Homeಮುಖಪುಟಮುಂಚೆ 'ಅಬ್ಬ ಜಾನ್' ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ...

ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ – ದೂರು ದಾಖಲು

ಟ್ವಿಟರ್‌ನಲ್ಲಿ ಹಲವು ಜನರು ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ ಇವರು ನನ್ನ ಅಬ್ಬ ಜಾನ್ ಎಂದು ಬರೆದು ಹಮಾರೆ ಅಬ್ಬ ಜಾನ್ ಎಂದು ಟ್ರೆಂಡ್ ಮಾಡುತ್ತಿದ್ದಾರೆ.

- Advertisement -
- Advertisement -

ಸದಾ ಪ್ರಚೋದಾತ್ಮಕ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಕಾರಣವಾಗುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈಗ ಮತ್ತೊಂದು ಅಂತಹುದೇ ಹೇಳಿಕೆ ನೀಡಿ ವಿವಾದವೊಂದನ್ನು ಮೈಮೆಲೆ ಎಳೆದುಕೊಂಡಿದ್ದಾರೆ. 2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಅವರ ಕೋಮು ಪ್ರಚೋದನಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಹಾರದಲ್ಲಿ ಅವರ ವಿರುದ್ಧ ದೂರು ಸಹ ದಾಖಲಾಗಿದೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದಾರೆ.

2017ರವರೆಗೆ ಇದ್ದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವನ್ನು ಸಹ ಗುರಿಯಾಗಿಸಿ ಟೀಕಿಸಿರುವ ಆದಿತ್ಯನಾಥ್ “ನಮ್ಮ ಸರ್ಕಾರದಲ್ಲಿ ಬಡವರ ಪಾಲಿನ ರೇಷನ್ ಕದಿಯುವವರನ್ನು ಜೈಲಿಗೆ ಅಟ್ಟುತ್ತೇವೆ” ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಹಲವು ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ದೂರು ನೀಡಿರುವ ಹಶ್ಮಿಯವರು ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯೋಗಿ ಆದಿತ್ಯನಾಥ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ವಿಚಾರಣೆ ನಡೆಸಬೇಕೆಂದು’ ಕೋರಿದ್ದಾರೆ.

ಮುಸ್ಲಿಂ ಸಮುದಾಯದ ವಿರುದ್ಧ ಕೋಮುವಾದಿ ಹೇಳಿಕೆಗಳು, ದ್ವೇಷಭಾಷಣ ಬಿಟ್ಟು ಬಿಜೆಪಿ ಎಂದೂ ಜನರ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಮುಂದಿನ ವರ್ಷ ಚುನಾವಣೆಯಿರುವುದರಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ ಕಿಡಿಕಾರಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನನ್ನ ಅಬ್ಬ ಜಾನ್ ಒಬ್ಬ ಅತ್ಯುತ್ತಮ ಬ್ಯಾಂಕರ್ ಆಗಿದ್ದರು. ನನ್ನ ಅಬ್ಬ ಜಾನ್ ನಿವೃತ್ತ ನ್ಯಾಯಾಧೀಶರು, ನನ್ನ ಅಬ್ಬಾ ಜಾನ್ ಕೆಲಸ ಮಾಡುತ್ತಿದ್ದ ಸ್ಥಳ ಎಂದೆಲ್ಲಾ ಬರೆದಿರುವ ನೆಟ್ಟಿಗರು ‘ಹಮಾರೆ ಅಬ್ಬ ಜಾನ್‘ ಎಂಬ ಹ್ಯಾಸ್‌ಟ್ಯಾಗ್ ಅನ್ನು ಟ್ರೆಂಡ್ ಮಾಡಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

ಒಟ್ಟಿನಲ್ಲಿ ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಗೆಲ್ಲುವುದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆಗಳು ಅವರಿಗೆ ತಿರುಗುಬಾಣವಾಗಿವೆ. ಬಹಳಷ್ಟು ಜನ ಸೌಹಾರ್ದತೆಯನ್ನು ಒಡೆಯಬೇಡಿ ಎಂಬ ಸಂದೇಶಗಳನ್ನು ಕಳುಹಿಸಿದ್ದಾರೆ.


ಇದನ್ನೂ ಓದಿ: ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...