Homeಕರ್ನಾಟಕಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

- Advertisement -
- Advertisement -

ಒಕ್ಕೂಟ ಸರ್ಕಾರದ ಹಿಂದಿ ದಿವಸ್ ವಿರೋಧಿಸಿ ದಕ್ಷಿಣ ಭಾರತದಲ್ಲಿ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ StopHindiImposition, #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಗಣ್ಯರು, ನಟ-ನಟಿಯರು ಸೇರಿದಂತೆ ಲಕ್ಷಾಂತರ ಜನರು ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದ ವೇದಿಕೆಗಳಾದ ಟ್ವಿಟರ್, ಫೇಸ್‌ಬುಕ್, ಇನ್ಸ್ಟ್ರಾಗ್ರಾಮ್‌, ವಾಟ್ಸಾಪ್‌ಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ, ಕರ್ನಾಟಕ ಜನಾಧಿಕಾರ ಪಕ್ಷ, ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಟ್ವಿಟರ್‌ನಲ್ಲಿ ಪೋಸ್ಟ್ ಶೇರ್‌ ಮಾಡಿರುವ ನಟ ಡಾಲಿ ಧನಂಜಯ, “ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ, ಆದರೆ, ಯಾವುದೇ ಹೇರಿಕೆ ಸಲ್ಲದು” ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು” ಎಂದಿದ್ದಾರೆ.

“ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಟ್ವಿಟರ್‌ ಆಂದೋಲನಕ್ಕೆ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಟ್ವೀಟ್ ಮಾಡಿ, “ಹಿಂದಿ ದಿವಸ ಎಂಬುದು ದೇಶದ ಹಿಂದಿಯೇತರ ಜನರ ಮೇಲೆ ನಡೆಸುವ ದೌರ್ಜನ್ಯ, ಭಾಷಾ ಸಮುದಾಯಗಳನ್ನು ವಂಚಿಸುವ ಹುನ್ನಾರ. ನಮ್ಮ ತೆರಿಗೆ ಹಣದಲ್ಲಿ ನಮ್ಮ ಮೇಲೇ ಒಂದು ಭಾಷೆಯನ್ನು ಹೇರುವ ಕುಟಿಲತಂತ್ರ. ನಮ್ಮ ಕೈಗೇ ಕತ್ತರಿ ಕೊಟ್ಟು ನಮ್ಮ ನರಗಳನ್ನೇ ಕತ್ತರಿಸುವ ಹೀನ ಆಚರಣೆ. ಇದನ್ನು ಧಿಕ್ಕರಿಸೋಣ” ಎಂದಿದ್ದಾರೆ.

“ಹಿಂದಿ ದಿವಸ ಎಂಬ ಆಚರಣೆ ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅನೈತಿಕ. ದೇಶದ ಪ್ರಜೆಗಳೆಲ್ಲರೂ ಸಮಾನರು ಎಂಬ ಸಂವಿಧಾನದ ಆಶಯಕ್ಕೆ ವಿರುದ್ಧ. ಕನ್ನಡಿಗರು ಮಾತ್ರವಲ್ಲದೆ ಎಲ್ಲ ಹಿಂದಿಯೇತರ ಭಾಷಾ ಸಮುದಾಯಗಳು ಮತ್ತು ಸಮಾನತೆಯಲ್ಲಿ ನಂಬಿಕೆ ಇಟ್ಟ ಹಿಂದಿ ಭಾಷಿಕರು ಇದನ್ನು ವಿರೋಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವ ‘ಹಿಂದಿ ದಿವಸ’ ಆಚರಣೆ ವಿರೋಧಿಸಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಶಾಸಕ ಆರ್‌.ಮಂಜುನಾಥ್ ತಿಳಿಸಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸವನ್ನು ವಿರೋಧಿಸಿದ್ದಾರೆ.

“ಇಂದು, ಸೆಪ್ಟೆಂಬರ್ 14ನೇ ತಾರೀಖನ್ನು ಹಿಂದಿ ದಿವಸವೆಂದು ನಮ್ಮ ಸಂವಿಧಾನದ 343ನೇ ಆರ್ಟಿಕಲ್‌ ಪ್ರಕಾರ ಗುರುತಿಸಲಾಗಿದ್ದು, ಇದು ಹಿಂದಿಯನ್ನು ನಮ್ಮ ರಾಷ್ಟ್ರದ ಅಧಿಕೃತ ಭಾಷೆಯೆಂದು ಪರಿಗಣಿಸುತ್ತದೆ.
ಇಂತಹ ಭಾಷಾ ತಾರತಮ್ಯವನ್ನು ನಾವು ವಿರೋಧಿಸುತ್ತೇವೆ. ಹಿಂದಿ ಪ್ರಾಮುಖ್ಯತೆಯನ್ನು ನಿಲ್ಲಿಸಿ, 8ನೇ ವೇಳಾಪಟ್ಟಿಯಲ್ಲಿರುವ ಎಲ್ಲಾ 22 ಭಾಷೆಗಳನ್ನೂ ಕೂಡ ಅಧಿಕೃತ ಭಾಷೆಯೆಂದು ಗುರುತಿಸಬೇಕು” ಎಂದು ಆಗ್ರಹಿಸಿದ್ದಾರೆ.
ಹೋರಾಟಗಾರ, ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ತಮ್ಮ ಟ್ವಿಟರ್‌ ಖಾತೆಯಲ್ಲಿ  , “ಹಿಂದಿ ದಿವಸದ ಬದಲಿಗೆ ದೇಶ ಭಾಷಾ ದಿನ ಆಚರಿಸಿ, StopHindiImposition ಎಂದಿದ್ದಾರೆ. ಎಲ್ಲಾ ಭಾಷಿಕ ದೇಶವಾಸಿಗಳ ತೆರಿಗೆಯ ಹಣದಲ್ಲಿ ಒಕ್ಕೂಟ ಸರ್ಕಾರವು ಕೇವಲ “ಹಿಂದಿ ದಿವಸ್” ಆಚರಿಸುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ವಿರೋಧಿಸುತ್ತದೆ ಮತ್ತು ಈ ದಿನವನ್ನು “ದೇಶಭಾಷೆ ದಿನ”ವಾಗಿ ಆಚರಿಸಲು ಆಗ್ರಹಿಸುತ್ತದೆ” ಎಂದಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...