Homeಸಿನಿಮಾಕ್ರೀಡೆಕ್ರೀಡಾ ವ್ಯವಸ್ಥೆ ವಿರುದ್ಧ ಟೀಕೆ: ಭಾರತದ ಜಾವೆಲಿನ್ ಕೋಚ್ ಉವೆ ಹಾನ್ ವಜಾ!

ಕ್ರೀಡಾ ವ್ಯವಸ್ಥೆ ವಿರುದ್ಧ ಟೀಕೆ: ಭಾರತದ ಜಾವೆಲಿನ್ ಕೋಚ್ ಉವೆ ಹಾನ್ ವಜಾ!

ಉವೆ ಹಾನ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕೋಚ್ ಆಗಿ ಕೆಲಸ ಮಾಡಿದ್ದರು.

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲಲು ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಜರ್ಮನಿ ದೇಶದ ಜಾವಲಿನ್ ದಂತಕಥೆ ಉವೆ ಹಾನ್ ರನ್ನು ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ವಜಾಗೊಳಿಸಿದೆ.

104.80 ಮೀಟರ್ ದೂರ ಜಾವಲಿನ್ ಎಸೆದು ವಿಶ್ವದಾಖಲೆ ಮಾಡಿರುವ ಮತ್ತು ನೂರು ಮೀಟರ್‌ಗಿಂತ ಹೆಚ್ಚು ದೂರ ಎಸೆದ ಏಕೈಕ ಕ್ರೀಡಾಪಟು ಎನಿಸಿಕೊಂಡಿರುವ ಉವೆ ಹಾನ್ 1999ರಿಂದ ಕೋಚ್ ಆಗಿ ಕೆಲಸ ಮಾಡುತ್ತಿದ್ದಾರೆ. 2017ರಿಂದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದೊಂದಿಗೆ ಒಪ್ಪಂದ ಮಾಡಿಕೊಂಡು ಜಾವಲಿನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಉವೆ ಹಾನ್ ರವರ ಪ್ರದರ್ಶನ ಚೆನ್ನಾಗಿಲ್ಲ. ಹಾಗಾಗಿ ಅವರನ್ನು ಬದಲಿಸುತ್ತೇವೆ. ಅವರ ಬದಲಿಗೆ ಇಬ್ಬರು ಕೋಚ್‌ಗಳನ್ನು ನೇಮಿಸುತ್ತೇವೆ ಎಂದು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ.


ಇದನ್ನೂ ಓದಿ: ಒಲಿಂಪಿಕ್ಸ್ ಪದಕಗಳ ಹಿಂದಿದೆ ಪರಿಶ್ರಮ; ತೆರೆಯ ಹಿಂದಿನ ಸಾಧಕರಿವರು


ಸೋಮವಾರ ನಡೆದ ಎರಡು ದಿನಗಳ ಕಾರ್ಯನಿರ್ವಾಹಕ ಮಂಡಳಿ ಸಭೆಯಲ್ಲಿ ಕ್ರೀಡಾಪಟುಗಳು ಮತ್ತು ತರಬೇತುದಾರರ ಕಾರ್ಯಕ್ಷಮತೆಯ ಪರಿಶೀಲನೆಯ ನಂತರ ಹೋನ್ ಅವರನ್ನು ವಜಾಗೊಳಿಸುವ ನಿರ್ಧಾರ ಬಂದಿದೆ. ಒಲಿಂಪಿಕ್ ಚಿನ್ನ ಗೆದ್ದಾಗ ಚೋಪ್ರಾ ಅವರಿಗೆ ತರಬೇತಿ ನೀಡಿದ ಕ್ಲೌಸ್ ಬಾರ್ಟೋನಿಯೆಟ್ಜ್ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೂನ್ ತಿಂಗಳಲ್ಲಿ ಉವೆ ಹಾನ್ ಭಾರತೀಯ ಕ್ರೀಡಾ ವ್ಯವಸ್ಥೆಯ ವಿರುದ್ಧ ಟೀಕೆ ಮಾಡಿದ್ದರು. “ನಾನು ಕೋಚ್ ಆಗಿ ಬಂದಾಗ ಇಲ್ಲೇನಾದ್ರೂ ಬದಲಾಯಿಸಬಹುದೆಂದು ಊಹಿಸಿದ್ದೆ. ಆದರೆ ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದಲ್ಲಿ ಇದು ಸಾಧ್ಯವಿಲ್ಲ. ತರಬೇತಿ, ಕ್ಯಾಂಪ್ ಬಿಡಿ, ನಮ್ಮ ಟಾಪ್ ಆಟಗಾರರಿಗೆ ಬೇಕಾಗುವ ಪೌಷ್ಠಿಕ ಆಹಾರ ಕೂಡಾ ಸಿಗುತ್ತಿಲ್ಲ” ಎಂದು ಉವೆ ಹಾನ್ ಒಲಿಂಪಿಕ್ಸ್ ಆರಂಭವಾಗುವ ಒಂದು ತಿಂಗಳ ಮೊದಲು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

“ಪಟಿಯಾಲದ ಧಗೆಯಲ್ಲಿ ಕೇವಲ ಬೆಳಗಿನ ಜಾವ ಹಾಗೂ ಸಂಜೆ ಆರರ ಬಳಿಕ ಮಾತ್ರ ತರಬೇತಿ ಸಾಧ್ಯವಾಗಿದ್ದರೂ, ಆಟಗಾರರನ್ನು ಹೊರದೇಶಕ್ಕೆ ಕಳುಹಿಸಿ ತರಬೇತಿ ಪಡೆಯಲು ಹಾಗೂ ಪಂದ್ಯಗಳಲ್ಲಿ ಭಾಗವಹಿಸುವಂತೆ ಮಾಡಲು ಸರಕಾರ ಏನೂ ಮಾಡುತ್ತಿಲ್ಲ. ನೀರಜ್ ಚೋಪ್ರಾ ವಿದೇಶದಲ್ಲಿ ತರಬೇತಿ ಪಡೆಯಲು ಸಹಾಯ ಮಾಡಿದ್ದು ಸರಕಾರ ಅಲ್ಲ, ಬದಲಿಗೆ ಅವರನ್ನು ವೈಯಕ್ತಿಕವಾಗಿ ಪ್ರಾಯೋಜಿಸುತ್ತಿರುವ ಜೆಎಸ್‌ಡಬ್ಲ್ಯೂ” ಎಂದೂ ಅವರು ಹೇಳಿದ್ದರು.

ಕೆಲ ದಿನಗಳ ಹಿಂದೆ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ಅದಿಲ್ಲೆ ಸುಮೇರಿವಾಲಾ “ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ನಂತರ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದರು.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...