Homeಕರ್ನಾಟಕಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

- Advertisement -
- Advertisement -

ಒಕ್ಕೂಟ ಸರ್ಕಾರದ ಹಿಂದಿ ದಿವಸ್ ವಿರೋಧಿಸಿ ದಕ್ಷಿಣ ಭಾರತದಲ್ಲಿ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ StopHindiImposition, #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಗಣ್ಯರು, ನಟ-ನಟಿಯರು ಸೇರಿದಂತೆ ಲಕ್ಷಾಂತರ ಜನರು ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದ ವೇದಿಕೆಗಳಾದ ಟ್ವಿಟರ್, ಫೇಸ್‌ಬುಕ್, ಇನ್ಸ್ಟ್ರಾಗ್ರಾಮ್‌, ವಾಟ್ಸಾಪ್‌ಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ, ಕರ್ನಾಟಕ ಜನಾಧಿಕಾರ ಪಕ್ಷ, ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಟ್ವಿಟರ್‌ನಲ್ಲಿ ಪೋಸ್ಟ್ ಶೇರ್‌ ಮಾಡಿರುವ ನಟ ಡಾಲಿ ಧನಂಜಯ, “ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ, ಆದರೆ, ಯಾವುದೇ ಹೇರಿಕೆ ಸಲ್ಲದು” ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು” ಎಂದಿದ್ದಾರೆ.

“ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಟ್ವಿಟರ್‌ ಆಂದೋಲನಕ್ಕೆ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಟ್ವೀಟ್ ಮಾಡಿ, “ಹಿಂದಿ ದಿವಸ ಎಂಬುದು ದೇಶದ ಹಿಂದಿಯೇತರ ಜನರ ಮೇಲೆ ನಡೆಸುವ ದೌರ್ಜನ್ಯ, ಭಾಷಾ ಸಮುದಾಯಗಳನ್ನು ವಂಚಿಸುವ ಹುನ್ನಾರ. ನಮ್ಮ ತೆರಿಗೆ ಹಣದಲ್ಲಿ ನಮ್ಮ ಮೇಲೇ ಒಂದು ಭಾಷೆಯನ್ನು ಹೇರುವ ಕುಟಿಲತಂತ್ರ. ನಮ್ಮ ಕೈಗೇ ಕತ್ತರಿ ಕೊಟ್ಟು ನಮ್ಮ ನರಗಳನ್ನೇ ಕತ್ತರಿಸುವ ಹೀನ ಆಚರಣೆ. ಇದನ್ನು ಧಿಕ್ಕರಿಸೋಣ” ಎಂದಿದ್ದಾರೆ.

“ಹಿಂದಿ ದಿವಸ ಎಂಬ ಆಚರಣೆ ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅನೈತಿಕ. ದೇಶದ ಪ್ರಜೆಗಳೆಲ್ಲರೂ ಸಮಾನರು ಎಂಬ ಸಂವಿಧಾನದ ಆಶಯಕ್ಕೆ ವಿರುದ್ಧ. ಕನ್ನಡಿಗರು ಮಾತ್ರವಲ್ಲದೆ ಎಲ್ಲ ಹಿಂದಿಯೇತರ ಭಾಷಾ ಸಮುದಾಯಗಳು ಮತ್ತು ಸಮಾನತೆಯಲ್ಲಿ ನಂಬಿಕೆ ಇಟ್ಟ ಹಿಂದಿ ಭಾಷಿಕರು ಇದನ್ನು ವಿರೋಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವ ‘ಹಿಂದಿ ದಿವಸ’ ಆಚರಣೆ ವಿರೋಧಿಸಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಶಾಸಕ ಆರ್‌.ಮಂಜುನಾಥ್ ತಿಳಿಸಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸವನ್ನು ವಿರೋಧಿಸಿದ್ದಾರೆ.

“ಇಂದು, ಸೆಪ್ಟೆಂಬರ್ 14ನೇ ತಾರೀಖನ್ನು ಹಿಂದಿ ದಿವಸವೆಂದು ನಮ್ಮ ಸಂವಿಧಾನದ 343ನೇ ಆರ್ಟಿಕಲ್‌ ಪ್ರಕಾರ ಗುರುತಿಸಲಾಗಿದ್ದು, ಇದು ಹಿಂದಿಯನ್ನು ನಮ್ಮ ರಾಷ್ಟ್ರದ ಅಧಿಕೃತ ಭಾಷೆಯೆಂದು ಪರಿಗಣಿಸುತ್ತದೆ.
ಇಂತಹ ಭಾಷಾ ತಾರತಮ್ಯವನ್ನು ನಾವು ವಿರೋಧಿಸುತ್ತೇವೆ. ಹಿಂದಿ ಪ್ರಾಮುಖ್ಯತೆಯನ್ನು ನಿಲ್ಲಿಸಿ, 8ನೇ ವೇಳಾಪಟ್ಟಿಯಲ್ಲಿರುವ ಎಲ್ಲಾ 22 ಭಾಷೆಗಳನ್ನೂ ಕೂಡ ಅಧಿಕೃತ ಭಾಷೆಯೆಂದು ಗುರುತಿಸಬೇಕು” ಎಂದು ಆಗ್ರಹಿಸಿದ್ದಾರೆ.
ಹೋರಾಟಗಾರ, ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ತಮ್ಮ ಟ್ವಿಟರ್‌ ಖಾತೆಯಲ್ಲಿ  , “ಹಿಂದಿ ದಿವಸದ ಬದಲಿಗೆ ದೇಶ ಭಾಷಾ ದಿನ ಆಚರಿಸಿ, StopHindiImposition ಎಂದಿದ್ದಾರೆ. ಎಲ್ಲಾ ಭಾಷಿಕ ದೇಶವಾಸಿಗಳ ತೆರಿಗೆಯ ಹಣದಲ್ಲಿ ಒಕ್ಕೂಟ ಸರ್ಕಾರವು ಕೇವಲ “ಹಿಂದಿ ದಿವಸ್” ಆಚರಿಸುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ವಿರೋಧಿಸುತ್ತದೆ ಮತ್ತು ಈ ದಿನವನ್ನು “ದೇಶಭಾಷೆ ದಿನ”ವಾಗಿ ಆಚರಿಸಲು ಆಗ್ರಹಿಸುತ್ತದೆ” ಎಂದಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...