Homeಮುಖಪುಟಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ...

ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು

- Advertisement -
- Advertisement -

ಸರಿಯಾಗಿ ಒಂದು ವರ್ಷದ ಹಿಂದೆ 14 ಸೆಪ್ಟೆಂಬರ್ 2020 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿ, ಮಾರಣಾತಿಂಕ ಹಲ್ಲೆ ನಡೆಸಿದ್ದರು. ಇದಾಗಿ ಎರಡು ವಾರಗಳ ನಂತರ ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಗೆ ನ್ಯಾಯದಾನ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು ಸರಿಯಾಗಿ ಒಂದು ವರ್ಷವಾಗಿದೆ, ಆದರೆ ಉತ್ತರ ಪ್ರದೇಶ ಸರ್ಕಾರವು ಕುಟುಂಬಕ್ಕೆ ನ್ಯಾಯ ಮತ್ತು ಭದ್ರತೆ ನೀಡುವ ಬದಲಾಗಿ ಜೀವ ಬೆದರಿಕೆಗಳನ್ನು ಹಾಕಿತು ಎಂದು ಪ್ರಿಯಾಂಕಾ ಗಾಂಧಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಗೌರವಯುತವಾದ ಶವ ಸಂಸ್ಕಾರದ ಹಕ್ಕನ್ನೂ ಹೆತ್ತವರಿಂದ ಕಸಿದುಕೊಂಡ ಸರ್ಕಾರ, ಇಡೀ ರಾಜ್ಯದ ಆಡಳಿತ ಯಂತ್ರವನ್ನು ಬಳಸಿಕೊಂಡು ಯುವತಿಯ ಘನತೆಗೆ ಅಪಪ್ರಚಾರ ಮಾಡಿ ಚಾರಿತ್ಯ್ರ ಹರಣ ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

“ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಇಂತಹ ಕೆಟ್ಟ ನಿಲುವು ತೆಗೆದುಕೊಂಡ ಸರ್ಕಾರದ ಮುಖ್ಯಸ್ಥರಿಂದ ಸೂಕ್ಷ್ಮತೆಯನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಅದೇನೇ ಇರಲಿ, ಯುಪಿಯ ಮುಖ್ಯಮಂತ್ರಿ ಮಹಿಳಾ ವಿರೋಧಿ ಚಿಂತನೆಯ ನಾಯಕ. ಅವರು ‘ಮಹಿಳೆಯರು ಸ್ವತಂತ್ರವಾಗಿರಬಾರದು’ ಎಂದು ಹೇಳಿಕೊಂಡಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಕರಣವು ಮೊದಲಿಗೆ, ಒಬ್ಬ ಆರೋಪಿಯು ಯುವತಿಯನ್ನು ಕೊಲ್ಲಲು ಪ್ರಯತ್ನಿಸಿದನೆಂದು ವರದಿಯಾಗಿತ್ತು. ಆದರೆ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಮ್ಯಾಜಿಸ್ಟ್ರೇಟಿಗೆ ನೀಡಿದ ಹೇಳಿಕೆಯ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿದು ಬಂದಿತ್ತು. ಜೊತೆಗೆ ಸಂತ್ರಸ್ತ ಯುವತಿಯೆ ತನ್ನ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಹೆಸರಿಸಿದ್ದರು. ಅಷ್ಟೆ ಅಲ್ಲದೆ ಯುವತಿಯ ಮೃತದೇಹವನ್ನು ಅವರ ಕುಟುಂಬದ ಒಪ್ಪಿಗೆಯಿಲ್ಲದೆ ಪೊಲೀಸರು ಬಲವಂತವಾಗಿ ರಾತ್ರೋರಾತ್ರಿ ಸುಟ್ಟು ಹಾಕಿದ್ದರು.

ಹತ್ರಾಸ್ ದಲಿತ ಯುವತಿಯ ಸಾಮೂಹಿತ ಅತ್ಯಾಚಾರ ಮತ್ತು ಹತ್ಯೆ ಘಟನೆ? ಯಾಕೆ ದೇಶದಾದ್ಯಂತ ಗಮನಸೆಳೆಯಿತು?

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿ ಜಾನುವಾರಿಗೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ. ರಾಜ್ಯದ ಮೇಲ್ಜಾತಿಯಾದ ಠಾಕೂರ್‌ ಸಮುದಾಯಕ್ಕೆ ಸೇರಿದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಎಂಬ ನಾಲ್ವರು ಯುವತಿಯ ಕುತ್ತಿಗೆಗೆ ದುಪ್ಪಟ್ಟಾ ಹಾಕಿ ಎಳೆದೊಯ್ದಿದ್ದಾರೆ. ಇದರಿಂದಾಗಿ ಯುವತಿಯ ಬೆನ್ನು ಹುರಿಗೆ ಗಾಯವಾಗಿತ್ತು. ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು, ಅತ್ಯಾಚಾರ ಯತ್ನವನ್ನು ವಿರೋಧಿಸಿದ ಕಾರಣ ಯುವತಿಯ ಕತ್ತು ಹಿಸುಕಿದ್ದರು, ಈ ವೇಳೆ ಯುವತಿ ನಾಲಿಗೆ ಕತ್ತರಿಸಲ್ಪಟ್ಟಿತ್ತು.

ಇದನ್ನೂ ಓದಿ:  ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಈ ವೇಳೆ ಯುವತಿಯ ಕೂಗು ಕೇಳಿ ಹೊಲಕ್ಕೆ ಬಂದಿದ್ದ ತಾಯಿ ಮೊದಲಿಗೆ ಚಾಂದ್‌ ಪಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿ ಪೊಲೀಸರು ಅವರ ದೂರನ್ನು ಪಡೆಯದೆ, ಅವರನ್ನು ಅವಮಾನಿಸಿದ್ದರು. ಇದಾಗಿ ಸುಮಾರು ಆರು ದಿನಗಳ ನಂತರ ಅಂದರೆ ಸೆಪ್ಟೆಂಬರ್ 20 ರಂದು ಪೊಲೀಸರು ದೂರು ದಾಖಲಿಸಿದ್ದರು. ಸೆಪ್ಟೆಂಬರ್‌ 22 ರಂದು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರು. ಯುವತಿ ಹೇಳಿಕೆ ನೀಡಿ, ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದನ್ನು ವಿರೋಧಿಸಿದ್ದಕ್ಕೆ ಕತ್ತು ಹಿಸುಕಿರುವುದನ್ನು ಉಲ್ಲೇಖಿಸಿದ್ದರು.

ಘಟನೆ ನಡೆದ ದಿನದಂದು ಯುವತಿಯನ್ನು ಅಲಿಗಡದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಹದಗೆಟ್ಟ ನಂತರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಾಕಾರಿಯಾಗದೆ 2020 ರ ಸೆಪ್ಟೆಂಬರ್ 29 ರಂದು ನಿಧನರಾದರು.

ಶವಪರೀಕ್ಷೆಯ ವರದಿಯಲ್ಲಿ, ‘ಗಟ್ಟಿಯಾದ ವಸ್ತುವಿನಿಂದ ಕುತ್ತಿಗೆಯ ಬಳಿಯ ಬೆನ್ನುಮೂಳೆಗೆ ಬಲವಾದ ಏಟು’ ಬಿದ್ದಿದ್ದರಿಂದ ಸಾವಾಗಿದೆ ಎಂದು ದಾಖಲಾಗಿತ್ತು. ಆದರೆ ವೈದ್ಯಕೀಯ ದಾಖಲೆ, “ಅತ್ಯಾಚಾರ ಮತ್ತು ಕತ್ತು ಹಿಸುಕುವಿಕೆ” ಸಾವಿಗೆ ಕಾರಣ ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಸರ್ಕಾರ, ಬಿಜೆಪಿ ಮತ್ತು ಮೇಲ್ಜಾತಿ ಸಂಘಟನೆಗಳು ನಡೆದುಕೊಂಡ ಬಗ್ಗೆ

ದಲಿಯ ಯುವತಿಯ ಅತ್ಯಾಚಾರ ನಡೆದಿದೆ ಎಂದು ತಿಳಿದ ನಂತರವು, ಆಡಳಿತವು ತನಿಖೆ ವಿಳಂಬ ಮಾಡಿರುವ ಬಗ್ಗೆ ದೇಶದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೆ ಅಲ್ಲದೆ ಮೃತಪಟ್ಟ ನಂತರ ಯುವತಿಯ ಮೃತದೇಹವನ್ನು ದೆಹಲಿಯಿಂದ ರಾತ್ರೋರಾತ್ರಿ ತಂದು ಹೆತ್ತವರ ಅನುಮತಿಯಿಲ್ಲದೆ ಪೊಲೀಸರು ಬಲವಂತವಾಗಿ ಸುಟ್ಟು ಹಾಕಿದ್ದರು. ಇದು ಕೂಡಾ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇಷ್ಟೆ ಅಲ್ಲದೆ ಯುವತಿಯ ಕುಟುಂಬವನ್ನು ಸಂದರ್ಶಿಸಲು ಕೂಡಾ ಯಾರಿಗೆ ಅನುಮತಿ ನೀಡಿರಲಿಲ್ಲ. ಅವರ ಮನೆಯ ಸುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಘಟನೆಯನ್ನು ವರದಿ ಮಾಡಲು ಹೊರಟ ಪತ್ರಕರ್ತರನ್ನೂ ಯುಎಪಿಎ ಅಂತಹ ಕರಾಳ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು. ಜೊತೆಗೆ ಕುಟುಂಬವನ್ನು ಬೆದರಿಸುವ ತಂತ್ರವನ್ನೂ ಸರ್ಕಾರ ಮಾಡಿತ್ತು.

ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆಸಿದ ರ್‍ಯಾಲಿಯಲ್ಲಿ ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗಿ!

ಈ ಎಲ್ಲದರ ಮಧ್ಯೆ “ರಾಷ್ಟ್ರೀಯ ಸವರ್ಣ ಪರಿಷತ್” ಎಂಬ ಸಂಘಟನೆ ಆರೋಪಿಗಳ ಬೆಂಬಲಕ್ಕೆ ನಿಂತಿತ್ತು. ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಜೊತೆಗೆ ಈ ಸಭೆಯಲ್ಲಿ ಆರ್‌ಎಸ್‌ಎಸ್, ಕರ್ಣಿ ಸೇನೆ ಮತ್ತು ಬಜರಂಗದಳದಂತಹ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಸದಸ್ಯರು ಕ್ಷತ್ರಿಯ ಮಹಾಸಭಾ, ರಾಷ್ಟ್ರೀಯ ಸವರ್ಣ ಸಂಘಟನೆ ಮುಂತಾದವುಗಳನ್ನು ಒಳಗೊಂಡಂತೆ ವಿವಿಧ ಮೇಲ್ಜಾತಿಯ ಸಂಘಟನೆಗಳ ಭಾಗವಾಗಿದ್ದರು.

ತನಿಖೆಯ ಎಲ್ಲಿವರೆಗೆ ಆಗಿವೆ?

2020 ಡಿಸೆಂಬರ್ 19 ರಂದು, ಸಿಬಿಐ ಹತ್ರಾಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ನಾಲ್ಕು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಲಿಖಿತವಾಗಿ ದಾಖಲಿಸುವುದರಲ್ಲಿ ತೋರಿದ ವಿಳಂಬ ಮತ್ತು ಯುವತಿಯ ವೈದ್ಯಕೀಯ ಪರೀಕ್ಷೆಯಲ್ಲಿ ಯುಪಿ ಪೊಲೀಸರ ಲೋಪದೋಷಗಳನ್ನೂ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...