Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...