Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...