿಯ ಚಿತ್ರವನ್ನೂ ನೀಡಲಾಗಿತ್ತು. ಸಾಮಾನ್ಯವಾಗಿ ಪ್ರತಿಷ್ಟಾಪಿಸುವ 14 ಅಡಿಗಳ ಮೂರ್ತಿಯ ಬದಲಾಗಿ, 4 ಅಡಿ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಾಣುವ ವಿಗ್ರಹಕ್ಕಿಂತ ಈ ವಿಗ್ರಹವು ವಿಭಿನ್ನವಾಗಿ ಕಾಣುತ್ತದೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿತಾಬ್ ಬಚ್ಚನ್ ಅವರ ಟ್ವೀಟ್‌ ಸಂಖ್ಯೆ ‘T 4023’ ಮತ್ತು ‘FB 3053’ ಸಂಖ್ಯೆಯ ಫೇಸ್‌ಬುಕ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ವಿಡಿಯೊ ಈ ವರ್ಷದ ಲಾಲ್‌ಬಾಗ್‌ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿಯಲ್ಲ. ಅದನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ಈ ವಿಡಿಯೊ ತುಣುಕು ಐದು ವರ್ಷಗಳ ಹಿಂದಿನ ಗಣೇಶ ಚತುರ್ಥಿಯ ಆಚರಣೆಯದ್ದಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...