Homeಮುಖಪುಟತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ - ಮದ್ರಾಸ್ ಹೈಕೋರ್ಟ್‌

ತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ – ಮದ್ರಾಸ್ ಹೈಕೋರ್ಟ್‌

- Advertisement -
- Advertisement -

2018 ಮೇ 22 ರಂದು ತಮಿಳುನಾಡಿನ ತೂತುಕುಡಿ ಜಿಲ್ಲೆಯ ‘ವೇದಾಂತ’ ಕಂಪೆನಿಯ ಸ್ಟೆರ್ಲೈಟ್‌ ಕಾರ್ಖಾನೆಯ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ, ಪೋಲಿಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟಿದ್ದರು. ಇದನ್ನು ಸೋಮವಾರ ಉಲ್ಲೇಖಿಸಿರುವ ಮದ್ರಾಸ್‌ ಹೈಕೋರ್ಟ್‌, ಘಟನೆಯು ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ಅದನ್ನು ಮರೆಯಬಾರದು ಎಂದು ಹೇಳಿದೆ.

ಈ ಘಟನೆಯು ದೇಶದಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿತ್ತು, ಹೀಗಾಗಿ ನಂತರ ಕಾರ್ಖಾನೆಯನ್ನು ಮುಚ್ಚಲಾಗಿತ್ತು. ತೂತುಕುಡಿಯ ನಿವಾಸಿಗಳು ಸ್ಟೆರ್ಲೈಟ್ ಕಾರ್ಖಾನೆಯು ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ನಿರಂತರವಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು(ಎನ್‌ಎಚ್‌ಆರ್‌ಸಿ) ಗುಂಡಿನ ದಾಳಿಯ ತನಿಖೆಯನ್ನು ಪುನಃ ಮಾಡಬೇಕು ಎಂದು ಮದ್ರಾಸ್‌‌ ಹೈಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯನ್ನು ಆಲಿಸುವಾಗ, ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿದ್ದ ಪೀಠವು ಈ ಅವಲೋಕನ ಮಾಡಿದೆ.

“ಈ ಘಟನೆ ನಿಜವಾಗಿಯೂ ಸಾರ್ವಜನಿಕರ ಮನಸ್ಸಿನಿಂದ ಹೊರಟು ಹೋಗಿದೆ. ಆದರೆ ಹದಿನೈದು ಅಥವಾ ಹದಿನಾರು ನಾಗರಿಕರು ಪ್ರಾಣ ಕಳೆದುಕೊಂಡರು. ಆ ರೀತಿಯ ಘಟನೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ನಾವು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಸರ್ಕಾರೇತರ ಸಂಸ್ಥೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಅವರು ‘ಎನ್‌ಎಚ್‌ಆರ್‌ಸಿ’ ವಿಚಾರಣೆಯನ್ನು ಪುನಃ ನಡೆಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

ಅವರು ತಮ್ಮ ಅರ್ಜಿಯಲ್ಲಿ, “ಎನ್‌ಎಚ್‌ಆರ್‌ಸಿ ಅಕ್ಟೋಬರ್ 2018 ರಲ್ಲಿ ಗುಂಡಿನ ದಾಳಿಯ ತನಿಖೆಯನ್ನು ಮುಚ್ಚಿದೆ. ಆದರೆ ಅದರ ತನಿಖಾ ತಂಡವು ಸಲ್ಲಿಸಿದ ವರದಿಯ ವಿಷಯಗಳನ್ನು ಇನ್ನೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ.

ಹೆನ್ರಿ ಟಿಫಾಗ್ನೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲಾಗಿತ್ತು. ಆಗ ಎನ್‌ಎಚ್‌ಆರ್‌ಸಿಯು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯದೊಂದಿಗೆ ಸಮಯ ಕೋರಿತ್ತು. ಅದರಂತೆ ಹೈಕೋರ್ಟ್ ಕೂಡಾ ಸೋಮವಾರದವರೆಗೆ ಸಮಯ ನೀಡಿತ್ತು.

ಸೋಮವಾರದಂದು ಎನ್‌ಎಚ್‌ಆರ್‌ಸಿ ವರದಿಯನ್ನು ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಆದರೆ ಸದ್ಯಕ್ಕೆ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ವರದಿಯ ಪ್ರತಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್, ಅರ್ಜಿದಾರರು ಮತ್ತು ರಾಜ್ಯ ಸರ್ಕಾರಕ್ಕೆ ಕಳುಹಿಸುವಂತೆ ಹೈಕೋರ್ಟ್‌ ಆದೇಶಿಸಿದೆ ಮತ್ತು ತನಿಖೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ತರಲು NHRC ಗೆ ಸೂಚಿಸಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನ್ಯಾಯಾಂಗವೆಂದರೆ ಹೀಗಿರಬೇಕು.ನಮ್ಮ ಜನತೆಗೆ ಜಯ ಕೊಟ್ಟ ನ್ಯಾಯಾಂಗಕ್ಕೂ ಜಯವಾಗಲಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...