Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...