Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...