Homeಮುಖಪುಟತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

ತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

- Advertisement -
- Advertisement -

ತಾಲಿಬಾನ್‌ ಬಂಡುಕೋರ ಐಸ್‌ಕ್ರೀಮ್‌ ಸವಿಯುತ್ತಿರುವ ಪೊಟೋ ನೋಡಿ ಎಂದು ಅಮಾಯಕ ವ್ಯಕ್ತಿಯನ್ನು ಉಗ್ರನೆಂದು ಬಿಂಬಿಸಿ, ವಿಕೃತವಾಗಿ ಟ್ರೋಲ್ ಮಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡು ಬಂದಿದೆ.
“ಬಹಳ ಸಂತೋಷದಿಂದ ತಾಲಿಬಾನ್ ಉಗ್ರ ಐಸ್‌ಕ್ರೀಮ್‌ ಸವಿಯುತ್ತಿರುವುದನ್ನು ನೋಡಿ” ಎಂಬ ಒಕ್ಕಣೆಯೊಂದಿಗೆ ವ್ಯಕ್ತಿಯೊಬ್ಬನ ಪೋಟೊವನ್ನು ಹರಿಬಿಡಲಾಗಿದೆ. ಈ ಪೊಟೋದ ಸತ್ಯಾಸತ್ಯತೆಯನ್ನು ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಪರಿಶೀಲಿಸಿದೆ.
ಸ್ಟೀವ್‌ ಮೆಕ್ರರಿ ಎಂಬ ಅಮೆರಿಕನ್ ಪೋಟೋಗ್ರಾಫರ್ 2002ರಲ್ಲಿ ಕ್ಲಿಕ್ಕಿಸಿದ ಪೊಟೋ ಇದಾಗಿದೆ. ತನ್ನ ಮಕ್ಕಳಿಗೆ ಅಫಘಾನಿನ ವ್ಯಕ್ತಿಯೊಬ್ಬ ಅಫಘಾನಿಸ್ತಾನದ ಪೋಲ್‌ಇಕೊಮ್‌ರಿ ಎಂಬ ಸ್ಥಳದಲ್ಲಿ ಐಸ್‌ಕ್ರೀಮ್ ಖರೀದಿಸುತ್ತಿರುವ ಪೊಟೋವನ್ನು ಸ್ಟೀವ್‌ ಕ್ಲಿಕ್ಕಿಸಿದ್ದರು. ಈ ಪೋಟೋಕ್ಕೂ ತಾಲಿಬಾನಿಗೂ ಯಾವುದೇ ಸಂಬಂಧವಿಲ್ಲ.
ಇದೇ ಪೋಟೋವನ್ನು ಇಮ್ಗುರ್‌ ವೆಬ್‌ಸೈಟ್‌ ನಲ್ಲಿ 2016ರಲ್ಲಿ ಪ್ರಕಟಿಸಲಾಗಿತ್ತು. ಇತರ ವೆಬ್‌ಸೈಟ್‌ಗಳು ಕೂಡ ಈ ಪೋಟೋವನ್ನು ಪ್ರಕಟಿಸಿ, ಸ್ಟೀವ್‌ ಅವರಿಗೆ ಪೋಟೋ ಕ್ರೆಡಿಟ್ ನೀಡಿವೆ. ಬಹುತೇಕರು ಪೋಟೋವನ್ನು ತಿರುಚಿದ ಒಕ್ಕಣೆಯೊಂದಿಗೆ ಹಂಚಿಕೊಂಡ ಬಳಿಕ ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಸರ್ಚ್ ಮಾಡಿದ್ದು, ಸ್ಟೀವ್ ಅವರ ಅಧಿಕೃತ ಇನ್‌ಸ್ಟಾ ಖಾತೆಯಲ್ಲಿಯೂ ಪೋಟೋ ಇರುವುದನ್ನು ಪತ್ತೆ ಹಚ್ಚಿದೆ. ಜೊತೆಗೆ ಸ್ಟೀವ್‌ ಪೋಟೋ ಯಾವಾಗ ತೆಗೆದಿದ್ದು, ಎಲ್ಲಿ ತೆಗೆದದ್ದು ಎಂಬ ಕುರಿತು ವಿವರಣೆಯನ್ನೂ ನೀಡಿದ್ದಾರೆ.

ಅಪಘಾನಿಸ್ತಾನದ ರಾಜಧಾನಿ ಕಾಬೂಲ್‌ ಅನ್ನು ತಾಲಿಬಾನ್‌ ಸಂರ್ಪೂರ್ಣ ವಶಕ್ಕೆ ಪಡೆದ ಬಳಿಕ ತಾಲಿಬಾನಿಗಳು ಐಸ್‌ಕ್ರೀಮ್‌ ಸವಿಯುವಂತಹ ಹಲವು ವಿಶ್ರಾಂತಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ಐಸ್‌ಕ್ರೀಮ್‌ನೊಂದಿಗಿನ ಫೋಟೋಗಳು ಹರಿದಾಡಿದ್ದವು. ಫೋಟೋಗಳು ಹಾಗೂ ವಿಡಿಯೋಗಳನ್ನು ಆಧರಿಸಿ ಹಲವು ಸುದ್ದಿ ಜಾಲತಾಣಗಳಲ್ಲಿ ವರದಿಗಳೂ ಪ್ರಕಟವಾಗಿದ್ದವು. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಇಲ್ಲಿ ಶೇರ್‌ ಆಗಿರುವ ಪೋಸ್ಟ್‌ನಲ್ಲಿನ ಪೋಟೋ ಹಳೆಯದಾಗಿದೆ. ಅಫಘಾನಿಸ್ತಾನದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನಗಳಿಗೂ ಈ ಫೋಟೋಕ್ಕೋ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...