Homeಮುಖಪುಟಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ...

ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು

- Advertisement -
- Advertisement -

ಸರಿಯಾಗಿ ಒಂದು ವರ್ಷದ ಹಿಂದೆ 14 ಸೆಪ್ಟೆಂಬರ್ 2020 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿ, ಮಾರಣಾತಿಂಕ ಹಲ್ಲೆ ನಡೆಸಿದ್ದರು. ಇದಾಗಿ ಎರಡು ವಾರಗಳ ನಂತರ ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಗೆ ನ್ಯಾಯದಾನ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು ಸರಿಯಾಗಿ ಒಂದು ವರ್ಷವಾಗಿದೆ, ಆದರೆ ಉತ್ತರ ಪ್ರದೇಶ ಸರ್ಕಾರವು ಕುಟುಂಬಕ್ಕೆ ನ್ಯಾಯ ಮತ್ತು ಭದ್ರತೆ ನೀಡುವ ಬದಲಾಗಿ ಜೀವ ಬೆದರಿಕೆಗಳನ್ನು ಹಾಕಿತು ಎಂದು ಪ್ರಿಯಾಂಕಾ ಗಾಂಧಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಗೌರವಯುತವಾದ ಶವ ಸಂಸ್ಕಾರದ ಹಕ್ಕನ್ನೂ ಹೆತ್ತವರಿಂದ ಕಸಿದುಕೊಂಡ ಸರ್ಕಾರ, ಇಡೀ ರಾಜ್ಯದ ಆಡಳಿತ ಯಂತ್ರವನ್ನು ಬಳಸಿಕೊಂಡು ಯುವತಿಯ ಘನತೆಗೆ ಅಪಪ್ರಚಾರ ಮಾಡಿ ಚಾರಿತ್ಯ್ರ ಹರಣ ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

“ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಇಂತಹ ಕೆಟ್ಟ ನಿಲುವು ತೆಗೆದುಕೊಂಡ ಸರ್ಕಾರದ ಮುಖ್ಯಸ್ಥರಿಂದ ಸೂಕ್ಷ್ಮತೆಯನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಅದೇನೇ ಇರಲಿ, ಯುಪಿಯ ಮುಖ್ಯಮಂತ್ರಿ ಮಹಿಳಾ ವಿರೋಧಿ ಚಿಂತನೆಯ ನಾಯಕ. ಅವರು ‘ಮಹಿಳೆಯರು ಸ್ವತಂತ್ರವಾಗಿರಬಾರದು’ ಎಂದು ಹೇಳಿಕೊಂಡಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಕರಣವು ಮೊದಲಿಗೆ, ಒಬ್ಬ ಆರೋಪಿಯು ಯುವತಿಯನ್ನು ಕೊಲ್ಲಲು ಪ್ರಯತ್ನಿಸಿದನೆಂದು ವರದಿಯಾಗಿತ್ತು. ಆದರೆ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಮ್ಯಾಜಿಸ್ಟ್ರೇಟಿಗೆ ನೀಡಿದ ಹೇಳಿಕೆಯ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿದು ಬಂದಿತ್ತು. ಜೊತೆಗೆ ಸಂತ್ರಸ್ತ ಯುವತಿಯೆ ತನ್ನ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಹೆಸರಿಸಿದ್ದರು. ಅಷ್ಟೆ ಅಲ್ಲದೆ ಯುವತಿಯ ಮೃತದೇಹವನ್ನು ಅವರ ಕುಟುಂಬದ ಒಪ್ಪಿಗೆಯಿಲ್ಲದೆ ಪೊಲೀಸರು ಬಲವಂತವಾಗಿ ರಾತ್ರೋರಾತ್ರಿ ಸುಟ್ಟು ಹಾಕಿದ್ದರು.

ಹತ್ರಾಸ್ ದಲಿತ ಯುವತಿಯ ಸಾಮೂಹಿತ ಅತ್ಯಾಚಾರ ಮತ್ತು ಹತ್ಯೆ ಘಟನೆ? ಯಾಕೆ ದೇಶದಾದ್ಯಂತ ಗಮನಸೆಳೆಯಿತು?

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿ ಜಾನುವಾರಿಗೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ. ರಾಜ್ಯದ ಮೇಲ್ಜಾತಿಯಾದ ಠಾಕೂರ್‌ ಸಮುದಾಯಕ್ಕೆ ಸೇರಿದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಎಂಬ ನಾಲ್ವರು ಯುವತಿಯ ಕುತ್ತಿಗೆಗೆ ದುಪ್ಪಟ್ಟಾ ಹಾಕಿ ಎಳೆದೊಯ್ದಿದ್ದಾರೆ. ಇದರಿಂದಾಗಿ ಯುವತಿಯ ಬೆನ್ನು ಹುರಿಗೆ ಗಾಯವಾಗಿತ್ತು. ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು, ಅತ್ಯಾಚಾರ ಯತ್ನವನ್ನು ವಿರೋಧಿಸಿದ ಕಾರಣ ಯುವತಿಯ ಕತ್ತು ಹಿಸುಕಿದ್ದರು, ಈ ವೇಳೆ ಯುವತಿ ನಾಲಿಗೆ ಕತ್ತರಿಸಲ್ಪಟ್ಟಿತ್ತು.

ಇದನ್ನೂ ಓದಿ:  ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಈ ವೇಳೆ ಯುವತಿಯ ಕೂಗು ಕೇಳಿ ಹೊಲಕ್ಕೆ ಬಂದಿದ್ದ ತಾಯಿ ಮೊದಲಿಗೆ ಚಾಂದ್‌ ಪಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿ ಪೊಲೀಸರು ಅವರ ದೂರನ್ನು ಪಡೆಯದೆ, ಅವರನ್ನು ಅವಮಾನಿಸಿದ್ದರು. ಇದಾಗಿ ಸುಮಾರು ಆರು ದಿನಗಳ ನಂತರ ಅಂದರೆ ಸೆಪ್ಟೆಂಬರ್ 20 ರಂದು ಪೊಲೀಸರು ದೂರು ದಾಖಲಿಸಿದ್ದರು. ಸೆಪ್ಟೆಂಬರ್‌ 22 ರಂದು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರು. ಯುವತಿ ಹೇಳಿಕೆ ನೀಡಿ, ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದನ್ನು ವಿರೋಧಿಸಿದ್ದಕ್ಕೆ ಕತ್ತು ಹಿಸುಕಿರುವುದನ್ನು ಉಲ್ಲೇಖಿಸಿದ್ದರು.

ಘಟನೆ ನಡೆದ ದಿನದಂದು ಯುವತಿಯನ್ನು ಅಲಿಗಡದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಹದಗೆಟ್ಟ ನಂತರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಾಕಾರಿಯಾಗದೆ 2020 ರ ಸೆಪ್ಟೆಂಬರ್ 29 ರಂದು ನಿಧನರಾದರು.

ಶವಪರೀಕ್ಷೆಯ ವರದಿಯಲ್ಲಿ, ‘ಗಟ್ಟಿಯಾದ ವಸ್ತುವಿನಿಂದ ಕುತ್ತಿಗೆಯ ಬಳಿಯ ಬೆನ್ನುಮೂಳೆಗೆ ಬಲವಾದ ಏಟು’ ಬಿದ್ದಿದ್ದರಿಂದ ಸಾವಾಗಿದೆ ಎಂದು ದಾಖಲಾಗಿತ್ತು. ಆದರೆ ವೈದ್ಯಕೀಯ ದಾಖಲೆ, “ಅತ್ಯಾಚಾರ ಮತ್ತು ಕತ್ತು ಹಿಸುಕುವಿಕೆ” ಸಾವಿಗೆ ಕಾರಣ ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಸರ್ಕಾರ, ಬಿಜೆಪಿ ಮತ್ತು ಮೇಲ್ಜಾತಿ ಸಂಘಟನೆಗಳು ನಡೆದುಕೊಂಡ ಬಗ್ಗೆ

ದಲಿಯ ಯುವತಿಯ ಅತ್ಯಾಚಾರ ನಡೆದಿದೆ ಎಂದು ತಿಳಿದ ನಂತರವು, ಆಡಳಿತವು ತನಿಖೆ ವಿಳಂಬ ಮಾಡಿರುವ ಬಗ್ಗೆ ದೇಶದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೆ ಅಲ್ಲದೆ ಮೃತಪಟ್ಟ ನಂತರ ಯುವತಿಯ ಮೃತದೇಹವನ್ನು ದೆಹಲಿಯಿಂದ ರಾತ್ರೋರಾತ್ರಿ ತಂದು ಹೆತ್ತವರ ಅನುಮತಿಯಿಲ್ಲದೆ ಪೊಲೀಸರು ಬಲವಂತವಾಗಿ ಸುಟ್ಟು ಹಾಕಿದ್ದರು. ಇದು ಕೂಡಾ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇಷ್ಟೆ ಅಲ್ಲದೆ ಯುವತಿಯ ಕುಟುಂಬವನ್ನು ಸಂದರ್ಶಿಸಲು ಕೂಡಾ ಯಾರಿಗೆ ಅನುಮತಿ ನೀಡಿರಲಿಲ್ಲ. ಅವರ ಮನೆಯ ಸುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಘಟನೆಯನ್ನು ವರದಿ ಮಾಡಲು ಹೊರಟ ಪತ್ರಕರ್ತರನ್ನೂ ಯುಎಪಿಎ ಅಂತಹ ಕರಾಳ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು. ಜೊತೆಗೆ ಕುಟುಂಬವನ್ನು ಬೆದರಿಸುವ ತಂತ್ರವನ್ನೂ ಸರ್ಕಾರ ಮಾಡಿತ್ತು.

ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆಸಿದ ರ್‍ಯಾಲಿಯಲ್ಲಿ ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗಿ!

ಈ ಎಲ್ಲದರ ಮಧ್ಯೆ “ರಾಷ್ಟ್ರೀಯ ಸವರ್ಣ ಪರಿಷತ್” ಎಂಬ ಸಂಘಟನೆ ಆರೋಪಿಗಳ ಬೆಂಬಲಕ್ಕೆ ನಿಂತಿತ್ತು. ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಜೊತೆಗೆ ಈ ಸಭೆಯಲ್ಲಿ ಆರ್‌ಎಸ್‌ಎಸ್, ಕರ್ಣಿ ಸೇನೆ ಮತ್ತು ಬಜರಂಗದಳದಂತಹ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಸದಸ್ಯರು ಕ್ಷತ್ರಿಯ ಮಹಾಸಭಾ, ರಾಷ್ಟ್ರೀಯ ಸವರ್ಣ ಸಂಘಟನೆ ಮುಂತಾದವುಗಳನ್ನು ಒಳಗೊಂಡಂತೆ ವಿವಿಧ ಮೇಲ್ಜಾತಿಯ ಸಂಘಟನೆಗಳ ಭಾಗವಾಗಿದ್ದರು.

ತನಿಖೆಯ ಎಲ್ಲಿವರೆಗೆ ಆಗಿವೆ?

2020 ಡಿಸೆಂಬರ್ 19 ರಂದು, ಸಿಬಿಐ ಹತ್ರಾಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ನಾಲ್ಕು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಲಿಖಿತವಾಗಿ ದಾಖಲಿಸುವುದರಲ್ಲಿ ತೋರಿದ ವಿಳಂಬ ಮತ್ತು ಯುವತಿಯ ವೈದ್ಯಕೀಯ ಪರೀಕ್ಷೆಯಲ್ಲಿ ಯುಪಿ ಪೊಲೀಸರ ಲೋಪದೋಷಗಳನ್ನೂ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...